ಕರ್ತವ್ಯನಿಷ್ಠೆಗೆ ಗೃಹರಕ್ಷಕರು ಹೆಸರುವಾಸಿ: ವಸಂತ ಕುಮಾರ್‌ 


Team Udayavani, Dec 12, 2018, 2:40 AM IST

gruha-rakshaka-11-12.jpg

ಉಡುಪಿ: ಗೃಹರಕ್ಷಕ ದಳದವರು ಕರ್ತವ್ಯನಿಷ್ಠೆಗೆ ಹೆಸರಾದವರು ಎಂದು ಜಿಲ್ಲಾ ಅಗ್ನಿಶಾಮಕಾಧಿಕಾರಿ ವಸಂತಕುಮಾರ್‌ ಬಣ್ಣಿಸಿದರು. ಜಿಲ್ಲಾ ಗೃಹರಕ್ಷಕದಳ ಕಚೇರಿಯಲ್ಲಿ ಮಂಗಳವಾರ ನಡೆದ ಅಖಿಲ ಭಾರತ ಗೃಹರಕ್ಷಕದಳ ದಿನಾಚರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ಪೊಲೀಸ್‌, ಅಗ್ನಿಶಾಮಕ ಇಲಾಖೆಯಂತೆ ಗೃಹ ರಕ್ಷಕರೂ ಶಿಸ್ತಿನ ಸಿಪಾಯಿಗಳು. ಸರಕಾರದ ಸೌಲಭ್ಯಗಳು ಕೆಲವು ವೇಳೆ ವಿಳಂಬವಾದರೂ ಕರ್ತವ್ಯನಿಷ್ಠೆಯನ್ನು ಗೃಹರಕ್ಷಕರು ಎಂದಿಗೂ ಮರೆಯುವುದಿಲ್ಲ. ಕರ್ತವ್ಯನಿಷ್ಠೆಯನ್ನು ಮುಂದುವರಿಸಿದರೆ ಸೌಲಭ್ಯ ತಾನಾಗಿ ಬರುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಮಾಂಡೆಂಟ್‌ ಡಾ|ಕೆ.ಪ್ರಶಾಂತ್‌ ಶೆಟ್ಟಿಯವರು ವಾರ್ಷಿಕ ವರದಿ ವಾಚಿಸಿ ಈ ವರ್ಷ 96 ಗೃಹರಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಮಧ್ಯಪ್ರದೇಶದ ಚುನಾವಣೆಯೂ ಸೇರಿದಂತೆ ವಿವಿಧ ಸಂದರ್ಭಗಳಲ್ಲಿ ಗೃಹರಕ್ಷಕರು ಕರ್ತವ್ಯ ನಿರ್ವಹಿಸಿದ್ದಾರೆಂದರು. ದ.ಕ., ಉಡುಪಿ ಜಿಲ್ಲಾ ಡೆಪ್ಯುಟಿ ಕಮಾಂಡೆಂಟ್‌ ರಮೇಶ್‌ ಸ್ವಾಗತಿಸಿ, ಕಾರ್ಕಳ ಘಟಕಾಧಿಕಾರಿ ಪ್ರಭಾಕರ ಸುವರ್ಣ ಪ್ರತಿಜ್ಞಾ ವಿಧಿ ಬೋಧಿಸಿದರು.

ಡೆಪ್ಯುಟಿ ಕಮಾಂಡೆಂಟ್‌ ರಮೇಶ್‌, ವಿವಿಧ ಘಟಕಗಳ ಅಧಿಕಾರಿಗಳಾದ ಪಡುಬಿದ್ರಿಯ ನವೀನ್‌ಕುಮಾರ್‌, ಕಾಪುವಿನ ಲಕ್ಷ್ಮೀನಾರಾಯಣ ರಾವ್‌, ಬ್ರಹ್ಮಾವರದ ಸ್ಟೀವನ್‌ ಪ್ರಕಾಶ್‌ ಅವರ ವಿಶೇಷ ಸೇವೆಗಾಗಿ ಸಮ್ಮಾನಿಸಲಾಯಿತು. ಸಮ್ಮಾನಿತರ ವಿವರಗಳನ್ನು ಕಚೇರಿ ಅಧೀಕ್ಷಕಿ ಕವಿತಾ ಕೆ.ಸಿ. ವಾಚಿಸಿದರು. ಬ್ರಹ್ಮಾವರದ ಘಟಕಾಧಿಕಾರಿ ಮಂಜುನಾಥ ಶೆಟ್ಟಿಗಾರ್‌ ವಂದಿಸಿದರು. ಹೈಟೆಕ್‌ ಪ್ಯಾರಾ ಮೆಡಿಕಲ್‌ ಕಾಲೇಜಿನ ವ್ಯವಸ್ಥಾಪಕ ಸಾಯಿನಾಥ್‌ ಉದ್ಯಾವರ ಕಾರ್ಯಕ್ರಮ ನಿರ್ವಹಿಸಿದರು.

ಸರ್ವ ಇಲಾಖಾ ಕಾರ್ಯತತ್ಪರರು
ಅಗ್ನಿಶಾಮಕ ಇಲಾಖೆಯವರಿಗೆ ಬೆಂಕಿ ಜತೆ ಸೆಣೆಸಾಡುವ ಕೆಲ ಗೊತ್ತಿರುತ್ತದೆ ವಿನಾ ಕಾನೂನು ಸುವ್ಯವಸ್ಥೆ ಗೊತ್ತಿರುವುದಿಲ್ಲ. ಪೊಲೀಸ್‌ ಇಲಾಖೆಗೆ ಕಾನೂನು ಸುವ್ಯವಸ್ಥೆ ಗೊತ್ತಿರುತ್ತದೆ ವಿನಾ ಬೆಂಕಿ ಜತೆ ಸೆಣೆಸಾಡುವ ಕೆಲಸ ಗೊತ್ತಿರುವುದಿಲ್ಲ. ಆದರೆ ಗೃಹರಕ್ಷಕರು ಯಾವುದೇ ಇಲಾಖೆ ಜತೆ ಸೇರಿದಾಗಲೂ ಆ ಕಲೆಯನ್ನು ಕರಗತ ಮಾಡಿಕೊಂಡು ಕರ್ತವ್ಯ ನಿರ್ವಹಿಸುತ್ತಾರೆ ಮತ್ತು ಇತರ ಇಲಾಖೆಗಳ ಕೆಲಸ ನಿರ್ವಹಣೆಗೆ ಉತ್ತೇಜಕರಾಗಿರುತ್ತಾರೆ. ಮುಂಬೈಯಲ್ಲಿ ಭಯೋತ್ಪಾದಕರ ದಾಳಿ ನಡೆದಾಗ ಪೊಲೀಸ್‌ ನಿಯಂತ್ರಣ ಕೊಠಡಿಗೆ ಮೊದಲು ಸುದ್ದಿ ರವಾನೆ ಮಾಡಿದವರು ಗೃಹರಕ್ಷಕರು.
– ವಸಂತಕುಮಾರ್‌

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.