ಹೆಜಮಾಡಿ: 7ಕಿ. ಮೀ. ವ್ಯಾಪ್ತಿಯಲ್ಲಿ ಸುಂಕ ವಿನಾಯಿತಿಗಾಗಿ ಧರಣಿ, ಮನವಿ


Team Udayavani, Jan 2, 2019, 7:35 PM IST

hejamadi-toll-2-1.jpg

ಪಡುಬಿದ್ರಿ: ಹೆಜಮಾಡಿಯ ನವಯುಗ ಟೋಲ್‌ ಪ್ಲಾಝಾ ಸುತ್ತಮುತ್ತಲ 7 ಕಿ.ಮೀ. ವ್ಯಾಪ್ತಿಯ ಹಳೆಯಂಗಡಿ, ಮೂಲ್ಕಿ, ಪಡುಬಿದ್ರಿ, ಎರ್ಮಾಳು ಪ್ರದೇಶಗಳ ಎಲ್ಲಾ ವಾಹನಗಳಿಗೆ ಟೋಲ್‌ ವಿನಾಯಿತಿಗಾಗಿ ಬುಧವಾರದಂದು ಹೆಜಮಾಡಿಯ ನವಯುಗ ಟೋಲ್‌ ಪ್ಲಾಝಾ ಬಳಿ ಮೂಲ್ಕಿಯ ಜನತೆಯೇ ಅಧಿಕವಾಗಿದ್ದು ಜತೆಗೆ ಹೆಜಮಾಡಿ ಹಾಗೂ ಪಡುಬಿದ್ರಿ ಪರಿಸರದ ಸಾರ್ವಜನಿಕರು ಸೇರಿ ಧರಣಿ ನಡೆಸಿದರು. ಸ್ಥಳಕ್ಕಾಗಮಿಸಿದ ಕಾಪು ಕಂದಾಯ ಪರಿವೀಕ್ಷಣಾಧಿಕಾರಿ ರವಿಶಂಕರ್‌ ಧರಣಿ ನಿರತ ಮೂಲ್ಕಿ ಹಾಗೂ ಹೆಜಮಾಡಿಯ ಸಂಘಟಕರಿಂದ ಮನವಿಯನ್ನು ಸ್ವೀಕರಿಸಿ ಉಡುಪಿ ಜಿಲ್ಲಾಧಿಕಾರಿ ಅವರಿಗೆ ರವಾನಿಸುವುದಾಗಿ ತಿಳಿಸಿದ್ದಾರೆ.

ಬೆಳಗ್ಗೆ ಜಮಾಯಿಸಿದ ಹೆಜಮಾಡಿ ಟೋಲ್‌ಗೇಟ್‌ ವಿರೋಧಿ ಸಮಿತಿ ಹಾಗೂ ಮೂಲ್ಕಿಯ ನಾಗರಿಕ ಸಮಿತಿಯ ಸದಸ್ಯರು ಶಾಂತಿಯುತ ಪ್ರತಿಭಟನೆಯನ್ನು ನಡೆಸಿದರು. ತಾವು ಬಲಹೀನರೆಂದು ಜಿಲ್ಲಾಡಳಿತವು ಭಾವಿಸದಿರಲಿ. ಮುಂದಿನ ಮೂರು ದಿನಗಳಲ್ಲಿ ಸೂಕ್ತ ಉತ್ತರ ಜಿಲ್ಲಾಡಳಿತದಿಂದ ಸಿಗದಿದ್ದಲ್ಲಿ ಜ. 6ರಂದು ಮೂಲ್ಕಿಯ ಅನ್ನಪೂರ್ಣೇಶ್ವರೀ ಸಭಾಭವನದಲ್ಲಿ ಬೆಳಗ್ಗೆ 10ಗಂಟೆಗೆ ಹೋರಾಟಗಾರರ ಸಭೆ ನಡೆಯಲಿದೆ. ಅದರಲ್ಲಿ ತೀರ್ಮಾನಿಸಿ ಮೂಲ್ಕಿ ಬಂದ್‌ಗೆ ಮುಂದೆ ಕರೆ ನೀಡಲಾಗುವುದು ಎಂದು ಮೂಲ್ಕಿ ನಾಗರಿಕ ಸಮಿತಿ ಅಧ್ಯಕ್ಷ, ಮೂಲ್ಕಿ ನಗರ ಪಂಚಾಯತ್‌ ಅಧ್ಯಕ್ಷ ಸುನಿಲ್‌ ಆಳ್ವ ಹೇಳಿದರು.

ತಲಪಾಡಿಯ ಟೋಲ್‌ ವಿರೋಧಿ ಹೋರಾಟ ಸಮಿತಿಯ ಅಧ್ಯಕ್ಷ ಸಿದ್ದೀಕ್‌ ತಲಪಾಡಿ ಮಾತನಾಡಿ ಜನತೆಯ ಬೇಡಿಕೆಗಳನ್ನು ಕಡೆಗಣಿಸಿ ಸಾರ್ವಜನಿಕರನ್ನು ಲೂಟಿ ಮಾಡುತ್ತಿರುವ  ಕಂಪೆನಿಗೆ ಪೊಲೀಸರು ರಕ್ಷಣೆಯನ್ನು ಒದಗಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಜನತೆಯ ಬೇಡಿಕೆಗಳನ್ನು ಜಿಲ್ಲಾಡಳಿತ, ಜನಪ್ರತಿನಿಧಿಗಳು ಈಡೇರಿಸಬೇಕು. ಇಲ್ಲವೇ ಜನತೆ  ಬೀದಿಗಿಳಿದು ಹೆದ್ದಾರಿ ತಡೆ ಎಸಗಿ ಟೋಲ್‌ ಗೇಟ್‌ ಮುರಿಯುವ ಹೋರಾಟಕ್ಕೆ ಅಣಿಯಾಗಲಿದೆ.

ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾಧ್ಯಕ್ಷ ಅನ್ಸರ್‌ ಅಹಮ್ಮದ್‌ ಮಾತನಾಡಿ ನವಯುಗ ಟೋಲ್‌ ಪ್ಲಾಝಾ ಅನ್ಯಾಯಗಳ ವಿರುದ್ಧ ಜನತೆಗೆ ಸೂಕ್ತ ಸುಂಕ ವಿನಾಯಿತಿಯನ್ನು ಬಯಸಿ ಜ. 7ರಿಂದ ಪಡುಬಿದ್ರಿ ಜಂಕ್ಷನ್‌ನಲ್ಲೇ ಕರವೇ ಕಾಪು ಘಟಕದ ಮೂಲಕ ಅನಿರ್ದಿಷ್ಟಾವಧಿ ಮುಷ್ಕರವನ್ನು ಆರಂಭಿಸುವುದಾಗಿ ಹೇಳಿದರು.

ಧರಣಿ ನಿರತರನ್ನು ಉದ್ದೇಶಿಸಿ ರಾಷ್ಟ್ರೀಯ ಹೆದ್ದಾರಿ ಟೋಲ್‌ ವಿರೋಧಿ ಸಮಿತಿಯ ಸಂಚಾಲಕ ಶೇಖರ್‌ ಹೆಜಮಾಡಿ, ಹರೀಶ್‌ ಪುತ್ರನ್‌, ಧನಂಜಯ ಅಮೀನ್‌ ಮಟ್ಟು, ರಾಮಚಂದ್ರ ನಾಯಕ್‌ ಬ್ರಹ್ಮಾವರ, ಪ್ರಕಾಶ್‌ ಶೆಟ್ಟಿ ಪಾದೆಬೆಟ್ಟು, ವೈ. ಸುಧೀರ್‌ಕುಮಾರ್‌, ಶರೀಫ್‌ ಮೂಲ್ಕಿ, ಜೀವನ್‌ ಶೆಟ್ಟಿ, ಸುಧಾಕರ ಕರ್ಕೇರ ಹೆಜಮಾಡಿ, ಸಾಧು ಅಂಚನ್‌, ಅಬ್ದುಲ್‌ ಅಜೀಜ್‌ ಹೆಜಮಾಡಿ ಮತ್ತಿತರರು ಮಾತನಾಡಿದರು. 

ಮೂಲ್ಕಿಯ ಕಾರು ಚಾಲಕ ಮಾಲಕರ ಸಂಘದ ಅಧ್ಯಕ್ಷ ಮಧು ಆಚಾರ್ಯ, ರಾಷ್ಟ್ರೀಯ ಹೆದ್ದಾರಿ ಟೋಲ್‌ಗೇಟ್‌ ವಿರೋಧಿ ಸಮಿತಿಯ ಉಪಾಧ್ಯಕ್ಷ ಗುಲಾಂ ಮಹಮ್ಮದ್‌, ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಅರ್ಚಕ ಶ್ರೀಪತಿ ಉಪಾಧ್ಯಾಯ, ದೇವಪ್ರಸಾದ್‌ ಪುನರೂರು, ಶೈಲೇಶ್‌, ಮುನೀರ್‌ ಕಾರ್ನಾಡ್‌, ಉದಯ ಶೆಟ್ಟಿ ಆದಿಧನ್‌, ರಾಧಿಕಾ ಕೋಟ್ಯಾನ್‌, ದೇವಣ್ಣ ನಾಯಕ್‌, ಅಬ್ದುಲ್‌ ರಜಾಕ್‌, ಗೋಪಿನಾಥ ಪಡಂಗ, ಪುತ್ತು ಬಾವ, ಹರೀಶ್‌ ಶೆಟ್ಟಿ ಪಾದೆಬೆಟ್ಟು, ಉದಯ ಕಾಂಚನ್‌ ಪಡುಬಿದ್ರಿ, ಗಣೇಶ್‌ ಕೋಟ್ಯಾನ್‌ ಪಡುಬಿದ್ರಿ, ಸುಧೀರ್‌ ಕರ್ಕೇರ ಹೆಜಮಾಡಿ, ಕಿಶೋರ್‌ ಕುಮಾರ್‌ ಎರ್ಮಾಳು ಭಾಗವಹಿಸಿದ್ದರು. 

ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಎರಡು ತುಕುಡಿಗಳ ಸಹಿತ ಕಾರ್ಕಳ ವಿಭಾಗದ ಎಎಸ್‌ಪಿ ಕೃಷ್ಣಕಾಂತ್‌, ಡಿವೈಎಸ್ಪಿ ಸುದರ್ಶನ್‌, ಕಾಪು ಸಿಪಿಐ ಮಹೇಶ್‌ ಪ್ರಸಾದ್‌, ಪಡುಬಿದ್ರಿ ಪಿಎಸ್‌ಐ ಸತೀಶ್‌ ಎಂ.ಪಿ. ಮತ್ತಿತರ ಹಲವಾರು ಪೊಲೀಸರು ಕಾನೂನು ಸುರಕ್ಷೆಯ ಕ್ರಮಗಳಿಗಾಗಿ ಸ್ಥಳದಲ್ಲಿದ್ದರು.

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.