ಕಟ್ಟಡ ತಂತ್ರಜ್ಞಾನದಲ್ಲಿ  ಮಾಹೆ ವಿ.ವಿ.- ಕೆಇಎಫ್ ಮಹತ್ವದ ಹೆಜ್ಜೆ


Team Udayavani, Dec 16, 2018, 11:01 AM IST

mahe.jpg

ಉಡುಪಿ: ಮಣಿಪಾಲದ ಮಾಹೆ ವಿಶ್ವ ವಿದ್ಯಾನಿಲಯ ಮತ್ತು ದುಬಾೖ ಮೂಲದ ಕೆಇಎಫ್ ಹೋಲ್ಡಿಂಗ್ಸ್‌ನ ಫೈಜಲ್‌ ಶಬಾನ ಫೌಂಡೇಶನ್‌ ಸಹಭಾಗಿತ್ವದಲ್ಲಿ ನಿರ್ಮಿಸಿರುವ ಎಂಐಟಿ-ಕೆಇಎಫ್ ಆರ್‌ ಆ್ಯಂಡ್‌ ಡಿ ಕೇಂದ್ರದ ಪ್ರಥಮ ಹಂತವನ್ನು ಕೆಇಎಫ್ ಅಧ್ಯಕ್ಷ, ಎಂಐಟಿ ಪ್ರಾಕ್ತನ ವಿದ್ಯಾರ್ಥಿ, ಕೇಂದ್ರದ ಮೂಲಪ್ರೇರಕ ಫೈಜಲ್‌ ಇ. ಕೊಟ್ಟಿಕೊಲನ್‌ ಶನಿವಾರ ಎಂಐಟಿ ಆವರಣದಲ್ಲಿ ಉದ್ಘಾಟಿಸಿದರು.  

ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ಇದು ಮಹತ್ವಪೂರ್ಣವಾಗಿದೆ. ಸಿವಿಲ್‌ ಎಂಜಿನಿಯರಿಂಗ್‌ ಮತ್ತು ಆರ್ಕಿಟೆಕ್ಚರ್‌ ವಿಭಾಗದ ವಿದ್ಯಾರ್ಥಿಗಳು ಕ್ಷಿಪ್ರ ಸಮಯದಲ್ಲಿ ಕಟ್ಟಡ ನಿರ್ಮಿಸುವ ತಂತ್ರಜ್ಞಾನದಲ್ಲಿ ಜ್ಞಾನ ಗಳಿಸಬೇಕು. ಇದಕ್ಕಾಗಿ ವಿವಿಧ ಎಂಜಿನಿಯರಿಂಗ್‌ ವಿಭಾಗದ ಪ್ರಾಧ್ಯಾಪಕರ ತಂಡದಿಂದ ಬೆಂಗಳೂರಿನಲ್ಲಿ ಮಾರ್ಗದರ್ಶನ ನೀಡಲಾಗುವುದು. ಕಟ್ಟಡಗಳ ಉತ್ಪಾದನೆ ಈಗ ಹೊಸ ಉಪಕ್ರಮವಾಗಿದೆ. ಅಮೆರಿಕದ ತಂತ್ರಜ್ಞಾನವನ್ನು
ಭಾರತಕ್ಕೆ ಕೊಂಡೊಯ್ಯುವ ಬದಲು ಭಾರತದ ಜ್ಞಾನವನ್ನು ಅಮೆರಿಕಕ್ಕೆ ಕೊಂಡೊಯ್ಯುವಂತಾ ಗಬೇಕು. ಇಲ್ಲಿನ ಪ್ರಾಧ್ಯಾಪಕರಿಗೆ ತರಬೇತಿ ಕೊಟ್ಟು ಬಳಿಕ ವಿದ್ಯಾರ್ಥಿಗಳಿಗೆ ತರಬೇತಿ ನೀಡಬೇಕು ಎಂದು ಫೈಜಲ್‌ ಆಶಯ ವ್ಯಕ್ತಪಡಿಸಿದರು.

ಕೆಇಎಫ್ ಸಿಇಒ ರಿಚರ್ಡ್‌ ಪಾಟಲ್‌, ಸ್ಟ್ರಕ್ಚರಲ್‌ ಎಂಜಿನಿಯರ್‌ ಸ್ಪಿರೋಜ್‌ ಅವರು ಕಟ್ಟಡ ನಿರ್ಮಾಣ ತಂತ್ರಜ್ಞಾನದಲ್ಲಿ ಆಗುತ್ತಿರುವ ಬೆಳವಣಿಗೆಗಳ ಮಾಹಿತಿ ನೀಡಿದರು. ಮಾಹೆ ಟ್ರಸ್ಟ್‌ನ ಟ್ರಸ್ಟಿ ಟಿ. ವಸಂತಿ ಪೈ, ಬೆಂಗಳೂರು ಎಂಇಎಂಜಿ ಆಡಳಿತ ನಿರ್ದೇಶಕ ಡಾ| ರಂಜನ್‌ ಪೈ, ಮಾಹೆ ಸಹಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌, ಕುಲಪತಿ ಡಾ| ಎಚ್‌. ವಿನೋದ ಭಟ್‌, ಎಂಐಟಿ ನಿರ್ದೇಶಕ ಡಾ| ಶ್ರೀಕಾಂತ ರಾವ್‌, ಶಾಬಾನ, ಪ್ರಾಧ್ಯಾಪಕರು ಉಪಸ್ಥಿತರಿದ್ದರು.

