ಅಪಾಯಕಾರಿ ಬಸ್ ತಂಗುದಾಣ ಕೆಡವಿದ ಗ್ರಾ.ಪಂ.
Team Udayavani, Dec 18, 2018, 4:05 AM IST
ಕಟಪಾಡಿ: ಉದ್ಯಾವರ ಮೇಲ್ಪೇಟೆ ಐ.ಟಿ.ಐ. ಬಳಿ ಶಿಥಿಲಗೊಂಡು ಅಪಾಯಕಾರಿಯಾಗಿದ್ದ ಬಸ್ ತಂಗುದಾಣವೊಂದನ್ನು ಉದ್ಯಾವರ ಗ್ರಾ. ಪಂ. ಕೆಡಹುವ ಮೂಲಕ ಸುರಕ್ಷತೆ ಕಲ್ಪಿಸಿದೆ. ಈ ಬಸ್ಸು ತಂಗುದಾಣವನ್ನು ಎಲ್ಲರೂ ಉಪಯೋಗಿಸುತ್ತಿದ್ದು, ಅಪಾಯದ ಪರಿಸ್ಥಿತಿ ನಿರ್ಮಾಣವಾಗಿದ್ದು, ಯಾವುದೇ ಸಂದರ್ಭದಲ್ಲೂ ಅವಘಡ ಸಂಭವಿಸುವ ಸಾಧ್ಯತೆ ಇದೆ. ಅಪಾಯ ಸಂಭವಿಸುವ ಮುನ್ನ ಎಚ್ಚೆತ್ತು ಸುರಕ್ಷತೆ ಕಲ್ಪಿಸುವಂತೆ ಡಿ.12ರಂದು ಜರಗಿದ ಮಕ್ಕಳ ಗ್ರಾಮಸಭೆಯಲ್ಲಿ ವಿದ್ಯಾರ್ಥಿಗಳು ಗ್ರಾಮ ಪಂಚಾಯತ್ನ್ನು ಎಚ್ಚರಿಸಿದ್ದರು. ಇದಕ್ಕೆ ಪೂರಕವಾಗಿ ಸ್ಪಂದಿಸಿದ ಉದ್ಯಾವರ ಗ್ರಾ.ಪಂ. ಇದರ ಆಡಳಿತ ಮತ್ತು ಅಧಿಕಾರಿ ವರ್ಗವು ಈ ಅಪಾಯಕಾರಿ ಬಸ್ ತಂಗುದಾಣವನ್ನು ಡಿ.14ರ ಸಂಜೆ ಕೆಡಹುವ ಮೂಲಕ ಸ್ಪಂದಿಸಿದ್ದಾರೆ. ಸುರಕ್ಷತಾ ದೃಷ್ಟಿಯಿಂದ ಬಸ್ಸು ತಂಗುದಾಣವನ್ನು ಬಳಸದಂತೆ ನಿರ್ಬಂಧಿಸಿ ಈ ಮೊದಲೇ ಸೂಕ್ತವಾದ ಸೂಚನಾ ಫಲಕ, ಅಡ್ಡ ಪಟ್ಟಿಗಳನ್ನು ಅಳವಡಿಸಲಾಗಿತ್ತು. ದಾನಿಗಳ ಸಹಾಯದಿಂದ ಸುಸಜ್ಜಿತ ಬಸ್ಸು ತಂಗುದಾಣದ ನಿರ್ಮಾಣದ ಬಗ್ಗೆಯೂ ಯೋಜನೆ ಮಾಡಲಾಗಿದೆ ಎಂದು ಪಿ.ಡಿ.ಒ. ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