ಸ್ಥಳೀಯ ವಾಹನಗಳಿಗೆ ಸುಂಕ: ಹೆಜಮಾಡಿಯಲ್ಲಿ ಬೃಹತ್‌ ಪ್ರತಿಭಟನೆ


Team Udayavani, Nov 27, 2018, 9:21 AM IST

hejamadi.jpg

ಪಡುಬಿದ್ರಿ: ಸ್ಥಳೀಯ ವಾಹನಗಳಿಂದ ಸುಂಕ ಸಂಗ್ರಹವನ್ನು ವಿರೋಧಿಸಿ ಕರೆ ನೀಡಲಾಗಿದ್ದ ನ. 27ರ ಉಭಯ ಜಿಲ್ಲಾ ಬಂದ್‌ ಕರೆಯನ್ನು ಟೋಲ್‌ ಹೋರಾಟಗಾರರ ಸಮಿತಿ ಹಿಂಪಡೆದಿದೆ.

ಹೆಜಮಾಡಿ ಟೋಲ್‌ಗೇಟ್‌ನಲ್ಲಿ ಸೋಮವಾರ ನಡೆದ ಪ್ರತಿಭಟನೆಯ ಬಳಿಕ ಸಂಜೆ ಜರಗಿದ ಸರ್ವ ಪಕ್ಷ ನಾಯಕರು, ಸಂಘಟನೆಗಳ ಮುಖಂಡರ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಯಿತು. ಬಂದ್‌ಗೆ
ಬದಲಾಗಿ ಬೆಳಗ್ಗೆ 9.30ಕ್ಕೆ ಶಾಸಕ ಲಾಲಾಜಿ ಮೆಂಡನ್‌ ನೇತೃತ್ವದಲ್ಲಿ ಹೆಜಮಾಡಿ ಟೋಲ್‌ಗೇಟ್‌ಗೆ ಮುತ್ತಿಗೆ ಹಾಕಲಾಗುವುದು ಎಂದು  ತೀರ್ಮಾನಿಸಲಾಯಿತು.

ಶಾಸಕ ಲಾಲಾಜಿ ಮೆಂಡನ್‌ ಮಾತನಾಡಿ, ಜನರ ತೀರ್ಮಾನಕ್ಕೆ ಬದ್ಧನಿದ್ದೇನೆ. ಸ್ಥಳೀಯ ವಾಹನಗಳಿಂದ ಟೋಲ್‌ ಸಂಗ್ರಹಿಸದಂತೆ ಜಿಲ್ಲಾಧಿಕಾರಿ, ಅಪರ ಜಿಲ್ಲಾಧಿಕಾರಿ ಜತೆ ಮಾತಾಡುವೆನು. ಡಿ. 1ರಂದು ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಮುಂದಿನ ತೀರ್ಮಾನ ಕೈಗೊಳ್ಳುವಂತೆ ಆಗ್ರಹಿಸುವೆ ಎಂದರು. ಎಲ್ಲೂ ಸ್ಥಳೀಯ ವಾಹನಗಳಿಗೆ ಟೋಲ್‌ ಪಡೆಯುತ್ತಿಲ್ಲ. ದ.ಕ.ದಲ್ಲೂ ಸ್ಥಳೀಯ ವಾಹನಗಳು ಮುಕ್ತವಾಗಿರುವಾಗ ಉಡುಪಿ ಜಿಲ್ಲೆಯಲ್ಲಿ ಮಾತ್ರ ಸ್ಥಳೀಯ ವಾಹನಗಳಿಂದ ಸುಂಕ ವಸೂಲಿ ಮಾಡಕೂಡದು ಎಂಬ ಒಕ್ಕೊರಲ ನಿರ್ಧಾರಕ್ಕೆ ಬರಲಾಯಿತು.