ಕೇಂದ್ರಕ್ಕೆ 16 ಕೋ.ರೂ. ವೆಚ್ಚ
ಕೇಂದ್ರದ ಒಟ್ಟು ಯೋಜನೆ 16 ಕೋ.ರೂ.ಗಳದ್ದು. ಇದರಲ್ಲಿ ಮಾಹೆ ಮತ್ತು ಕೆಇಎಫ್ ತಲಾ 8 ಕೋ.ರೂ. ವೆಚ್ಚ ಮಾಡುತ್ತಿದೆ. ಈಗ ಮೊದಲ ಹಂತದ ಉದ್ಘಾಟನೆಗೊಂಡಿದೆ. ಎರಡನೇ ಹಂತದಲ್ಲಿ ವಸ್ತುಸಂಗ್ರಹಾಲಯ, ಮೂರನೇ ಹಂತದಲ್ಲಿ ಶೋಕೇಸ್‌ ನಿರ್ಮಾಣಗೊಳ್ಳಲಿದೆ. ಈ ಕಟ್ಟಡದ ಪ್ರತಿಯೊಂದು ಬಿಡಿ ಭಾಗಗಳನ್ನು (ಆರ್‌ಸಿಸಿ ಪಾನೆಲ್‌) ಬೆಂಗಳೂರು ಸಮೀಪದ ಕೃಷ್ಣಗಿರಿಯಲ್ಲಿ ನಿರ್ಮಿಸಿ ಲಾರಿಯಲ್ಲಿ ತಂದು ಕ್ರೇನ್‌ ಮೂಲಕ ಜೋಡಿಸಲಾಗಿದೆ. ಪದವಿ, ಸ್ನಾತಕೋತ್ತರ, ಸಂಶೋಧನ ವಿದ್ಯಾರ್ಥಿಗಳಿಗೆ ಈ ತಂತ್ರಜ್ಞಾನವನ್ನು (ಪ್ರಿಕಾಸ್ಟ್‌ ಟೆಕ್ನಾಲಜಿ) ಪರಿಚಯಿಸಲಾಗುತ್ತಿದೆ. ಇದರ ಬಗ್ಗೆ ಪಠ್ಯಕ್ರಮವನ್ನು ಅಳವಡಿಸುವ ಚಿಂತನೆಯೂ ಇದೆ.  ಕಟ್ಟಡಗಳ ಉತ್ಪಾದನೆಯ ಕಲ್ಪನೆಯನ್ನು ಕೆಇಎಫ್ 2014ರಲ್ಲಿ ಭಾರತದಲ್ಲಿ ಜಾರಿಗೊಳಿಸಿತು. ಬೆಂಗಳೂರಿನಲ್ಲಿ ಕಚೇರಿಯನ್ನು ಹೊಂದಿ ಹಲವು ಕಟ್ಟಡಗಳ ವಿನ್ಯಾಸವನ್ನು ರೂಪಿಸಲಾಗುತ್ತಿದೆ. ಕರ್ನಾಟಕದ ಎಲ್ಲ ಇಂದಿರಾ ಕ್ಯಾಂಟೀನ್‌ಗಳೂ ಕೆಇಎಫ್ನಿಂದ ವಿನ್ಯಾಸಗೊಂಡು ರಚನೆಯಾಗಿದೆ. 

ಕಾರ್ಖಾನೆಯ ಪರಿಸರದಲ್ಲಿ ವಿನ್ಯಾಸ ರೂಪಿಸಿ ವಿವಿಧ ಭಾಗಗಳನ್ನು ಉತ್ಪಾದಿಸಲಾಗುತ್ತದೆ. ಈ ಕ್ಷೇತ್ರದಲ್ಲಿ ನಾವು ರೊಬೋಟಿಕ್ಸ್‌ಗಳನ್ನು ಪರಿಚಯಿಸಿದ್ದೇವೆ. ನಮ್ಮ ತಂಡ ಮತ್ತು ನಿಮ್ಮ ಪ್ರಾಧ್ಯಾಪಕರು ಜತೆ ಸೇರಿ ಈ ಕಲ್ಪನೆಯನ್ನು ಜಾರಿಗೊಳಿಸಲು ಸಂತೋಷಿಸುತ್ತಿದ್ದೇನೆ. ನಾವು ವಿಮಾನ, ಕಾರುಗಳನ್ನು ಉತ್ಪಾದಿಸುವುದಾದರೆ ಕಟ್ಟಡ ಗಳನ್ನು ಏಕೆ ಉತ್ಪಾದಿಸಬಾರದು ಎಂದು ಪ್ರಶ್ನಿಸಿದರು. 50,000 ಚದರಡಿ ವಿಸ್ತೀರ್ಣದ ಈ ಕಟ್ಟಡವನ್ನು ಕೇವಲ ಎರಡು ತಿಂಗಳಲ್ಲಿ ನಿರ್ಮಿಸಲಾಗಿದೆ. ಕೇಂದ್ರವು ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ಮುನ್ನಡೆ ಸಾಧಿಸಬೇಕಾಗಿದೆ ಎಂದರು.

ಗ್ರೀನ್ಸ್‌ನಲ್ಲಿ ನಡೆದ ಮಾಹೆ ವಿ.ವಿ.ಯ 3ನೇ ಜಾಗತಿಕ ಪ್ರಾಕ್ತನ ವಿದ್ಯಾರ್ಥಿಗಳ ಎರಡು ದಿನಗಳ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಫೈಜಲ್‌ ಮತ್ತು ಶಾಬಾನ ಅವರನ್ನು ಅಭಿನಂದಿಸಲಾಯಿತು.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.