ಎ.1ರಿಂದ ಜಿ.ಎಸ್‌.ಟಿ. ರಿಟರ್ನ್ಸ್ ಸಲ್ಲಿಕೆ ಸರಳೀಕರಣ?


Team Udayavani, Dec 7, 2018, 3:40 AM IST

rajesh-prasad-600.jpg

ಮುಂದಿನ ಎಪ್ರಿಲ್‌ 1ರಿಂದ ಜಿಎಸ್‌ಟಿಗೆ ಸಲ್ಲಿಸುವ ರಿಟರ್ನ್ಸ್ ಫೈಲ್‌ನಲ್ಲಿ ಸರಳೀಕರಣ ಜಾರಿಗೊಳ್ಳುವ ಸಾಧ್ಯತೆ ಇದೆ ಎಂದು ಐಎಎಸ್‌ ಅಧಿಕಾರಿ, ದಿಲ್ಲಿ ಜಿಎಸ್‌ಟಿ ಆಯುಕ್ತ ಮೂಲತಃ ಹಿರಿಯಡಕದವರಾದ ರಾಜೇಶ್‌ ಪ್ರಸಾದ್‌ ಅವರು ಹೇಳಿದ್ದಾರೆ. ಸಾಮಾನ್ಯ ಆರ್ಥಿಕ ಹಿನ್ನೆಲೆಯಿಂದ ಬಂದ, ಕಲಿಕೆಯಲ್ಲಿಯೂ ಸಾಮಾನ್ಯ ದರ್ಜೆ ಯವರಾದ ರಾಜೇಶ್‌ ಪ್ರಸಾದ್‌ ಕನ್ನಡ ಮಾಧ್ಯಮ ಶಾಲೆಯಲ್ಲಿ  ಓದಿ ಪರಿಶ್ರಮ, ಪ್ರಬಲ ಇಚ್ಛಾಬಲದಿಂದ ಉನ್ನತ ಸ್ತರಕ್ಕೆ ಏರಿದವರು.

ರಿಟರ್ನ್ಸ್ ಫೈಲ್‌ ಮಾಡುವಾಗ ಸರಳೀಕರಣ ವ್ಯವಸ್ಥೆ  ಜಾರಿಗೊಳ್ಳುತ್ತದೆಯೆ?
ಈಗ ತಿಂಗಳಿಗೆ ಮೂರು ಬಾರಿ ಫೈಲ್‌ ಮಾಡಬೇಕೆಂದಿದೆ. ಮೊದಲು ಐಟಿ ಸಿಸ್ಟಂ ವಿನ್ಯಾಸ ರೂಪಿಸುವಾಗ ಹೀಗೆ ಇತ್ತು. ಆಗ ಪ್ರಾಯೋಗಿಕ ಅನುಭವವಿರಲಿಲ್ಲ. ಮೂಲ ವಿನ್ಯಾಸವನ್ನು ಸರಿಪಡಿಸುವುದು ಕಷ್ಟವಾದ ಕಾರಣ ತಿಂಗಳಿಗೆ ಒಂದೇ ಬಾರಿ ಫೈಲ್‌ ಮಾಡಿದರೆ ಸಾಕೆಂಬ ನಿರ್ಧಾರ ತಳೆಯಲಾಗುತ್ತಿದೆ. ಇದನ್ನು ನ್ಯಾಯವಾದಿಗಳು, ವಾಣಿಜ್ಯೋದ್ಯಮಿಗಳು, ಲೆಕ್ಕಪರಿಶೋಧಕರು ಹೀಗೆ ವಿವಿಧ ವರ್ಗಗಳ ಸಲಹೆ ಮೇರೆಗೆ ನಿರ್ಧಾರ ತಳೆಯಲಾಗುತ್ತಿದೆ. ಇದರಂತೆ 5 ಕೋ.ರೂ.ಗಿಂತ ಹೆಚ್ಚು ವಾರ್ಷಿಕ ವ್ಯವಹಾರ ನಡೆಸುವವರು ತಿಂಗಳಿಗೊಮ್ಮೆ ಮತ್ತು ಅದಕ್ಕಿಂತ ಕಡಿಮೆ ವ್ಯವಹಾರದವರು ಮೂರು ತಿಂಗಳಿಗೆ ಒಮ್ಮೆ ಫೈಲ್‌ ಮಾಡಿದರೆ ಸಾಕು. ಆದರೆ ತೆರಿಗೆಯನ್ನು ಮಾತ್ರ ಪ್ರತಿ ತಿಂಗಳು ಪಾವತಿಸಬೇಕೆಂಬ ನಿಯಮ ಎ. 1ರಿಂದ ಜಾರಿಗೊಳ್ಳುವ ನಿರೀಕ್ಷೆ ಇದೆ. 

