ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಪುನಶ್ಚೇತನದ ಮೊಳಕೆ


Team Udayavani, Dec 13, 2018, 3:00 AM IST

brahmavara-sugar-12-12.jpg

ವಿಶೇಷ ವರದಿ : ಬ್ರಹ್ಮಾವರ: ಅವಿಭಜಿತ ದ.ಕ. ಜಿಲ್ಲೆಯ ಏಕೈಕ ಸಹಕಾರಿ ಸಕ್ಕರೆ ಕಾರ್ಖಾನೆ ಪುನಶ್ಚೇತನ ವಿಚಾರ ಮೊಳಕೆಯೊಡೆದಿದೆ. ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಪುನರುಜ್ಜೀವನ ಬಗ್ಗೆ ಮುಖ್ಯಮಂತ್ರಿ ಭರವಸೆ ಹಿನ್ನೆಲೆಯಲ್ಲಿ ಕಬ್ಬಿನ ಸಸಿ ವಿತರಣೆಗೆ ಚಾಲನೆ ದೊರೆತಿದೆ. ವಾರಾಹಿ ನೀರಾವರಿ ಯೋಜನೆಯನ್ನು ಅವ ಲಂಬಿಸಿಕೊಂಡು ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಪ್ರಾರಂಭಗೊಂಡಿತ್ತು. 1985ರ ಜ. 22ರಂದು ಕಾರ್ಯಾರಂಂಭಗೊಂಡ ಕಾರ್ಖಾನೆಯು ದಿನವೊಂದಕ್ಕೆ 1,250 ಮೆಟ್ರಿಕ್‌ ಟನ್‌ ಕಬ್ಬು ಅರೆಯುವ ಸಾಮರ್ಥ್ಯ ಹೊಂದಿತ್ತು. 1985-86ರಿಂದ 2002-03ನೇ ಸಾಲಿನವರೆಗೆ 18 ವರ್ಷ ಕಾರ್ಯನಿರ್ವಹಿಸಿದ ಕಾರ್ಖಾನೆಯು ಕಬ್ಬಿನ ಕೊರತೆ ಹಾಗೂ ದುಡಿಯುವ ಬಂಡವಾಳದ ಅಭಾವದಿಂದಾಗಿ 2003-04ನೇ ಸಾಲಿನಿಂದ ಕಬ್ಬು ಅರೆಯುವಿಕೆಯ ಕಾರ್ಯವನ್ನು ಸ್ಥಗಿತಗೊಳಿಸಿತು. 2006ರ ಎ. 16ರಂದು ಮುಚ್ಚುಗಡೆಗೊಂಡಿತು.

ಮರು ಜೀವ
ಕಾರ್ಖಾನೆಯ ಕಾರ್ಯವ್ಯಾಪ್ತಿಯಲ್ಲಿ ನೀರಾವರಿ ಸೌಲಭ್ಯ ವಿಸ್ತರಣೆಗೊಂಡ ಪರಿಣಾಮ ರೈತರು ಕಬ್ಬು ಬೆಳೆಯಲು ಆಸಕ್ತಿ ತೋರಿಸುತ್ತಿದ್ದಾರೆ. ಅಲ್ಲದೆ ಕರಾವಳಿ ಭಾಗದ ವೈಪರೀತ್ಯ ಹವಾಮಾನದಿಂದ ಭತ್ತದ ಬೆಳೆಗಿಂತ ಕಬ್ಬಿನ ಬೆಳೆಯು ಲಾಭದಾಯಕವಾಗಿರುವುದರಿಂದ ಬ್ರಹ್ಮಾವರದಲ್ಲಿರುವ ಸ್ಥಗಿತಗೊಂಡ ಸಕ್ಕರೆ ಕಾರ್ಖಾನೆಯನ್ನು ಪುನಃ ಪ್ರಾರಂಭಿಸುವಂತೆ ಆಗ್ರಹ ಕೇಳಿ ಬಂದಿದೆ.

