ಹಲವು ಸರಕಾರಿ ವಸತಿ ಯೋಜನೆಗಳೂ ನನೆಗುದಿಗೆ


Team Udayavani, Dec 2, 2018, 6:00 AM IST

s-49.jpg

ಉಡುಪಿ: ಮರಳು ಕೊರತೆ ಕಟ್ಟಡ ನಿರ್ಮಾಣ ಕ್ಷೇತ್ರವನ್ನು ಬಹುವಾಗಿ ಕಾಡಿದೆ. ಇದಕ್ಕೆ ಉದಾಹರಣೆ ಯೆಂದರೆ, ಸರಕಾರದ ವಸತಿ ಯೋಜನೆಗಳಡಿ ನಿರ್ಮಾಣವಾಗಬೇಕಾದ ಮನೆಗಳೇ ಹಲವೆಡೆ ಸ್ಥಗಿತಗೊಂಡಿವೆ. ಇನ್ನು ಕೆಲವೆಡೆ ಆರಂಭಗೊಂಡೇ ಇಲ್ಲ.

488 ಮನೆಗಳು ಪೂರ್ಣ
ಉಡುಪಿ ತಾಲೂಕಿನಲ್ಲಿ ಬಸವ ವಸತಿ ಯೋಜನೆ ಮತ್ತು ಅಂಬೇಡ್ಕರ್‌ ವಸತಿ ಯೋಜನೆಯಡಿ 1,671 ಮಂದಿ ಫ‌ಲಾನುಭವಿಗಳ ಆಯ್ಕೆಯಾಗಿದ್ದು ಇದ ರಲ್ಲಿ 488 ಮನೆಗಳು ನಿರ್ಮಾಣಗೊಂಡಿವೆ. 660 ಮನೆಗಳು ಅಡಿಪಾಯಕ್ಕೇ ನಿಂತಿದ್ದರೆ, ಉಳಿದ ಮನೆ ಗಳ ಗೋಡೆ/ ಮೇಲ್ಛಾವಣಿ ಆಗಿದೆ. ಗಾರೆ ಆಗಬೇಕು. ಕುಂದಾಪುರ ತಾಲೂಕಿನಲ್ಲಿ ಬಸವ ವಸತಿ, ಇಂದಿರಾ ಆವಾಸ್‌, ಆಶ್ರಯ ವಸತಿ, ಅಂಬೇಡ್ಕರ್‌ ವಸತಿ ಯೋಜನೆ ಇತ್ಯಾದಿಯಡಿ 3,250 ಕ್ಕೂ ಹೆಚ್ಚು ಮನೆಗಳ ಕಾಮಗಾರಿ ಸ್ಥಗಿತಗೊಂಡಿದೆ. 22 ಅಂಗನ ವಾಡಿ ಕಟ್ಟಡಗಳು, 8 ಗ್ರಾ.ಪಂ. ಕಟ್ಟಡಗಳು ಹಾಗೂ ಒಂದು ವಿಕಲ ಚೇತನರ ಇಲಾಖೆಯ ಕಟ್ಟಡವೂ ಮರಳಿಗೆ ಕಾಯುತ್ತಿವೆ. 

