ರೈಲಿನಲ್ಲಿ  1.65 ಕೋ.ರೂ. ಸಾಗಾಟ


Team Udayavani, Nov 3, 2018, 11:28 AM IST

crime.jpg

ಉಡುಪಿ: ಮುಂಬಯಿಯಿಂದ ಎರ್ನಾಕುಲಂಗೆ ತೆರಳುತ್ತಿದ್ದ ನೇತ್ರಾವತಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಸೂಕ್ತ ದಾಖಲೆಗಳಿಲ್ಲದೆ ಸುಮಾರು 1.65 ಕೋ.ರೂ. ನಗದು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಮತ್ತು ಅದನ್ನು ಪಡೆಯಬೇಕಿದ್ದ ಓರ್ವನನ್ನು ಶುಕ್ರವಾರ ರೈಲ್ವೇ ರಕ್ಷಣಾ ದಳ ಪೊಲೀಸರು ವಶಕ್ಕೆ ಪಡೆದು ಐಟಿ ಇಲಾಖೆಗೆ ಹಸ್ತಾಂತರಿಸಿದ್ದಾರೆ.

ಬ್ಯಾಗ್‌ನಲ್ಲಿತ್ತು ಹಣ
ರಾಜಸ್ಥಾನ ಮೂಲದ ಪ್ರಕಾಶ್‌ (28), ಗಣೇಶ್‌ (23) ಮತ್ತು ಜಸ್ವಂತ್‌ ಸಿಂಗ್‌ (38) ವಶದಲ್ಲಿರುವವರು. ಬೆಳಗ್ಗೆ 3 ಗಂಟೆಯ ಸುಮಾರಿಗೆ ಕುಮಟಾದಲ್ಲಿ ರೈಲು ಏರಿದ ಇವರನ್ನು ರೈಲ್ವೇ ರಕ್ಷಣಾ ದಳದ ಎಸ್‌ಐ ಸಂತೋಷ್‌ ಗಾಂವ್ಕರ್‌ ನೇತೃತ್ವದಲ್ಲಿ ಸಿಬಂದಿ ಮಹಮ್ಮದ್‌ ಮತ್ತು ವೇಣು ತಂಡ ತಪಾಸಣೆ ನಡೆಸಿತು. ಆಗ ಸಮರ್ಪಕ ಉತ್ತರ ಸಿಗಲಿಲ್ಲ. ರೈಲು ಉಡುಪಿ ತಲುಪಿದಾಗ ಅವರು ಮಲಗಿದ್ದ ಜಾಗದಲ್ಲಿ ಪತ್ತೆ ಯಾದ ಎರಡು ಬ್ಯಾಗ್‌ ತೆರೆದಾಗ ನಗದು ಹಣ ಪತ್ತೆಯಾಯಿತು. 

ಸುರತ್ಕಲ್‌ನಲ್ಲಿ  ಇಳಿಸಿದರು!
ಬ್ಯಾಗ್‌ನಲ್ಲಿ ನಗದು ಇರುವುದು ಖಚಿತವಾದರೂ ಉಡುಪಿಯಲ್ಲಿ ರೈಲು ಕೇವಲ 2 ನಿಮಿಷ ನಿಲ್ಲುವುದರಿಂದ ಇಳಿಸಲು ಸಾಧ್ಯವಾಗಲಿಲ್ಲ. ಸುರತ್ಕಲ್‌ನಲ್ಲಿ ಇಳಿಸಿ ಸ್ಟೇಷನ್‌ ಮಾಸ್ಟರ್‌ ಸಮ್ಮುಖ ಬ್ಯಾಗ್‌ ತೆರೆದು ಪಂಚ ನಾಮೆ ಮಾಡಿಸಿದರು. ಬಳಿಕ ಉಡುಪಿಗೆ ಕರೆತಂದು ಐಟಿ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಐಟಿ ಅಧಿಕಾರಿಗಳು ರೈಲ್ವೇ ರಕ್ಷಣಾ ದಳ ಕಚೇರಿಯಲ್ಲಿ ವಿಚಾರಣೆ ಆರಂಭಿಸಿದ್ದು, ತಡರಾತ್ರಿ ವರೆಗೂ ನಡೆದಿತ್ತು.  ಇವರಿಬ್ಬರಲ್ಲಿ ಗಾಂಜಾ ಇರಬಹುದೆಂಬ ಶಂಕೆಯಿತ್ತು. ಆದರೆ ನೋಟುಗಳ ಕಂತೆ ಪತ್ತೆಯಾಗಿದೆ. 