ಜಿಎಸ್‌ಟಿ ಸಂಬಂಧಿತ ಸಮಸ್ಯೆ ಬಗೆಹರಿದಿವೆಯೆ?
ಸುಮಾರು 1 ವರ್ಷ 5 ತಿಂಗಳಿಂದ ಜಿಎಸ್‌ಟಿ ಬಹುತೇಕ ಸುಲಲಿತವಾಗಿ ನಡೆಯುತ್ತಿದೆ. ಕೆಲವು ಸಣ್ಣಪುಟ್ಟ ಸಮಸ್ಯೆಗಳಿವೆ. ರಿಟರ್ನ್ಸ್ ಫೈಲ್‌ ಸಲ್ಲಿಸುವಾಗ ಕೆಲವು ತಾಂತ್ರಿಕ ಸಮಸ್ಯೆಗಳಿದ್ದವು. ಇವುಗಳನ್ನು ಸರಳೀಕರಣಗೊಳಿಸಬೇಕೆಂಬ ಬೇಡಿಕೆ ಇದೆ.

ಪೆಟ್ರೋಲಿಯಂ ಉತ್ಪನ್ನ ಮತ್ತು ಅಬಕಾರಿಯನ್ನು ಜಿ.ಎಸ್‌.ಟಿ.ಗೆ ಸೇರಿಸುವ ಪ್ರಸ್ತಾವ ಜಾರಿಯಾದೀತೆ ? 
ಇಲ್ಲ. ಪೆಟ್ರೋಲಿಯಂ ಉತ್ಪನ್ನಗಳ ವ್ಯವಹಾರವನ್ನು ಜಿ.ಎಸ್‌.ಟಿ. ವ್ಯಾಪ್ತಿಗೆ ತಂದರೆ ರಾಜ್ಯ ಸರಕಾರಗಳ ವಿತ್ತೀಯ ಸ್ವಾತಂತ್ರ್ಯಕ್ಕೆ ಧಕ್ಕೆ ಆಗುತ್ತದೆ. ಇದನ್ನು ತರಬೇಕಾದರೆ ಎಲ್ಲ ರಾಜ್ಯಗಳ ಒಪ್ಪಿಗೆ ಬೇಕು. ಅಬಕಾರಿ (ಲಿಕ್ಕರ್‌) ವ್ಯವಹಾರವನ್ನು ತರಲು ಸಾಧ್ಯವೇ ಇಲ್ಲ. ಇದು ಸಂಪೂರ್ಣವಾಗಿ ರಾಜ್ಯ ವ್ಯಾಪ್ತಿಯಲ್ಲಿದೆ. ಇದು ಆಗಬೇಕಾದರೆ ಸಂವಿಧಾನಕ್ಕೆ ತಿದ್ದುಪಡಿ ಆಗಬೇಕು. ಅಬಕಾರಿ ರಾಜ್ಯ ಪಟ್ಟಿಯಲ್ಲಿದ್ದು ಇದನ್ನು ರಾಜ್ಯ ಪಟ್ಟಿಯಿಂದ ತೆಗೆದು ಕೇಂದ್ರದ ಪಟ್ಟಿಗೆ ತರಬೇಕು. ಕೇರಳದಲ್ಲಿ ಆದಂತೆ ತೊಂದರೆ ಸಂಭವಿಸಿದಾಗ ರಾಜ್ಯಗಳಿಗೆ ತೆರಿಗೆ ಹೆಚ್ಚಿಸಲು ಇವೆರಡೂ ಕ್ಷೇತ್ರಗಳು ಅವಕಾಶ ಕಲ್ಪಿಸುತ್ತವೆ. ಆದ್ದರಿಂದ ಇವೆರಡೂ ಸದ್ಯೋಭವಿಷ್ಯದಲ್ಲಿ ಜಿಎಸ್‌ಟಿ ವ್ಯಾಪ್ತಿಗೆ ಬರುವ ಸಾಧ್ಯತೆ ಇಲ್ಲ.

ಖಾಸಗಿ ವಲಯದಿಂದ ಉನ್ನತ ಹುದ್ದೆಗಳಿಗೆ ನೇಮಿಸಿಕೊಳ್ಳುವ ಕೇಂದ್ರ ಸರಕಾರದ ಕ್ರಮದ ಬಗ್ಗೆ ಅಭಿಪ್ರಾಯವೇನು? ಐಎಎಸ್‌ ವ್ಯವಸ್ಥೆಗೆ ಭವಿಷ್ಯ?
ಯಾವುದೇ ಪ್ರತಿಭೆಗಳಿಗೆ ಅವಕಾಶ ಕೊಡುವುದು ಸ್ವಾಗತಾರ್ಹವೇ. ಸದ್ಯ 12 ಜಂಟಿ ಕಾರ್ಯದರ್ಶಿಗಳ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮುಂದಿನ ಬೆಳವಣಿಗೆ ಕುರಿತು ಗೊತ್ತಿಲ್ಲ. ಐಎಎಸ್‌ಗಳಾಗಲಿ, ರಾಜಕಾರಣಿಗಳಾಗಲಿ ಯಾರೇ ಆಗಲಿ ಬದ ಲಾವಣೆಗೆ ತೆರೆದುಕೊಂಡಿರಬೇಕು. ಹೊಸ ಹೊಸ ಚಿಂತನೆಗಳನ್ನು ಸ್ವಾಗತಿಸಬೇಕು. ಖಾಸಗಿ ವಲಯದವರು ಬರುತ್ತಾರೆಂದ ಮಾತ್ರಕ್ಕೆ ನಾಗರಿಕ ಸೇವಾ ವ್ಯವಸ್ಥೆಗೆ ಬೆದರಿಕೆ ಏನೂ ಇಲ್ಲ. ಒಂದಂತೂ ಸತ್ಯ ಕೇವಲ ಐಎಎಸ್‌ ವ್ಯವಸ್ಥೆ ಮಾತ್ರ ಬದಲಾದರೆ ಸಾಕಾ ಗದು, ಎಲ್ಲ ವ್ಯವಸ್ಥೆಗಳೂ ಬದಲಾಗಬೇಕು. ಅದಕ್ಕೆ ನೇಮಕಾತಿಯಿಂದ ಹಿಡಿದು ತರಬೇತಿ, ಭಡ್ತಿ ಇತ್ಯಾದಿ ನಾನಾ ಆಯಾಮಗಳಲ್ಲಿ ಸುಧಾರಣೆ ತರಬೇಕು.

