ಮೀಸಲಾತಿಯಿಂದ ಬದಲಾವಣೆ ಅಸಾಧ್ಯ: ದಿನೇಶ್‌ ಅಮೀನ್‌ ಮಟ್ಟು


Team Udayavani, Dec 24, 2018, 1:55 AM IST

mattu-23-12.jpg

ಉಡುಪಿ: ಮೀಸಲಾತಿಯಿಂದ ಆರ್ಥಿಕ ಸಮಾನತೆಯಾಗಬಹುದೇ ಹೊರತು ಸಾಮಾಜಿಕ ತಾರತಮ್ಯ ಹೋಲಾಡಿಸಲು ಸಾಧ್ಯವಿಲ್ಲ ಎಂದು ಚಿಂತಕ ದಿನೇಶ್‌ ಅಮೀನ್‌ ಮಟ್ಟು ಅಭಿಪ್ರಾಯಪಟ್ಟರು. ರವಿವಾರ ಬನ್ನಂಜೆ ನಾರಾಯಣಗುರು ಕಲ್ಯಾಣಮಂಟಪದಲ್ಲಿ ಅಂಬೇಡ್ಕರ್‌ ಯುವಸೇನೆ ಉಡುಪಿ ಇದರ ಲಾಂಛನ ಬಿಡುಗಡೆ, ಬ್ಲಡ್‌ಬ್ಯಾಂಕ್‌ ಉದ್ಘಾಟನೆ, ಸಾಧಕರಿಗೆ ಸಮ್ಮಾನ ಮತ್ತು ಸಾಂಸ್ಕೃತಿಕ ವೈವಿಧ್ಯಮಯವನ್ನೊಳಗೊಂಡ ‘ಅಂಬೇಡ್ಕರ್‌ ಯುವಜನೋತ್ಸವ 2018’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮೀಸಲಾತಿಯನ್ನು ಜಾರಿಗೆ ತಂದಿರುವುದು ಜಾತಿ ಬಲಪಡಿಸುವುದಕ್ಕಲ್ಲ, ಬದಲಾಗಿ ಜಾತಿ ವ್ಯವಸ್ಥೆಯನ್ನು ನಾಶಪಡಿಸುವುದಕ್ಕಾಗಿ. ಕಣ್ಣಿಗೆ ಕಾಣುವ ಅಸ್ಪೃಶ್ಯತೆಯಿಂದಲೂ ಮನಸ್ಸಿನ ಒಳಗಿರುವ ಅಸ್ಪೃಶ್ಯತೆ ಅಪಾಯಕಾರಿ. ಖಾಸಗೀಕರಣದಿಂದ ಮೀಸಲಾತಿಗೆ ಪೆಟ್ಟು ಬೀಳುತ್ತಿದೆ. ಜನಸಂಖ್ಯೆಗೆ ಅನುಗುಣವಾಗಿ ಪ್ರಾತಿನಿಧ್ಯ ಕೊಟ್ಟರೆ ಮೀಸಲಾತಿ ಬೇಕಾಗಿಲ್ಲ ಎಂದು ದಿನೇಶ್‌ ಅಮೀನ್‌ ಮಟ್ಟು ಹೇಳಿದರು.

ಸಾಮಾಜಿಕ ಬದಲಾವಣೆಗೆ ಜನಜಾಗೃತಿಯ ಕುಲುಮೆ ಸದಾ ಉರಿಯುತ್ತಿರಬೇಕು. ಅಂಬೇಡ್ಕರ್‌ ಅವರ ಹೆಸರಿನಲ್ಲಿ ಸಂಘಟನೆಗಳನ್ನು ಸ್ಥಾಪಿಸಿದಾಗ ಅವರ ಆಶಯಗಳ ಖಚಿತತೆ ಸಂಘಟನೆಯವರಿಗೆ ಇರುತ್ತದೆ. ಸಂಘಟನೆಗಳು ತುಂಬಾ ಇರಬಾರದು ಎಂದು ಬಯಸುವುದು ಮೂರ್ಖತನ ಎಂದು ಅವರು ಹೇಳಿದರು.

ಬ್ಲಡ್‌ ಬ್ಯಾಂಕ್‌ನ್ನು 72 ಬಾರಿ ರಕ್ತದಾನ ಮಾಡಿರುವ ಮಜುನಾಥ್‌ ಕಿನ್ನಿಮೂಲ್ಕಿ ಅವರು ಉದ್ಘಾಟಿಸಿದರು. ಅಂಬೇಡ್ಕರ್‌ ಯುವಸೇನೆಯ ಅಧ್ಯಕ್ಷ ಹರೀಶ್‌ ಸಾಲ್ಯಾನ್‌ ಮಲ್ಪೆ, ಪತ್ರಕರ್ತ ಬಿ.ಆರ್‌.ರಂಗಸ್ವಾಮಿ, ಮುಖಂಡರಾದ ರಾಧಾ ತೊಟ್ಟಂ, ಶಶಿಕಲಾ ಪಾಲನ್‌ ತೊಟ್ಟಂ, ಅನಿಲ್‌ ಅಂಬಲಪಾಡಿ, ದಿನೇಶ್‌ ಮೂಡುಬೆಟ್ಟು, ಸಂಪತ್‌ ಗುಜ್ಜರಬೆಟ್ಟು, ರಮೇಶ್‌ ಮಾಬೆನ್‌ ಅಮ್ಮುಂಜೆ, ಮಂಜುನಾಥ ಕಪ್ಪೆಟ್ಟು ಉಪಸ್ಥಿತರಿದ್ದರು. ಜಯ ಸಾಲ್ಯಾನ್‌ ಪಾಳೆಕಟ್ಟೆ ಸ್ವಾಗತಿಸಿದರು. ರೋಹಿತ್‌ ಉಳ್ಳಾಲ್‌ ಕಾರ್ಯಕ್ರಮ ನಿರ್ವಹಿಸಿದರು. ಕಪ್ಪೆಟ್ಟಿನಿಂದ ಬ್ರಹ್ಮಗಿರಿ-ಕೆಎಂಮಾರ್ಗ ಮೂಲಕ ಅಂಬೇಡ್ಕರ್‌ ಜಾಥಾ ನಡೆಯಿತು. 

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.