ಜವಾಬ್ದಾರಿ ಹಸ್ತಾಂತರಿಸಿದ ಅದಮಾರು ಹಿರಿಯ ಯತಿ


Team Udayavani, Nov 11, 2018, 9:28 AM IST

yati.jpg

ಉಡುಪಿ: ಶ್ರೀ ಅದಮಾರು ಮಠದ ಹಿರಿಯ ಯತಿ ಶ್ರೀವಿಶ್ವ ಪ್ರಿಯತೀರ್ಥ ಶ್ರೀಪಾದರು ಮಠದ ಸಕಲ ಜವಾಬ್ದಾರಿಗಳನ್ನು ಕಿರಿಯ ಸ್ವಾಮೀಜಿ ಶ್ರೀ ಈಶಪ್ರಿಯತೀರ್ಥರಿಗೆ ಹಸ್ತಾಂತರಿಸಿದ್ದಾರೆ. ಲೌಕಿಕದಲ್ಲಿ ನಿವೃತ್ತಿಯ ವಯಸ್ಸು 60 ವರ್ಷ, ವಿಶ್ವಪ್ರಿಯತೀರ್ಥ ಶ್ರೀಪಾದರೂ ಇದೇ ವಯಸ್ಸಿಗೆ ಕಾಲಿಡುವಾಗ ಅಧಿಕಾರವನ್ನು ಹಸ್ತಾಂತರಿಸಿರುವುದು ಗಮನಾರ್ಹ.

ಅದಮಾರು ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸ್ಥಾನವನ್ನು ತಾವಿರಿಸಿಕೊಂಡು ಕಿರಿಯ ಶ್ರೀಗಳನ್ನು ಕಾರ್ಯಾಧ್ಯಕ್ಷರಾಗಿ ನೇಮಿಸಿದ್ದಾರೆ. ಸದ್ಯ ಇಬ್ಬರೂ ಶಿಕ್ಷಣ ಸಂಸ್ಥೆಗಳ ಜವಾಬ್ದಾರಿಗಳನ್ನು ನಿರ್ವಹಿಸಲಿದ್ದು, ಕ್ರಮೇಣ ಇದನ್ನೂ ಕಿರಿಯ ಶ್ರೀಗಳಿಗೆ ಹಸ್ತಾಂತರಿಸುವ ಇರಾದೆಯನ್ನು ಶ್ರೀವಿಶ್ವಪ್ರಿಯತೀರ್ಥರು ಹೊಂದಿದ್ದಾರೆ. 

ಮಠದ ಆಗುಹೋಗುಗಳು, ಹಣಕಾಸು ವ್ಯವಹಾರ, ಪೂಜೆ, ಭಕ್ತರ ಭೇಟಿ ಇತ್ಯಾದಿ ಜವಾಬ್ದಾರಿಗಳನ್ನು ಕಿರಿಯ ಶ್ರೀಗಳಿಗೆ ಹಸ್ತಾಂತರಿಸಿದ್ದೇವೆ ಎಂದು ಶ್ರೀವಿಶ್ವಪ್ರಿಯತೀರ್ಥರು ಶನಿವಾರ ಸುದ್ದಿಗಾರರಿಗೆ ತಿಳಿಸಿದರು. 

ಯೋಗ್ಯ ಶಿಷ್ಯನನ್ನು ಕರುಣಿಸಬೇಕೆಂದು ಶ್ರೀ ಅನಂತೇಶ್ವರನಲ್ಲಿ ಪ್ರಾರ್ಥಿಸುತ್ತಿದ್ದೆ. ಅದನ್ನು ದೇವರು ಈಡೇರಿಸಿದ್ದಾನೆ. ಈಗ ಲೌಕಿಕ- ವೈದಿಕ ಎರಡೂ ವಿದ್ಯೆಗಳನ್ನು ಅರಿತುಕೊಳ್ಳಬೇಕಾದ ಅಗತ್ಯವಿದೆ. ಲೌಕಿಕರಿಗೂ ಆಧ್ಯಾತ್ಮಿಕ ಸಂದೇಶವನ್ನು ತಿಳಿಸಬೇಕಾದರೆ ಲೌಕಿಕ ಜ್ಞಾನವೂ ಬೇಕು. ನಮ್ಮ ಶಿಷ್ಯರು ಇವೆರಡನ್ನೂ ಕರಗತ ಮಾಡಿ ಕೊಂಡಿದ್ದಾರೆ. ಸಮಾಜಸೇವೆಗಾಗಿ ನಮ್ಮ ಗುರುಗಳು ಸ್ಥಾಪಿಸಿದ ಶಿಕ್ಷಣ ಸಂಸ್ಥೆಗಳಲ್ಲಿ ಏಕಕಾಲದಲ್ಲಿ ಕಾರ್ಯಕ್ರಮ ನಡೆಯುವುದಿದೆ. ಹೀಗಾಗಿ ಎಲ್ಲದಕ್ಕೂ ಹೋಗಲು ಆಗುತ್ತಿರಲಿಲ್ಲ. ಇನ್ನು ಮುಂದೆ ನಾವಿಬ್ಬರೂ ಹಂಚಿಕೊಂಡು ನಿರ್ವಹಿಸುತ್ತೇವೆ. ನಾವು ದೈಹಿಕವಾಗಿ ಸಮರ್ಥರಿರುವಾಗಲೇ ಶಿಷ್ಯರಿಗೆ ಜವಾಬ್ದಾರಿ ನೀಡಿ, ಅವರದನ್ನು ಸಮರ್ಥವಾಗಿ ನಿರ್ವಹಿಸುವುದನ್ನು ಕಾಣಬೇಕೆನ್ನುವುದು ನಮ್ಮ ಇರಾದೆ ಎಂದು ಶ್ರೀವಿಶ್ವಪ್ರಿಯತೀರ್ಥರು ತಿಳಿಸಿದ್ದಾರೆ. 