ಐಎಎಸ್‌ ಪರೀಕ್ಷೆ ಕುರಿತು ಕರಾವಳಿ ಕರ್ನಾಟಕದ ಯುವ ಜನರಿಗೆ ಆಸಕ್ತಿ ಕೊರತೆ ಇದೆಯೇ?
ಕರಾವಳಿ ಕರ್ನಾಟಕದಲ್ಲಿಯೂ ಈಗೀಗ ಜಾಗೃತಿ ಮೂಡುತ್ತಿದೆ. ಅನೇಕ ಯಶಸ್ವೀ ಉದಾಹರಣೆಗಳೂ ಇವೆಯಲ್ಲ? ನಾಗರಿಕ ಪರೀಕ್ಷೆ ಪಾಸಾಗಲು ಮುಖ್ಯವಾಗಿ ಬೇಕಾದದ್ದು ಆಸಕ್ತಿ, ಪ್ರಬಲ ಇಚ್ಛಾಶಕ್ತಿ, ಕಠಿನ ಪರಿಶ್ರಮದ ಓದು. ಇದಕ್ಕೆ ಕೇವಲ ಬುದ್ಧಿವಂತಿಕೆ ಬೇಕೆಂದರ್ಥವಲ್ಲ. ನಾನು ಬಿಕಾಂ ಪದವಿಯನ್ನು ಓದುವಾಗ ಸಾಮಾನ್ಯ ವಿದ್ಯಾರ್ಥಿ. ಅನಂತರ ಜೀವನೋಪಾಯಕ್ಕಾಗಿ ಗೋವಾದಲ್ಲಿ ರೈಲ್ವೇ ಇಲಾಖೆಗೆ ಸೇರಿದೆ. ಆಗ ನಾನು ಸೇರಿದ್ದು ಕ್ಲರ್ಕ್‌ ಆಗಿ. ಎರಡು ವರ್ಷಗಳಾದ ಬಳಿಕ ವಿಜಯ ಬ್ಯಾಂಕ್‌, ಬಳಿಕ ಬ್ಯಾಂಕ್‌ ಆಫ್ ಬರೋಡಕ್ಕೆ ಸೇರಿದೆ. ನಾಗರಿಕ ಪರೀಕ್ಷೆಯನ್ನು ಪಾಸಾಗಲೇಬೇಕೆಂದು ಪಣತೊಟ್ಟು ಓದಿದೆ. ಪಾಸಾದೆ. ಹಸಿವೆ ಆದರೆ ಮಾತ್ರ ಊಟ ಸಿಗುತ್ತದೆ, ರುಚಿಸುತ್ತದೆಯಲ್ಲವೆ? ಮನಸ್ಸಿದ್ದರೆ ಜೀವನವೇ ಶಿಕ್ಷಕ, ಜಗತ್ತೇ ಶಾಲೆ. ನನ್ನೊಡನೆ ಇದ್ದ ಕೆಲವು ಕ್ಲರ್ಕ್‌ಗಳು ಈಗ ಹೆಡ್‌ ಕ್ಲರ್ಕ್‌ ಆಗಿದ್ದಾರೆ. ‘ನಮಡ ಆಪುಜ್ಜಿಯಾ’ ಎಂಬ ಮನಃಸ್ಥಿತಿ ಸರಿಯಲ್ಲ. ಶಿಕ್ಷಕರು, ಪೋಷಕರು ಮಕ್ಕಳಿಗೆ ಸರಿಯಾದ ಮಾರ್ಗದರ್ಶನ, ಪ್ರೋತ್ಸಾಹ ಕೊಡಬೇಕು. 

— ಸಂದರ್ಶನ: ಮಟಪಾಡಿ ಕುಮಾರಸ್ವಾಮಿ

ಟಾಪ್ ನ್ಯೂಸ್

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

3-hegde

LS Polls: ಮಾಡಿದ ಕೆಲಸ ನೋಡಿ ಮತ ನೀಡಿ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

12-fusion

UV Fusion: ಆಕೆಗೂ ಒಂದು ಮನಸ್ಸಿದೆ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.