ವಾರಾಹಿ ನೀರು
ಪ್ರಸ್ತುತ ವಾರಾಹಿ ನೀರಾವರಿ ಯೋಜನೆಯ ಕಾಮಗಾರಿಯು ಪ್ರಗತಿಯಲ್ಲಿದೆ. ವಾರಾಹಿ ಎಡದಂಡೆ ಕಾಲುವೆ 38 ಕಿ.ಮೀ.ವರೆಗೆ ಮತ್ತು ಉಪಕಾಲುವೆ ಹಾಗೂ ವಿತರಣಾ ಕಾಲುವೆಯ ಕಾಮಗಾರಿಗಳು ಪ್ರಗತಿಯಲ್ಲಿವೆ. ಈಗಾಗಲೇ ಸುಮಾರು 12,000 ಎಕ್ರೆ ಕೃಷಿ ಜಮೀನಿಗೆ ಕಾಲುವೆ ಮೂಲಕ ನೀರು ಹರಿಸಲಾಗಿದೆ. ಅಲ್ಲದೆ 9 ಪ್ಯಾಕೇಜ್‌ ಮೂಲಕ ಹೆಚ್ಚುವರಿಯಾಗಿ ಕಾಮಗಾರಿಗಳು ನಡೆಯುತ್ತಿದ್ದು, ಇದರಿಂದಾಗಿ ಇನ್ನೂ ಸುಮಾರು 8,000 ಎಕ್ರೆ ಕೃಷಿ ಜಮೀನಿಗೆ ನೀರು ದೊರೆಯಲಿದೆ ಎಂದು ಅಂದಾಜಿಸಲಾಗಿದೆ. ವಾರಾಹಿ ಯೋಜನೆಯು ಪೂರ್ಣಗೊಂಡಾಗ ಎಡದಂಡೆ ಕಾಲುವೆಯ ಪ್ರದೇಶದಲ್ಲಿ ಒಟ್ಟು 22,000 ಎಕ್ರೆಗೆ ನೀರಾವರಿ ಸೌಲಭ್ಯ ದೊರೆಯಲಿದ್ದು, ಇದರಲ್ಲಿ 12ರಿಂದ 15 ಸಾವಿರ ಎಕ್ರೆ ಜಮೀನಿನಲ್ಲಿ ಕಬ್ಬು ಅಭಿವೃದ್ಧಿಯಾಗುವ ನಿರೀಕ್ಷೆ ಇದೆ.

ಸುಧಾರಿತ ತಳಿ
ಬೀಜೋತ್ಪಾದನೆಗಾಗಿ ಉತ್ತಮ ತಳಿಯ ಮತ್ತು  ಅಧಿಕ ಇಳುವರಿಯ 25,000 ಕಬ್ಬಿನ ಬೀಜವನ್ನು ಮಂಡ್ಯದ ವಿ.ಸಿ. ಫಾರ್ಮ್ನಿಂದ ಖರೀದಿಸಿ ತರಿಸಲಾಗಿದೆ. 2018-19ನೇ ಸಾಲಿನಲ್ಲಿ 200 ಎಕ್ರೆಯಲ್ಲಿ ಕಬ್ಬಿನ ನಾಟಿ ನಡೆಯಲಿದೆ.
1ಕಬ್ಬಿನ ಸಾಂಪ್ರದಾಯಿಕ ನಾಟಿಗಿಂತ ಬೀಜದಿಂದ ಸಸಿ ಮಾಡಿ ನಾಟಿ ಮಾಡುವುದು ಹೆಚ್ಚು ಲಾಭದಾಯಕ ಜತೆಗೆ ನಿಖರವಾದ ಇಳುವರಿ ಗಳಿಕೆ ಸಾಧ್ಯ. 2200 ಎಕ್ರೆಯಲ್ಲಿ ಬಂದ ಕಬ್ಬಿನ ಬೀಜವನ್ನು 2019-20ನೇ ಸಾಲಿನಲ್ಲಿ 6,000 ಎಕ್ರೆ ಜಾಗದಲ್ಲಿ ಬಿತ್ತನೆ ಮಾಡಿದರೆ 2 ಲಕ್ಷ ಟನ್‌ ಕಬ್ಬು ಬೆಳೆಯ ಬಹುದು. ಆಗ ಕಾರ್ಖಾನೆ ಪುನಶ್ಚೇತನ ಸಾಧ್ಯವಾಗಲಿದೆ. 3 ಕಾರ್ಖಾನೆಗೆ ನಿತ್ಯ 1,250 ಟನ್‌ನಂತೆ ವಾರ್ಷಿಕ 2.25 ಲಕ್ಷ ಟನ್‌ ಕಬ್ಬು ಪೂರೈಕೆಯಾದರೆ ಕಾರ್ಖಾನೆ ಮುನ್ನಡೆಯಲು ಯಾವುದೇ ಸಮಸ್ಯೆಯಾಗದು. 4ಸಕ್ಕರೆ ಜತೆಗೆ ವಿದ್ಯುತ್‌, ಮೊಲಾಸಿಸ್‌, ಎಥೆನಾಲ್‌ನಂತಹ ಉಪಉತ್ಪನ್ನಗಳೂ ಹೆಚ್ಚು ಲಾಭದಾಯಕವಾಗಲಿವೆ. 

