ಎಫ್ಎಸ್ಎಲ್ ಅಧಿಕಾರಿ ಗೈರು; 10 ಸಾ. ರೂ. ವಸೂಲಿಗೆ ಆದೇಶ
Team Udayavani, Oct 23, 2018, 11:49 AM IST
ಉಡುಪಿ: ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಾಕ್ಷಿಗಳ ವಿಚಾರಣೆ ನಡೆಸುತ್ತಿರುವ ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ವೆಂಕಟೇಶ ನಾಯ್ಕ ಟಿ. ಅವರು ವಿಚಾರಣೆಗೆ ಸತತವಾಗಿ ಗೈರು ಹಾಜರಾದ ಎಫ್ಎಸ್ಎಲ್(ವಿಧಿವಿಜ್ಞಾನ ಪ್ರಯೋಗಾಲಯ) ಅಧಿಕಾರಿಯಿಂದ 10 ಸಾ.ರೂ. ಬಾಂಡ್ ಮೊತ್ತವನ್ನು ಅವರ ಸಂಬಳದಿಂದ ಸರಕಾರಕ್ಕೆ ಪಡೆದುಕೊಳ್ಳುವಂತೆ ಆದೇಶ ನೀಡಿದ್ದಾರೆ.
ಸದ್ಯ ಜೈಲಿನಲ್ಲಿರುವ ರಾಜೇಶ್ವರಿ ಶೆಟ್ಟಿಗೆ (ಭಾಸ್ಕರ ಶೆಟ್ಟಿ ಅವರ ಪತ್ನಿ) ಸುಪ್ರೀಂ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ತನಿಖಾಧಿಕಾರಿಗಳು ದೋಷಾರೋಪಣ ಪಟ್ಟಿಯಲ್ಲಿ ಉಲ್ಲೇಖೀಸಿರುವ ಎಲ್ಲ 36 ಸಾಕ್ಷಿಗಳ ವಿಚಾರಣೆಯನ್ನು 6 ತಿಂಗಳೊಳಗೆ ಪೂರ್ಣಗೊಳಿಸಿದ ಬಳಿಕ ಜಾಮೀನು ಮೇಲೆ ಬಿಡುಗಡೆ ಮಾಡುವಂತೆ ಎ.23ರಂದು ಆದೇಶಿಸಿತ್ತು.
ಅದರಂತೆ 35 ಸಾಕ್ಷಿಗಳ ವಿಚಾರಣೆ ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ಎಫ್ಎಸ್ಎಲ್ನ ಡಿಎನ್ಎ ಅಧಿಕಾರಿ ಪುರುಷೋತ್ತಮ ಅವರ ವಿಚಾರಣೆ ಮಾತ್ರ ಬಾಕಿ ಇತ್ತು. ಅವರು ಈ ಹಿಂದೆ ಎರಡು ಬಾರಿ ಗೈರು ಹಾಜರಾಗಿದ್ದು, ಅವರಿಗೆ ಜಾಮೀನು ಸಹಿತ ವಾರಂಟ್ ಜಾರಿಯಾಗಿತ್ತು.
ಬೆನ್ನುನೋವಿನ ಕಾರಣ
ಬೆನ್ನು ನೋವಿನ ಕಾರಣ ಅವರು ಬೆಂಗಳೂರಿನಿಂದ ಉಡುಪಿಗೆ ಪ್ರಯಾಣ ಮಾಡಲು ಸಾಧ್ಯವಿಲ್ಲ ಎಂದು ವಿಶೇಷ ಸರಕಾರಿ ಅಭಿಯೋಜಕರು ನ್ಯಾಯಾಲಯಕ್ಕೆ ತಿಳಿಸಿದರು. ಆದರೆ ನ್ಯಾಯಾಧೀಶರು ಇದರಿಂದ ತೃಪ್ತರಾಗಲಿಲ್ಲ. ಮೂರು ಬಾರಿ ಗೈರು ಹಾಜರಾಗಿರುವ ಹಿನ್ನೆಲೆಯಲ್ಲಿ ಅವರ ಸಂಬಳದಿಂದ 10 ಸಾ. ರೂ. ವಸೂಲಿ ಮಾಡುವಂತೆ ನ್ಯಾಯಾಧೀಶರು ಆದೇಶಿಸಿದರು. ಮುಂದಿನ ವಿಚಾರಣೆಯನ್ನು ಅ.26ಕ್ಕೆ ನಿಗದಿ ಪಡಿಸಿದರು.
ಸುಪ್ರೀಂ ಕೋರ್ಟ್ ನಿಗದಿ ಪಡಿಸಿರುವ ಅವಧಿ (6 ತಿಂಗಳು) ಮೀರುವುದರಿಂದ ಜಿಲ್ಲಾ ನ್ಯಾಯಾಲಯವು ದಿನಾಂಕ ವಿಸ್ತರಣೆಗಾಗಿ ಸುಪ್ರೀಂ ಕೋರ್ಟಿಗೆ ಮನವಿ ಸಲ್ಲಿಸಬೇಕಾಗಿದೆ. ಪ್ರಕರಣದ ಆರೋಪಿಗಳಾದ ರಾಜೇಶ್ವರಿ ಶೆಟ್ಟಿ, ನವನೀತ ಶೆಟ್ಟಿ ಮತ್ತು ನಿರಂಜನ್ ಭಟ್ ಅವರನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ಆರೋಪಿಗಳ ಪರ ಅರುಣ್ ಬಂಗೇರ ಮತ್ತು ಟಿ.ಎನ್. ಪೂಜಾರಿ ವಾದಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್