ಹೋಬಳಿಗಳಲ್ಲೂ ಇದೇ ಸಮಸ್ಯೆ. ಉದಾಹರಣೆಗೆ ಬರೀ ಕೋಟ ಹೋಬಳಿಯ ಸುತ್ತಮುತ್ತ ಐರೋಡಿ, ಪಾಂಡೇಶ್ವರ, ಕೋಡಿ, ಕೋಟ, ಕೋಟತಟ್ಟು, ವಡ್ಡರ್ಸೆ, ಶಿರಿಯಾರ, ಯಡ್ತಾಡಿ, ಆವರ್ಸೆ, ಬಿಲ್ಲಾಡಿ ಗ್ರಾ.ಪಂ. ಹಾಗೂ ಸಾಲಿಗ್ರಾಮ ಪ.ಪಂ. ವ್ಯಾಪ್ತಿ ಯಲ್ಲಿ 280ಕ್ಕೂ ಹೆಚ್ಚು ಮನೆಗಳ ಕಾಮಗಾರಿ ಅರ್ಧಕ್ಕೆ ನಿಂತಿವೆ. ಜತೆಗೆ ವಸತಿ ನಿಗಮದಿಂದ ಫ‌ಲಾನುಭವಿಗಳಿಗೆ ನಾಲ್ಕೈದು ತಿಂಗಳಿಗೆ ಅನುದಾನ ಬಾರದಿರುವುದು ಸಮಸ್ಯೆಯ ತೀವ್ರತೆಯನ್ನು ಹೆಚ್ಚಿಸಿದೆ. 

ಮುಕ್ತಾಯ ಅವಧಿ ಏರಿಕೆ ! 
ಫ್ಲ್ಯಾಟ್‌ ಖರೀದಿಸುವವರಿಗೆ ನೀಡುವ ಮುಕ್ತಾಯ ಅವಧಿ (ಕಂಪ್ಲೀಷನ್‌ ಪಿರೇಡ್‌)ಯಂತೆಯೇ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಬೇಕು. ಇಲ್ಲ  ವಾದರೆ ರೇರಾ ಕಾಯಿದೆಯಡಿ ದೂರು ದಾಖಲಿಸಬಹುದು. ಹಾಗಾಗಿ ಕೆಲವು ಕಂಪೆನಿಗಳು ಗ್ರಾಹಕರಿಗೆ 2 ವರ್ಷದ ಬದಲು 5 ವರ್ಷ ಅವಧಿ ಕೇಳುತ್ತಿವೆ. ಉಡುಪಿಯಲ್ಲಿ ದೊಡ್ಡ ಆರ್ಥಿಕ ಚಟುವಟಿಕೆಗಳಿಲ್ಲ. ಶೇ.60ರಷ್ಟು ಖರೀದಿದಾರರು ಎನ್‌ಆರ್‌ಐಗಳು. ಅವರ ಹೂಡಿಕೆಯೇ ಮುಖ್ಯ. 300 ಫ್ಲ್ಯಾಟ್‌ನ ಕಟ್ಟಡದಿಂದ ಒಂದು ಸಾವಿರ ಜನರಿಗೆ 3 ವರ್ಷ ಕೆಲಸ ಸಿಗುತ್ತದೆ. ಅನಂತರ ಸೊಸೈಟಿ ಮಾಡಿ ದಾಗ ಅಲ್ಲಿಯೂ 50 ಜನರಿಗೆ ಶಾಶ್ವತ ಕೆಲಸ ಸಿಗುತ್ತದೆ ಎನ್ನುತ್ತಾರೆ ಉಡುಪಿ ಬಿಲ್ಡರ್ ಅಸೋಸಿಯೇಷನ್‌ ಅಧ್ಯಕ್ಷ ಜೆರ್ರಿ ವಿನ್ಸೆಂಟ್‌ ಡಯಾಸ್‌.  