ಬಂಧನ – ಬಿಡುಗಡೆ
ಸ್ಥಳೀಯ ವಾಹನಗಳಿಂದ ಸುಂಕ ಸಂಗ್ರಹ ವಿರೋಧಿಸಿ ಹೆಜಮಾಡಿಯ ಟೋಲ್‌ ಪ್ಲಾಜಾದ ಬಳಿ ಸೋಮವಾರ ಪ್ರತಿಭಟನೆ ನಡೆಸಿದವರನ್ನು ಪೊಲೀಸರು ಬಂಧಿಸಿ ಬಳಿಕ ಜಾಮೀನಿನಲ್ಲಿ ಬಿಡುಗಡೆಗೊಳಿಸಿದರು. ಈ ಸಂದರ್ಭ ಹೆದ್ದಾರಿ ಟೋಲ್‌ ವಿರೋಧಿ ಹೋರಾಟಗಾರರ ಸಮಿತಿಯ ಸಂಚಾಲಕ ಶೇಖರ್‌ ಹೆಜ್ಮಾಡಿ ಅವರು ಮಾತನಾಡಿ, ಮತ ನೀಡಿದ ಜನತೆಗೆ ತೊಂದರೆಯಾದಾಗ ಜಿಲ್ಲಾಡಳಿತವನ್ನು ಪ್ರಶ್ನಿಸಬೇಕಾದ ಸ್ಥಳೀಯ ಶಾಸಕರು, ಸಂಸದರು ಸುಮ್ಮನಿರುವುದು ತರವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಡಿಸಿಗೆ ಶೋಭೆಯಲ್ಲ
ಹೋರಾಟ ಸಮಿತಿ ಅಧ್ಯಕ್ಷ ಡಾ| ದೇವಿಪ್ರಸಾದ್‌ ಶೆಟ್ಟಿ  ಮಾತನಾಡಿ, ಜಿಲ್ಲಾಧಿಕಾರಿಗಳ ವರ್ತನೆ ಶೋಭೆ ತರುವಂತಾದ್ದಲ್ಲ. ಜಿಲ್ಲೆಯಲ್ಲಿ ಕಿತ್ತುತಿನ್ನುವ ಮರಳಿನ ಸಮಸ್ಯೆ, ಬಡವರಿಗೆ ಹಕ್ಕುಪತ್ರ ದೊರೆಯದಿರುವುದೇ ಮೊದಲಾದ ಅನೇಕ ಸಮಸ್ಯೆಗಳಿದ್ದರೂ ಅತ್ತ ಗಮನ ಹರಿಸದೆ ನವಯುಗದಂತಹ ಉದ್ಯಮಿಯ ರಕ್ಷಣೆಗೆ ನಿಂತಿದ್ದಾರೆ. ನವಯುಗ ನಿರ್ಮಾಣ ಕಂಪೆನಿ ಸ್ಥಳೀಯರಿಂದ ಮಾಡುತ್ತಿರುವ ಸುಲಿಗೆಯನ್ನು ಬೆಂಬಲಿಸಿ ಪೊಲೀಸ್‌ ರಕ್ಷಣೆಯನ್ನೂ ನೀಡಿರುವ ಅವರ ನಡೆ ಯಾರೂ ಮೆಚ್ಚುವಂಥದ್ದಲ್ಲ. ಅವರನ್ನು ತತ್‌ಕ್ಷಣ ವರ್ಗಾಯಿಸಬೇಕು ಎಂದು ಆಗ್ರಹಿಸಿದರು.

ಪೊಲೀಸರೇ ಟೋಲ್‌ ವಸೂಲಿಗರು!
ಹೆಜಮಾಡಿ ಗೇಟ್‌ನಲ್ಲಿ ಸ್ಥಳೀಯ ಕೆಲವರು ಟೋಲ್‌ ನೀಡೆವೆಂದು ಪ್ರತಿಭಟಿಸಿದಾಗ ಪೊಲೀಸರೇ ಮನವೊಲಿಸಿ ಟೋಲ್‌ ಪಡೆದು ಕಂಪೆನಿಗೆ ನೀಡುತ್ತಿದ್ದರು. ಮೂಲ್ಕಿಯ ಖಾಸಗಿ ಬಿಳಿ ಬೋರ್ಡ್‌ ಕಾರೊಂದರ ಮಾಲಕರು ಟೋಲ್‌ ನೀಡೆನೆಂದು ಪ್ರತಿಭಟಿಸಿದಾಗ ಅವರನ್ನು ಪಡುಬಿದ್ರಿ ಠಾಣೆ ವರೆಗೂ ಕರೆದೊಯ್ಯಲಾಯಿತು. ಬಳಿಕ ಅಲ್ಲಿ ಅವರನ್ನು ಬಿಟ್ಟು ಕಳುಹಿಸಲಾಗಿದೆ.

