ಶ್ರೀಕೃಷ್ಣಮಠದಲ್ಲಿ  ಸಂಭ್ರಮದ ಲಕ್ಷದೀಪೋತ್ಸವ ಆರಂಭ


Team Udayavani, Nov 21, 2018, 12:35 PM IST

lakshadeepa.png

ಉಡುಪಿ: ಶ್ರೀಕೃಷ್ಣಮಠದಲ್ಲಿ ಪರ್ಯಾಯ ಶ್ರೀಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರ ನೇತೃತ್ವದಲ್ಲಿ ಮಂಗಳವಾರ ಉತ್ಥಾನ ದ್ವಾದಶಿಯಂದು ನಾಲ್ಕು ದಿನಗಳ ಸಂಭ್ರಮದ ಲಕ್ಷದೀಪೋತ್ಸವ ಆರಂಭಗೊಂಡಿತು. 

ಸೋಮವಾರ ಏಕಾದಶಿಯಾದ ಕಾರಣ ಬೆಳಗ್ಗೆ ಬೇಗ ಮಹಾಪೂಜೆ ನಡೆಯಿತು. ತಿರುಮಲ ತಿರುಪತಿ ದೇವಸ್ಥಾನ ದಾಸ ಸಾಹಿತ್ಯ ಪ್ರಾಜೆಕ್ಟ್ ಮತ್ತು ಮಂತ್ರಾಲಯದ ಗುರುಸಾರ್ವಭೌಮ ದಾಸ ಸಾಹಿತ್ಯ ಪ್ರಾಜೆಕ್ಟ್ ಮತ್ತು ಜಿಲ್ಲಾ ಭಜನ ಮಂಡಳಿಗಳ ಒಕ್ಕೂಟದ ಭಜನ ಮಂಡಳಿಗಳ ಸದಸ್ಯರು ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡು ನಾಮ ಸಂಕೀರ್ತನೆ ನಡೆಸಿಕೊಟ್ಟರು. ಅಪರಾಹ್ನ ರಥಬೀದಿಯಲ್ಲಿ ನಿರ್ಮಿಸಿದ ಅಟ್ಟಣಿಗೆಗಳಲ್ಲಿ ಹಣತೆಗಳಿಗೆ ಮುಹೂರ್ತವನ್ನು (ಗೋಮಯದ ಮೇಲೆ ಹಣತೆ ಇಟ್ಟು) ಪರ್ಯಾಯ ಶ್ರೀಪಲಿಮಾರು, ಶ್ರೀಪೇಜಾವರ ಮತ್ತು ಶ್ರೀಅದಮಾರು ಕಿರಿಯ ಶ್ರೀಪಾದರು ನಡೆಸಿದರು. ಮಧ್ವ ಸರೋವರದಲ್ಲಿ ನಡೆದ ತುಳಸೀ ಪೂಜೆ, ಕ್ಷೀರಾಬ್ಧಿ ಪೂಜೆಯಲ್ಲಿ ಶ್ರೀಪಲಿಮಾರು, ಶ್ರೀಕೃಷ್ಣಾಪುರ, ಶ್ರೀಅದಮಾರು ಉಭಯ ಶ್ರೀಪಾದರು, ಶ್ರೀಪೇಜಾವರ ಕಿರಿಯ, ಶ್ರೀಕಾಣಿಯೂರು ಶ್ರೀಪಾದರು ಪಾಲ್ಗೊಂಡರು. ಈ ಸಂದರ್ಭ ಭಜನ ಮಂಡಳಿಗಳ ಸದಸ್ಯರು ಮಧ್ವ ಸರೋವರದ ಸುತ್ತಲೂ ಕುಳಿತು ಏಕಕಂಠದಲ್ಲಿ ಭಜನೆಗಳನ್ನು ಹಾಡಿದರು. 