ಮಾಹಿತಿ: ರಾಜೇಶ್‌ ಮತ್ತು ಪ್ರಶಾಂತ್‌ 

ಖಾಸಗಿಯವರಿಗೂ ಸಮಸ್ಯೆಯೇ 
ಇನ್ನು ಖಾಸಗಿ ವಸತಿ ಯೋಜನೆಗಳೂ ಕಷ್ಟದಲ್ಲಿವೆ. ವಿವಿಧೆಡೆ ನಿರ್ಮಾಣವಾಗಬೇಕಿದ್ದ ವಸತಿ ಸಮುಚ್ಚಯ, ವಾಣಿಜ್ಯ ಸಂಕೀರ್ಣಗಳು ಮುಂದುವರಿಯುವ ಸ್ಥಿತಿಯಲ್ಲಿಲ್ಲ. ಮನೆ ನಿರ್ಮಾಣ ಸಂಸ್ಥೆಯೊಂದು 100 ಮನೆಗಳ ವಸತಿ ಸಂಕೀರ್ಣಗಳ ಕಾಮಗಾರಿ ಆರಂಭಿಸಿ ಸ್ಥಗಿತಗೊಳಿಸಿದೆ. ಇದರೊಂದಿಗೆ ಇನ್ನಷ್ಟು ಮನೆಗಳನ್ನು ನಿರ್ಮಿಸುವ ಯೋಜನೆ ಹೊಂದಿತ್ತು. ಇಂಥ ಉದಾಹರಣೆಗಳು ಹಲವಿವೆ.
ನಮಗೆ 7,000 ರೂ.ನಲ್ಲಿ ಮರಳು ದೊರೆಯುತ್ತಿತ್ತು. ಆದರೆ ಈಗ ಬ್ಲ್ಯಾಕ್‌ನಲ್ಲಿ 20,000 ರೂ. ನೀಡಿ ಮರಳು ಖರೀದಿಸಬೇಕಿದೆ. ಹಾಗೆ ಖರೀದಿಸಿದರೆ ಹಿಂದಿನ ದರದಲ್ಲಿ ಫ್ಲ್ಯಾಟ್‌ ಮಾರಲಾಗುವುದು. ತೀರಾ ಅಗತ್ಯವಾದರೆ ಒಂದೆರಡು ಲೋಡ್‌ ಮಾತ್ರ ಖರೀದಿಸುತ್ತೇವೆ.  ಎಂ ಸ್ಯಾಂಡ್‌ನ‌ ಗುಣಮಟ್ಟದ ಬಗ್ಗೆ ನಮಗೆ ಖಾತರಿ ಇಲ್ಲ. ಹಾಗಾಗಿ ಹೆಚ್ಚಿನ ಕಾಮಗಾರಿ ನಿಲ್ಲಿಸಿದ್ದೇವೆ ಎನ್ನುತ್ತಾರೆ ಪ್ರತಿಷ್ಠಿತ ಬಿಲ್ಡರ್ ಕಂಪೆನಿಯವರು.

ಸಂತೋಷ್‌ ಬೊಳ್ಳೆಟ್ಟು

ಟಾಪ್ ನ್ಯೂಸ್

Encounter in Kashmir:

ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

17-

Bantwala: ರಾಂಗ್‌ಸೈಡಿನಲ್ಲಿ ಬಂದು ಎರಡು ಬೈಕ್‌ಗಳಿಗೆ  ಢಿಕ್ಕಿ ಹೊಡೆದ ಲಾರಿ

Man shot a Cow on head twice

Manipur; ಹಸುವಿಗೆ ಗುಂಡಿಟ್ಟು ಕೊಂದ ಕ್ರೂರಿ!: ವ್ಯಾಪಕ ಆಕ್ರೋಶ

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

sunita williams

Sunita williams ಬಾಹ್ಯಾಕಾಶ ಯಾನ 90 ನಿಮಿಷಗಳಿದ್ದಾಗ ರದ್ದು!

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Encounter in Kashmir:

ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

17-

Bantwala: ರಾಂಗ್‌ಸೈಡಿನಲ್ಲಿ ಬಂದು ಎರಡು ಬೈಕ್‌ಗಳಿಗೆ  ಢಿಕ್ಕಿ ಹೊಡೆದ ಲಾರಿ

Man shot a Cow on head twice

Manipur; ಹಸುವಿಗೆ ಗುಂಡಿಟ್ಟು ಕೊಂದ ಕ್ರೂರಿ!: ವ್ಯಾಪಕ ಆಕ್ರೋಶ

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

sunita williams

Sunita williams ಬಾಹ್ಯಾಕಾಶ ಯಾನ 90 ನಿಮಿಷಗಳಿದ್ದಾಗ ರದ್ದು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.