ಮಲ್ಪೆ: ಕತ್ತಿಯಿಂದ ಕಡಿದು ಪರಾರಿ
Team Udayavani, Dec 6, 2018, 11:01 AM IST
ಮಲ್ಪೆ: ವ್ಯವಹಾರಕ್ಕೆ ಸಂಬಂಧಿಸಿ ಹಣದ ವಿಚಾರದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವರಿಗೆ ಕತ್ತಿಯಿಂದ ಕಡಿದಿರುವ ಘಟನೆ ಮಂಗಳವಾರ ರಾತ್ರಿ ಮಲ್ಪೆಯ ಕೊಳ ಎಂಬಲ್ಲಿ ಬಳಿ ನಡೆದಿದೆ.
ಕೊಳದಲ್ಲಿ ಮೀನು ವ್ಯಾಪಾರದ ಆಫೀಸಿನಲ್ಲಿ ಕುಳಿತಿದ್ದ ಕಟಪಾಡಿ ಏಣಗುಡ್ಡೆಯ ನಿವಾಸಿ ಸುಧಾಕರ ಸುವರ್ಣ ಅವರಿಗೆ ಕೊಳ ನಿವಾಸಿ ಧನು ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ. ಕುತ್ತಿಗೆ, ಬಲಗೈ ಮತ್ತು ಎದೆಭಾಗಕ್ಕೆ ಗಾಯವಾಗಿರುವ ಸುಧಾಕರ ಸುವರ್ಣ ಅವರನ್ನು ಸ್ಥಳೀಯರು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.
ಸುಧಾಕರ ಸುವರ್ಣ ಮತ್ತು ಧನು ಮೀನು ವ್ಯವಹಾರದಲ್ಲಿ ಪಾಲುದಾರರಾಗಿದ್ದರು. ಕೆಲವು ಸಮಯದ ಹಿಂದೆ ಹಣದ ವ್ಯವಹಾರದಲ್ಲಿ ಇಬ್ಬರಿಗೂ ಜಗಳವಾಗಿ ಪ್ರತ್ಯೇಕವಾಗಿದ್ದರು. ಆ ಬಳಿಕ ಸುಧಾಕರ ಸುವರ್ಣ ಆವರು ಬೇರೆಯವರ ಜತೆಯಲ್ಲಿ ವ್ಯವಹಾರ ನಡೆಸುತ್ತಿದ್ದರು. ಈ ಮಧ್ಯೆ ಹಣದ ವಿಚಾರಕ್ಕೆ ಸಂಬಂಧಿಸಿ ಧನು ಹಲ್ಲೆ ನಡೆಸಿದ್ದಾನೆ. ಸುಧಾಕರ್ ಸುವರ್ಣ ಚೇತರಿಸಿಕೊಂಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಮಲ್ಪೆ ಠಾಣಾಧಿಕಾರಿ ಮಧು ಬಿ.ಇ. ನೇತೃತ್ವದಲ್ಲಿ ಪೊಲೀಸರು ಆರೋಪಿಯ ಪತ್ತೆಗಾಗಿ ಶೋಧ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ
Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ
Veerappa Moily; ದೇಶಕ್ಕೆ ಕ್ರಿಕೆಟ್ ಕಾಮೆಂಟ್ರಿಯನ್ ಬೇಕಿಲ್ಲ
Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