ರಾತ್ರಿ ವೇಳೆ ಸಾವಿರಾರು ಮಣ್ಣಿನ ಹಣತೆಗಳಲ್ಲಿ ಬೆಳಕು ಕಾಣುವಾಗ ತೆಪ್ಪೋತ್ಸವ ಸಹಿತ ರಥೋತ್ಸವ ನಡೆಯಿತು. ರಥಬೀದಿ ಸುತ್ತಲೂ ಲಕ್ಷದೀಪೋತ್ಸವವನ್ನು ನೋಡಲು ಜನಜಂಗುಳಿ ಸೇರಿತ್ತು. 

ಮಂಗಳವಾರ ಲಕ್ಷ ದೀಪೋತ್ಸವದಲ್ಲಿ ಎರಡು ರಥಗಳಲ್ಲಿ ಉತ್ಸವ ಮೂರ್ತಿಗಳನ್ನು ಇಟ್ಟು ಪೂಜಿಸಲಾಯಿತು. ಒಂದು ರಥದಲ್ಲಿ ಶ್ರೀಕೃಷ್ಣ, ಮುಖ್ಯಪ್ರಾಣ ದೇವರ ಉತ್ಸವಮೂರ್ತಿ ಮತ್ತು ಇನ್ನೊಂದು ರಥದಲ್ಲಿ ಶ್ರೀಅನಂತೇಶ್ವರ ಮತ್ತು ಚಂದ್ರಮೌಳೀಶ್ವರ ಉತ್ಸವ ಮೂರ್ತಿಗಳನ್ನು ಇರಿಸಿ ಉತ್ಸವ ನಡೆಸಲಾಯಿತು. ಲಕ್ಷದೀಪೋತ್ಸವ ಇನ್ನು ಮೂರೂ ದಿನ ನಡೆಯಲಿದೆ. ಬ್ರಹ್ಮರಥ ಮಾತ್ರ ಸಪೊ¤àತ್ಸವದ ವೇಳೆ ಹೊರಬರಲಿದೆ. ಮಕರ ಸಂಕ್ರಾಂತಿಯಂದು ಬ್ರಹ್ಮರಥೋತ್ಸವ ಸಹಿತ ಮೂರು ರಥಗಳ ಉತ್ಸವ ನಡೆಯಲಿದೆ. 

ಚಾತುರ್ಮಾಸ್ಯ ಆಹಾರ ಕ್ರಮ ಮುಕ್ತಾಯ
ರವಿವಾರದವರೆಗೆ ಚಾತುರ್ಮಾಸ್ಯ ವ್ರತದ ಆಹಾರ ಕ್ರಮ ಕೃಷ್ಣಮಠದಲ್ಲಿ ನಡೆಯಿತು. ಚಾತುರ್ಮಾಸ್ಯದ ನಾಲ್ಕು ತಿಂಗಳ ಅವಧಿ ಮುಗಿದ ಬಳಿಕ ಮಂಗಳವಾರದಿಂದ ಸಹಜ ಆಹಾರ ಕ್ರಮ ಆರಂಭಗೊಂಡಿತು. 

ಟಾಪ್ ನ್ಯೂಸ್

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MASOCON

MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

Udupi: ವಿಡಿಯೋ ಕರೆ ರೆಕಾರ್ಡ್‌ ಮಾಡಿ ಹಣಕ್ಕೆ ಬೇಡಿಕೆ

Udupi: ವಿಡಿಯೋ ಕರೆ ರೆಕಾರ್ಡ್‌ ಮಾಡಿ ಹಣಕ್ಕೆ ಬೇಡಿಕೆ

Fraud: ಅಪರಿಚಿತ ವ್ಯಕ್ತಿಯಿಂದ 2.41 ಲಕ್ಷ ರೂ. ವಂಚನೆ

Fraud: ಅಪರಿಚಿತ ವ್ಯಕ್ತಿಯಿಂದ 2.41 ಲಕ್ಷ ರೂ. ವಂಚನೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Sandalwood; ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.