ಪರ್ಯಾಯ ಪೂಜೆ ಯಾರಿಂದ?
ಮುಂದಿನ ಪರ್ಯಾಯ ಪೂಜೆಯನ್ನು ಯಾರು ಮಾಡುತ್ತಾರೆಂಬ ಪ್ರಶ್ನೆಗೆ ಉತ್ತರಿಸಿ, ಆ ಬಗ್ಗೆ ಯಾವ ನಿರ್ಧಾರವನ್ನೂ ಮಾಡಿಲ್ಲ. ಮುಂದಿ ನದು ನಮ್ಮ ಪರ್ಯಾಯ, ಜತೆಯಾಗಿ ನಿರ್ವಹಿಸುವೆವು  ಎಂದರು.  ಹಿಂದೆಯೂ ಗುರುಗಳು ಜವಾಬ್ದಾರಿಯನ್ನು ತೆಗೆದುಕೊಳ್ಳಲು ಹೇಳಿದ್ದರು. ನಾವೇ ಬೇಡವೆಂದು ಹೇಳಿದ್ದೆವು. ಅಧಿಕಾರ “ನಮಗೆ ಬೇಡ’ ಎಂಬ ತ್ಯಾಗಭಾವವಿದ್ದರೆ ಅದು ಆದರ್ಶ. ಈಗ ಒತ್ತಾಯದಿಂದ ಒಪ್ಪಿದ್ದೇವೆ. ಗುರುಗಳಲ್ಲಿ ಕೇಳಿಯೇ ನಿರ್ಧಾರ ತಳೆಯುತ್ತೇವೆ ಎಂದು ಕಿರಿಯ ಯತಿಗಳು ತಿಳಿಸಿದರು. 

* 1972ರಲ್ಲಿ ಶ್ರೀ ಅದಮಾರು ಮಠದ 31ನೆಯ ಯತಿ ಶ್ರೀ ವಿಬುಧೇಶ ತೀರ್ಥರು ತಮ್ಮ ಎರಡನೆಯ ಪರ್ಯಾಯದಲ್ಲಿ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರನ್ನು ಉತ್ತರಾಧಿಕಾರಿಯನ್ನಾಗಿ ನಿಯೋಜಿಸಿದರು. 
* 2014ರ ಜೂ. 19ರಂದು ಕುಂಜಾರು ದೇವಸ್ಥಾನದಲ್ಲಿ ಶ್ರೀವಿಶ್ವಪ್ರಿಯ ತೀರ್ಥರು 33ನೆಯ ಯತಿ ಶ್ರೀಈಶಪ್ರಿಯತೀರ್ಥರನ್ನು ಉತ್ತರಾಧಿಕಾರಿ ಯಾಗಿ ನಿಯೋಜಿಸಿದರು. 
* ಶ್ರೀವಿಶ್ವಪ್ರಿಯತೀರ್ಥರಿಗೆ ಈಗ 60 ವರ್ಷ, ಶ್ರೀಈಶಪ್ರಿಯತೀರ್ಥರಿಗೆ 33 ವರ್ಷ. ಶ್ರೀವಿಶ್ವಪ್ರಿಯತೀರ್ಥರು ಶ್ರೀಕೃಷ್ಣಮಠದಲ್ಲಿ ಪ್ರಥಮ ಪರ್ಯಾಯ ನಿರ್ವಹಿಸಿದಾಗ ಅವರಿಗೆ 33 ವರ್ಷ ವಯಸ್ಸಾಗಿತ್ತು. 
* ಎಂಜಿನಿಯರಿಂಗ್‌ ಮಾಡಿರುವ ಉಡುಪಿ ಅಷ್ಟಮಠಗಳ ಪ್ರಥಮ ಯತಿ ಶ್ರೀಈಶಪ್ರಿಯತೀರ್ಥರು. 

ಅಧಿಕಾರದ ಜವಾಬ್ದಾರಿಯನ್ನು ನಿರ್ವಹಿಸಲು ನೀನೊಬ್ಬ ಇದ್ದೀಯಲ್ಲ’ ಎಂದು ಧರ್ಮರಾಜನಿಗೆ ಭೀಮ ಹೇಳಿರುವುದು ಮಹಾಭಾರತದಲ್ಲಿದೆ, “ಅಧಿಕಾರವನ್ನು ನೀನೇ ನಡೆಸು’ ಎಂದು ರಾಮ ಮತ್ತು ಭರತ ಹೇಳಿರುವುದು ರಾಮಾಯಣದಲ್ಲಿದೆ. 
ಅದಮಾರು ಮಠದ ಉಭಯ ಶ್ರೀಗಳು

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.