‘ವೃದ್ಧರು, ಅಂಗವಿಕಲರ ನಿರ್ಲಕ್ಷ್ಯವೂ ಮಾನವ ಹಕ್ಕಿನ ಉಲ್ಲಂಘನೆ’
Team Udayavani, Dec 11, 2018, 2:15 AM IST
ಉಡುಪಿ: ವೃದ್ಧ ಪೋಷಕರನ್ನು ಮಕ್ಕಳು ನಿರ್ಲಕ್ಷ್ಯ ಮಾಡುವುದು, ಅಂಗವಿಕಲ ಮಕ್ಕಳನ್ನು ಪೋಷಕರು ತಿರಸ್ಕಾರದಿಂದ ಕಾಣುವುದು ಸಹ ಮಾನವ ಹಕ್ಕಿನ ಉಲ್ಲಂಘನೆ ಆಗಲಿದೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ವೆಂಕಟೇಶ್ ನಾಯ್ಕ ಟಿ. ಅವರು ಹೇಳಿದ್ದಾರೆ. ಸೋಮವಾರ ಉಡುಪಿ ವಕೀಲರ ಸಂಘದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಅಭಿಯೋಗ ಇಲಾಖೆ ಮತ್ತು ಪೊಲೀಸ್ ಇಲಾಖೆ ಸಹಯೋಗದಲ್ಲಿ ನಡೆದ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿ ಮಾನವ ಹಕ್ಕುಗಳು ಉಲ್ಲಂಘನೆಯಾಗದಂತೆ ತಡೆಯುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ ಎಂದರು.
ಸಮಾಜದಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ಗೌರವಾನ್ವಿತನಾಗಿ ಆತ್ಮ ಗೌರವದಿಂದ ಜೀವನ ನಡೆಸಲು ಹಕ್ಕು ಉಳ್ಳವನಾಗಿದ್ದು, ಇದಕ್ಕೆ ಚ್ಯುತಿ ಬಂದಲ್ಲಿ ಮಾನವ ಹಕ್ಕಿನ ಉಲ್ಲಂಘನೆ ಆಗಲಿದೆ. ಸಮಾಜದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ನಡೆಯುತ್ತಿದ್ದು, ಅಸಮಾನತೆ ವಿರುದ್ಧ ಎಸ್ಸಿ, ಎಸ್ಟಿ ಕಾಯಿದೆ ಜಾರಿಗೆ ತಂದಿದ್ದರೂ ಸಹ ಇನ್ನೂ ಇದರ ಉಲ್ಲಂಘನೆ ನಡೆಯುತ್ತಿದೆ. ಮಾನವ ಹಕ್ಕುಗಳ ಕುರಿತು ಪ್ರತಿಯೊಬ್ಬರೂ ಅರಿವು ಹೊಂದಿದ್ದು, ಅವುಗಳನ್ನು ಗೌರವಿಸಿ, ರಕ್ಷಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಬೇಕು ಎಂದು ಜಿಲ್ಲಾ ನ್ಯಾಯಾಧೀಶರು ಹೇಳಿದರು.
ವ್ಯಾಪಕ ಮಾನವ ಹಕ್ಕುಗಳ ಉಲ್ಲಂಘನೆ
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲ ಪ್ರೊ| ಪ್ರಕಾಶ್ ಕಣಿವೆ, ಪ್ರತಿಯೊಬ್ಬ ವ್ಯಕ್ತಿಗೂ ಹುಟ್ಟಿನಿಂದಲೇ ಮಾನವ ಹಕ್ಕುಗಳು ದೊರೆಯುತ್ತವೆ. ಇವುಗಳ ರಕ್ಷಣೆ ಸರಕಾರಗಳ ಕರ್ತವ್ಯ. 1 ಮತ್ತು 2ನೇ ಮಹಾಯುದ್ದದಲ್ಲಿ ವ್ಯಾಪಕ ಮಾನವ ಹಕ್ಕುಗಳ ಉಲ್ಲಂಘನೆ ನಡೆದಿದ್ದು, 1948ರ ಡಿಸೆಂಬರ್ 10 ರಂದು ವಿಶ್ವ ಸಂಸ್ಥೆ ಮಾನವ ಹಕ್ಕುಗಳ ರಕ್ಷಣೆಗೆ ಕರೆ ನೀಡಿದೆ. ಭಾರತ ಸಂವಿಧಾನದಲ್ಲೂ ಸಹ ಮಾನವ ಹಕ್ಕುಗಳನ್ನು ಅಳವಡಿಸಲಾಗಿದೆ. ಆದರೆ ಭಾರತದಲ್ಲಿ ತುರ್ತು ಪರಿಸ್ಥಿತಿಯ ವೇಳೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಾನವ ಹಕ್ಕು ಉಲ್ಲಂಘನೆ ನಡೆಯಿತು. ಮಾನವ ಹಕ್ಕುಗಳನ್ನು ಗೌರವಿಸುವ ಉದ್ದೇಶದಿಂದಲೇ ಯಾವುದೇ ಅಪರಾಧಿಯನ್ನೂ ಸಹ ಸೂಕ್ತ ಕಾಲಾವಕಾಶ ನೀಡಿ, ವಿಚಾರಣೆ ಅನಂತರವೇ ಶಿಕ್ಷೆಗೆ ಒಳಪಡಿಸಲಾಗುತ್ತಿದೆ. ಇದಕ್ಕೆ ಮುಂಬೈ ದಾಳಿಯ ಆರೋಪಿ ಕಸಬ್ನ ವಿಚಾರಣೆಯೆ ಸಾಕ್ಷಿ. ಯಾವುದೇ ವ್ಯಕ್ತಿ ಸಮಾಜದಲ್ಲಿ ಗೌರವದಿಂದ ಜೀವಿಸುವ ವಾತಾವರಣ ನಿರ್ಮಾಣ ಮಾಡಬೇಕು ಎಂದು ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧೀಶೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲತಾ, ಸರಕಾರಿ ಅಭಿಯೋಜಕಿ ಶಾಂತಾ ಬಾಯಿ ಉಪಸ್ಥಿತರಿದ್ದರು. ವಕೀಲರ ಸಂಘದ ಮಾಜಿ ಅಧ್ಯಕ್ಷ ಶ್ರೀಪತಿ ಆಚಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಕೀಲರ ಸಂಘದ ಉಪಾಧ್ಯಕ್ಷ ಪೃಥ್ವಿರಾಜ ಹೆಗ್ಡೆ ಸ್ವಾಗತಿಸಿದರು. ವಕೀಲ ಶ್ರೀಶ ಆಚಾರ್ಯ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