ಹೆಜಮಾಡಿ ವಾಸಿಗಳಿಗೆ ವಿನಾಯಿತಿ
ಹೆಜಮಾಡಿ ವಾಸಿಗಳಿಗೆ ಟೋಲ್‌ನಿಂದ ಸಂಪೂರ್ಣ ವಿನಾಯಿತಿ ಘೋಷಿಸಲಾಗಿದೆ. ಬಿಳಿ ನಂಬರ್‌ ಪ್ಲೇಟ್‌ನ ಹೆಜಮಾಡಿಯ ವಾಹನ ಮಾಲಕರು ಸೂಕ್ತ ದಾಖಲೆ ಒದಗಿಸಿ ಪಾಸ್‌ ಪಡೆದುಕೊಳ್ಳುವಂತೆ ನವಯುಗ್‌ ತಿಳಿಸಿದೆ.
ಟೋಲ್‌ ಪ್ಲಾಜಾದ ಎರಡೂ ಕಡೆ 20 ಕಿ.ಮೀ. ವ್ಯಾಪ್ತಿಯ ಬಿಳಿ ನಂಬರ್‌ ಪ್ಲೇಟ್‌ ಹೊಂದಿದ ವಾಹನಗಳಿಗೆ ಫೋಟೋ, ಆರ್‌ಸಿ ಮತ್ತು ವಿಳಾಸ ದಾಖಲೆ ನೀಡಿದಲ್ಲಿ ಮಾಸಿಕ 250  ರೂ. ಪಾಸ್‌ ನೀಡಲಾಗುವುದು. ತಿಂಗಳಲ್ಲಿ ಎಷ್ಟು ಬಾರಿ ಬೇಕಾದರೂ ಪ್ರಯಾಣಿಸಬಹುದು.

ಎಲ್‌ಸಿವಿ ವಾಹನಗಳಿಗೆ ತಿಂಗಳಿಗೆ 1,850 ರೂ. ಪಾವತಿಸಿದಲ್ಲಿ ಮಾಸಿಕ 50 ಟ್ರಿಪ್‌ ಪ್ರಯಾಣಿಸಬಹುದು. ಬಸ್‌ ಮತ್ತು ಟ್ರಕ್‌ಗಳು 3,880 ರೂ. ಪಾವತಿಸಿದಲ್ಲಿ ಮಾಸಿಕ 50 ಟ್ರಿಪ್‌ ಪ್ರಯಾಣಿಸಬಹುದು. ಎಂಎವಿ ವಾಹನಗಳು 6,085 ರೂ. ಪಾವತಿಸಿದಲ್ಲಿ ಮಾಸಿಕ 50 ಟ್ರಿಪ್‌ ಪ್ರಯಾಣಿಸಬಹುದು ಎಂದು ನವಯುಗ್‌ ಪ್ರಕಟನೆ ತಿಳಿಸಿದೆ. ಇದೇ ವೇಳೆ ಹಳದಿ ನಂಬರ್‌ ಪ್ಲೇಟ್‌ ವಾಹನಗಳ ಪಾಸ್‌ ದರ ಬಗ್ಗೆ ಕಂಪೆನಿಯೊಂದಿಗೆ ಮಾತುಕತೆ ನಡೆಸಿ ಶೀಘ್ರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದಾಗಿ ಕಂಪೆನಿ ತಿಳಿಸಿದೆ.

ಟಾಪ್ ನ್ಯೂಸ್

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

3-hegde

LS Polls: ಮಾಡಿದ ಕೆಲಸ ನೋಡಿ ಮತ ನೀಡಿ: ಜಯಪ್ರಕಾಶ್‌ ಹೆಗ್ಡೆ

Udupi-Chikkamagaluru ಲೋಕಸಭಾ ಕ್ಷೇತ್ರ: ಹಳೇ ಹುಲಿಗಳ ನಡುವೆ ಹೊಸ ಯುದ್ಧ

Udupi-Chikkamagaluru ಲೋಕಸಭಾ ಕ್ಷೇತ್ರ: ಹಳೇ ಹುಲಿಗಳ ನಡುವೆ ಹೊಸ ಯುದ್ಧ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-uv-fusion

Holi: ಬಣ್ಣಗಳ ಹಬ್ಬ ಹೋಳಿ ಹಬ್ಬ, ಉಲ್ಲಾಸ ತರುವ ಬಣ್ಣಗಳ ಹಬ್ಬ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.