ಶಿರ್ವ ಶ್ರೀ ಮಹಾಲಸಾ ದೇವೀ ಸನ್ನಿಧಿ: ವಿಶ್ವರೂಪ ದರ್ಶನ
Team Udayavani, Nov 19, 2018, 2:30 AM IST
ಶಿರ್ವ: ಕಾಶೀಮಠ ಶಿರ್ವ ಶ್ರೀ ಮಹಾಲಸಾ ನಾರಾಯಣೀ ದೇವೀ ಸನ್ನಿಧಿಯಲ್ಲಿ ಕಾರ್ತಿಕ ಮಾಸದಲ್ಲಿ ವರ್ಷಂಪ್ರತಿ ನಡೆಯುವ ವಿಶ್ವರೂಪ ದರ್ಶನ ಸೇವೆಯ ಸಹಸ್ರ ಹಣತೆಗಳ ದೀಪಾಲಂಕಾರ ವೈಭವವು ರವಿವಾರ ಬೆಳಗಿನ ಜಾವ ಗಂಟೆ 5.00ಕ್ಕೆ ನೆರವೇರಿತು.
ಪ್ರಾತಃಕಾಲ ಭಜನ ಮಂಡಳಿ ವತಿಯಿಂದ ಭಜನೆ ಸೇವೆ ನಡೆದು 5 ರಿಂದ ದೀಪಾಲಂಕಾರ, ಉಷಃಕಾಲದ ಜಾಗರ ಪೂಜೆ ಮೊದಲಾದ ಧಾರ್ಮಿಕ ಕಾರ್ಯಕ್ರಮದ ವಿಧಿವಿಧಾನಗಳು ದೇವಸ್ಥಾನದ ಪ್ರಧಾನ ಅರ್ಚಕ ರಘುರಾಮ್ ಭಟ್ ಅವರ ನೇತೃತ್ವದಲ್ಲಿ ನಡೆಯಿತು. ಕಾರ್ತಿಕ ಮಾಸದಲ್ಲಿ ಸೂರ್ಯೋದಯಕ್ಕೆ ಮುನ್ನ ದೀಪಾರಾಧನೆ ಮಾಡಿದರೆ ಸಕಲ ಇಷ್ಟಾರ್ಥ ಸಿದ್ಧಿಯಾಗುತ್ತದೆ ಎಂಬ ನಂಬಿಕೆಯಿಂದ ಭಕ್ತರು ಸಹಸ್ರಾರು ಹಣತೆಗಳನ್ನು ಉರಿಸಿ ದೇವರ ಪ್ರಸಾದ ಸ್ವೀಕರಿಸಿದರು.
ದೇವಸ್ಥಾನದ ಆಡಳಿತ ಮಂಡಳಿಯ ಕಾರ್ಯದರ್ಶಿ ಚಿದಾನಂದ ಪೈ, ಕೋಶಾಧಿಕಾರಿ ಉದಯ ಕೋದಂಡ ಶೆಣೈ, ಸದಸ್ಯರಾದ ರಾಮದಾಸ್ ಶೆಣೈ,ನವೀನ್ ಶೆಣೈ, ಶ್ರೀ ಮಹಾಲಸಾ ನಾರಾಯಣೀ ಭಜನ ಮಂಡಳಿಯ ಅಧ್ಯಕ್ಷ ಜಿ. ಶ್ರೀನಿವಾಸ ಶೆಣೈ ಮತ್ತು ಸದಸ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್