ಪುನಶ್ಚೇತನಕ್ಕೆ ಸಿಎಂ ಒಲವು ಕಾರ್ಖಾನೆ ಪುನಶ್ಚೇತನ ಕುರಿತು ಪೂನಾದ ಮಿಟ್ಕಾನ್‌ ಸಂಸ್ಥೆ ವಿಸ್ತೃತ ಯೋಜನಾ ವರದಿ ತಯಾರಿಸಿದೆ. ಪುನರುಜ್ಜೀವನಕ್ಕೆ 30 ಕೋಟಿ ರೂ. ಅಂದಾಜು ಪಟ್ಟಿ ತಯಾರಿಸಿ ಸರಕಾರಕ್ಕೆ ಸಲ್ಲಿಸಲಾಗಿದೆ. ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಕಾರ್ಖಾನೆ ಪುನಶ್ಚೇತನಕ್ಕೆ ಒಲವು ತೋರಿಸಿದ್ದು, ವಾರಾಹಿ ನೀರು ದೊರೆಯುತ್ತಿರುವುದರಿಂದ ಕಾರ್ಖಾನೆ ಕಾರ್ಯ ವ್ಯಾಪ್ತಿಯಲ್ಲಿ ಸಾಕಷ್ಟು ಕಬ್ಬು ಬೆಳೆಯುವಂತೆ ಸಲಹೆ ನೀಡಿದ್ದಾರೆ, ಅದರಂತೆ ಕಬ್ಬಿನ ಬೀಜ ಪೂರೈಸಲಾಗುತ್ತಿದೆ.
– ಎಚ್‌. ಜಯಶೀಲ ಶೆಟ್ಟಿ, ಅಧ್ಯಕ್ಷರು, ಬ್ರಹ್ಮಾವರ ಸಕ್ಕರೆ ಕಾರ್ಖಾನೆ

ಕಬ್ಬಿನ ಹಣ ಪಾವತಿಯಲ್ಲಿ ಶಿಸ್ತಿರಲಿ
ಕಬ್ಬಿಗೆ ಉತ್ತಮ ದರ ನಿಗದಿಪಡಿಸಬೇಕು. ಮುಖ್ಯವಾಗಿ ಕಬ್ಬಿನ ಹಣವನ್ನು ಸರಿಯಾದ ಸಮಯದಲ್ಲಿ ಪಾವತಿಸಿದರೆ ರೈತರು ಖಂಡಿತ ಕಬ್ಬು ಬೆಳೆದು ಪೂರೈಸುವ ವಿಶ್ವಾಸವಿದೆ.
– ರಘುವೀರ ಕಿಣಿ ಮೊಗವೀರಪೇಟೆ, ಕಬ್ಬು ಬೆಳೆಗಾರರು

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.