ಚುನಾವಣೆಗೆ ಬಳಕೆ ಶಂಕೆ
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತದಾನ ಶನಿವಾರ ನಡೆ ಯಲಿರುವುದರಿಂದ ಮತದಾರರಿಗೆ ಹಂಚಲು ಈ ಹಣ ತಂದಿರಬಹುದೇ ಎಂಬ ಶಂಕೆ ವ್ಯಕ್ತವಾಗಿದ್ದರಿಂದ ತಹಶೀಲ್ದಾರ್‌, ಚುನಾವಣಾಧಿಕಾರಿಗಳಿಗೂ ಮಾಹಿತಿ ನೀಡಲಾಗಿತ್ತು.

ಕಣ್ಣೂರಿಗೆ ಸಾಗಾಟ?
ಈ ಹಣವನ್ನು ಮೂಲತಃ ರಾಜಸ್ಥಾನದ, 15 ವರ್ಷಗಳಿಂದ ಕಣ್ಣೂರಿನಲ್ಲಿ ನೆಲೆಸಿರುವ ಜಸ್ವಂತ್‌ ಸಿಂಗ್‌ ಎಂಬಾತನಿಗೆ ನೀಡಲು ಕೊಂಡೊಯ್ಯಲಾಗುತ್ತಿತ್ತು. ಹಣ ಕ್ಕಾಗಿ ಜಸ್ವಂತ್‌ ಕಾಯುತ್ತಿದ್ದ ಎನ್ನಲಾಗಿದೆ. ವಶವಾಗಿರುವ ಇಬ್ಬರ ಜತೆಗೆ ಆತ ನಿರಂತರ ಮೊಬೈಲ್‌ ಸಂಪರ್ಕದಲ್ಲಿದ್ದ. ಪೊಲೀಸರು ಆತನನ್ನು ಉಪಾಯ ದಿಂದ ಉಡುಪಿ ರೈಲ್ವೇ ನಿಲ್ದಾಣಕ್ಕೆ ಕರೆಸಿಕೊಂಡರು ಎನ್ನಲಾಗಿದೆ.

ಹವಾಲಾ ಜಾಲ?
ವಶದಲ್ಲಿರುವವರು ಹಣದ ಬಗ್ಗೆ ಸದ್ಯ ಸೂಕ್ತ ದಾಖಲೆಗಳನ್ನು ನೀಡಿಲ್ಲ. ಇದು ಹವಾಲಾ ಹಣವಾಗಿರಬಹುದೆಂಬ ಶಂಕೆ ಕೂಡ ಐಟಿ ಅಧಿಕಾರಿಗಳಲ್ಲಿದೆ ಎಂಬ ಮಾಹಿತಿ ಲಭ್ಯ ವಾಗಿದೆ. ಇನ್ನಷ್ಟು ಮಂದಿ ಇದ್ದು, ತಪ್ಪಿಸಿ ಕೊಂಡಿರ ಬಹುದೇ ಎಂಬ ಸಂದೇಹ ವ್ಯಕ್ತವಾಗಿದೆ.ಉಡುಪಿ ರೈಲ್ವೇ ರಕ್ಷಣಾ ದಳದವರು ವಿವಿಧ ವಿಭಾಗಗಳ ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ಐಟಿ ಅಧಿಕಾರಿಗಳು ರಾಜಸ್ಥಾನದಲ್ಲೂ ವಿಚಾರಣೆ ಆರಂಭಿಸಿದ್ದಾರೆ ಎಂದು ಗೊತ್ತಾಗಿದೆ. 

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.