ಭತ್ತಕ್ಕೆ ಬೆಂಬಲ ಬೆಲೆ : ಹಲ್ಲಿಂಗ್ ಮಾಡಿಸಲು ನೋಂದಣಿ
Team Udayavani, Dec 14, 2018, 1:10 AM IST
ಉಡುಪಿ: 2018-19ನೇ ಸಾಲಿನಲ್ಲಿ ರೈತರಿಂದ ಕನಿಷ್ಠ ಬೆಂಬಲ ಬೆಲೆಯಲ್ಲಿ ಭತ್ತ ಖರೀದಿಸಲು ಸರಕಾರದಿಂದ ಆದೇಶವಾಗಿದೆ. ಸಾಮಾನ್ಯ ಭತ್ತವನ್ನು ಕ್ವಿಂಟಾಲ್ಗೆ 1,750 ರೂ. ಹಾಗೂ ಗ್ರೇಡ್ ‘ಎ’ ಭತ್ತವನ್ನು ಕ್ವಿಂಟಾಲ್ಗೆ 1,770 ರೂ. ದರದಲ್ಲಿ ಸಣ್ಣ ಮತ್ತು ಅತಿ ಸಣ್ಣ ರೈತರಿಂದ ಗರಿಷ್ಠ 40 ಕ್ವಿಂಟಾಲ್ವರೆಗೆ ಡಿ. 16ರಿಂದ 2019ನೇ ಮಾರ್ಚ್ 31ರವರೆಗೆ ಖರೀದಿಸಲಾಗುತ್ತದೆ ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಭತ್ತ ಖರೀದಿಸಲು ಆನ್ಲೈನ್ ವ್ಯವಸ್ಥೆ ಮಾಡಲಾಗಿದ್ದು, ಭತ್ತ ನೀಡಲು ಇಚ್ಛಿಸುವ ರೈತರು ಆಧಾರ್ ಕಾರ್ಡ್ ಹಾಗೂ ಭತ್ತ ಬೆಳೆದ ಬಗ್ಗೆ ಕಂದಾಯ ಇಲಾಖೆ ಪ್ರಮಾಣ ಪತ್ರವನ್ನು ತಾಲೂಕು ನೊಂದಣಿ ಕೇಂದ್ರದಲ್ಲಿ ನೀಡಿ ನೋಂದಣಿ ಮಾಡಿಕೊಳ್ಳಬೇಕು. ಅದರಂತೆ ಭತ್ತ ಮಿಲ್ಲಿಂಗ್ ಮಾಡಲು ಇಚ್ಛಿಸುವ ಅಕ್ಕಿ ಗಿರಣಿ ಮಾಲಕರು ಪಾನ್ಕಾರ್ಡ್ ನಂಬರ್ ಹಾಗೂ ಆಧಾರ್ ನಂಬರ್ ನೀಡಿ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡಿಕೊಂಡ ರೈತರು ಸರಕಾರಕ್ಕೆ ನೀಡುವ ಭತ್ತದ ಸ್ಯಾಂಪಲ್ನ್ನು ನೋಂದಣಿ ಕೇಂದ್ರಕ್ಕೆ ತಂದು ನೀಡಬೇಕು. ಭತ್ತದ ಗುಣಮಟ್ಟ, ಅಕ್ಕಿ ಗುಣಮಟ್ಟದ್ದಾಗಿದ್ದಲ್ಲಿ ನೋಂದಾಯಿತ ಅಕ್ಕಿ ಗಿರಣಿ ಮಾಲಕರಿಗೆ ಭತ್ತ ನೀಡಿ ಸ್ವೀಕೃತಿಯನ್ನು ರೈತರು ನೋಂದಣಿ ಕೇಂದ್ರಕ್ಕೆ ನೀಡಿ ಮೊತ್ತ ಪಡೆಯಬೇಕು.
ಭತ್ತ ಖರೀದಿಗೆ ರೈತರ ನೋಂದಣಿ ಕೇಂದ್ರವನ್ನು ಉಡುಪಿ ಮತ್ತು ಕಾರ್ಕಳ ತಾಲೂಕಿನ ಎಪಿಎಂಸಿ ಯಾರ್ಡ್ನಲ್ಲಿರುವ ಕೆ.ಎಫ್.ಸಿ.ಎಸ್.ಸಿ. ಗೋದಾಮು ಹಾಗೂ ಕುಂದಾಪುರ ತಾಲೂಕಿನ ಕೋಟೇಶ್ವರ ಬೀಚ್ ರಸ್ತೆಯಲ್ಲಿರುವ ಕೆ.ಎಫ್.ಸಿ.ಎಸ್.ಸಿ. ಅಕ್ಷರ ದಾಸೋಹ ಕೇಂದ್ರದಲ್ಲಿ ತೆರೆಯುವಂತೆ ವ್ಯವಸ್ಥಾಪಕರು ಕೆ.ಎಫ್.ಸಿ.ಎಸ್.ಸಿ. ಮಂಗಳೂರಿಗೆ ಆದೇಶಿಸಲಾಗಿದೆ.
ಪ್ರಸ್ತುತ ಬೆಳ್ತಿಗೆ ಅಕ್ಕಿ ತಯಾರಿಸಬಹುದಾದ ಭತ್ತ ಖರೀದಿಸಲಾಗುತ್ತಿದ್ದು, ಕುಚ್ಚಲು ಅಕ್ಕಿ ತಯಾರಿಸಬಹುದಾದ ಭತ್ತ ಖರೀದಿಸಲು ಅವಕಾಶ ಕಲ್ಪಿಸುವಂತೆ ಬೆಂಗಳೂರಿನ ಆಯುಕ್ತರು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯನ್ನು ಕೋರಲಾಗಿದೆ. ಸರಕಾರಕ್ಕೆ ಭತ್ತ ನೀಡಲಿಚ್ಛಿಸುವ ರೈತರು ನೋಂದಣಿ ಮಾಡಿಕೊಳ್ಳುವಂತೆ ಉಡುಪಿ ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