ಪಡುಬೆಳ್ಳೆ : ಬೃಹತ್‌ ಶಿಲಾಯುಗದ ಸಮಾಧಿ ಪತ್ತೆ


Team Udayavani, Nov 13, 2018, 2:10 AM IST

shilayuga-12-11.jpg

ಕಾಪು: ಮೂಡುಬೆಳ್ಳೆ ಗ್ರಾಮ ಪಂಚಾಯತ್‌ಗೆ ಒಳಪಟ್ಟ ಪಡುಬೆಳ್ಳೆ ಹೊಸಊರು (ಹೊಸ ಒಕ್ಕಲು) ಎಂಬ ಪ್ರದೇಶದಲ್ಲಿ ಬೃಹತ್‌ ಶಿಲಾಯುಗ ಕಾಲಕ್ಕೆ ಸಂಬಂಧಪಟ್ಟ 4 ಕಂಡಿಕೋಣೆ ಸಮಾಧಿಯ ಭಗ್ನ ಅವಶೇಷಗಳನ್ನು ಉಡುಪಿ ಪ್ರಾಚ್ಯ ಸಂಚಯ ಸಂಶೋಧನಾ ಕೇಂದ್ರದ ಮುಖ್ಯ ಸಂಶೋಧಕ ಸುಭಾಸ್‌ ನಾಯಕ್‌ ಬಂಟಕಲ್ಲು ಹಾಗೂ ಕ್ರಾಸ್‌ ಲ್ಯಾಂಡ್‌ ಕಾಲೇಜಿನ ಇತಿಹಾಸ ಮತ್ತು ಪ್ರಾಕ್ತನ ಶಾಸ್ತ್ರ ಉಪನ್ಯಾಸಕ ಶ್ರುತೇಶ್‌ ಆಚಾರ್ಯ ಮೂಡುಬೆಳ್ಳೆ ಪತ್ತೆ ಮಾಡಿರುತ್ತಾರೆ.

ಸ್ಥಳೀಯ ಇತಿಹಾಸ ಆಸಕ್ತರಾದ ರಿಚರ್ಡ್‌ ದಾಂತಿ ಅವರು ಹಿಂದೆ ಇಲ್ಲಿ ಕ್ಷೇತ್ರ ಕಾರ್ಯ ಕೈಗೊಂಡಿದ್ದು, ಇವರು ಈ ಅವಶೇಷಗಳನ್ನು ಜೈನ ಬಸದಿಯ ಅವಶೇಷಗಳೆಂದು ಪರಿಗಣಿಸಿದ್ದರು. ಆದರೆ ಇತ್ತೀಚೆಗೆ ಸುಭಾಸ್‌ ನಾಯಕ್‌ ಬಂಟಕಲ್ಲು, ಶ್ರುತೇಶ್‌ ಆಚಾರ್ಯ ಮೂಡುಬೆಳ್ಳೆ ಅವರು ಈ ಪ್ರದೇಶದಲ್ಲಿ ಕ್ಷೇತ್ರ ಕಾರ್ಯ ಶೋಧನೆ ಕೈಗೊಂಡಾಗ ಈ ಅವಶೇಷಗಳನ್ನು ಬೃಹತ್‌ ಶಿಲಾಯುಗದ ಸಮಾಧಿ ನೆಲೆಯೆಂದು ಗುರುತಿಸಿದ್ದಾರೆ.

ಬೃಹತ್‌ ಶಿಲಾಯುಗ ಕಾಲದಲ್ಲಿ ವಿವಿಧ ಮಾದರಿಯ ಸಮಾಧಿಗಳನ್ನು ಗುರುತಿಸಬಹುದಾಗಿದ್ದು, ಈ ನೆಲೆಯಲ್ಲಿ ಸುಮಾರು 4 ಕಂಡಿಕೋಣೆ ಸಮಾಧಿಯ ಭಗ್ನ ಅವಶೇಷಗಳು ಕಂಡು ಬಂದಿವೆ. ಈ ಕಲ್ಲು ಚಪ್ಪಡಿಗಳನ್ನು ಪೂರ್ವ – ಪಶ್ಚಿಮ ಹಾಗೂ ಉತ್ತರ ದಕ್ಷಿಣಕ್ಕೆ ಚೌಕಾಕಾರವಾಗಿ ನಿರ್ಮಾಣ ಮಾಡಲಾಗಿದೆ. ಇಲ್ಲಿ ಹೆಚ್ಚಿನ ಕ್ಷೇತ್ರ ಕಾರ್ಯವನ್ನು ಕೈಗೊಂಡಲ್ಲಿ ಇನ್ನೂ ಹೆಚ್ಚಿನ ಮಾಹಿತಿಯನ್ನು ಕಲೆ ಹಾಕಬಹುದಾಗಿದೆ. ಸ್ಥಳೀಯ ಇತಿಹಾಸ ಆಸಕ್ತರಾದ ರಿಚರ್ಡ್‌ ದಾಂತಿ ಹಾಗೂ ಉಡುಪಿ ಪ್ರಾಚ್ಯ ಸಂಚಯ ಸಂಶೋಧನ ಕೇಂದ್ರದ ಇತಿಹಾಸ ಮತ್ತು ಜಾನಪದ ವಿದ್ವಾಂಸ ಎಸ್‌.ಎ. ಕೃಷ್ಣಯ್ಯ ಅವರು ಇಲ್ಲಿನ ಕ್ಷೇತ್ರ ಕಾರ್ಯಕ್ಕೆ ಸಹಕಾರ ನೀಡಿದ್ದಾರೆ.

ವಿವಿಧೆಡೆ ಪತ್ತೆ
ಇದೇ ಮಾದರಿಯ ಸಮಾಧಿಗಳನ್ನು ಪಳ್ಳಿ, ಬೊರ್ಕಟ್ಟೆ, ಮೂಡುಕೊಣಾಜೆ, ಕರ್ಕುಂಜೆ ಸ್ಥಳಗಳಲ್ಲಿ ನೋಡಬಹುದಾಗಿದ್ದು ಇದರ ಕಾಲಮಾನವನ್ನು ಕ್ರಿ. ಪೂ. 1100ರಿಂದ ಕ್ರಿ. ಶ. 200ರವರೆಗಿನದ್ದು ಎಂದು ಗುರುತಿಸಬಹುದಾಗಿದೆ.

ಟಾಪ್ ನ್ಯೂಸ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.