ರಾಷ್ಟ್ರಪತಿ ಆತಿಥ್ಯಕ್ಕೆ  ಉಡುಪಿ ಸಿದ್ಧ


Team Udayavani, Dec 27, 2018, 9:58 AM IST

matt.jpg

ಉಡುಪಿ: ರಾಷ್ಟ್ರಪತಿ ರಾಮನಾಥ ಕೋವಿಂದ್‌ ಗುರುವಾರ ಮಧ್ಯಾಹ್ನ ಉಡುಪಿಗೆ ಆಗಮಿಸಲಿದ್ದು, ಬುಧವಾರ ಪೊಲೀಸರು ಸಿದ್ಧತೆಗೆ ಅಂತಿಮ ಸ್ಪರ್ಶ ನೀಡಿದರು. ಮಧ್ಯಾಹ್ನ ಎಸ್‌ಪಿ ಲಕ್ಷ್ಮಣ ನಿಂಬರಗಿ, ಹೆಚ್ಚುವರಿ ಎಸ್‌ಪಿ ಕುಮಾರಚಂದ್ರ ನೇತೃತ್ವದಲ್ಲಿ ರಿಹರ್ಸಲ್‌ ನಡೆಯಿತು. 

ಕರಾವಳಿ ಬೈಪಾಸ್‌ ಸಮೀಪದ ಹೆಲಿಪ್ಯಾಡ್‌ನಿಂದ ರಥಬೀದಿಗೆ ಬಂದ ರಿಹರ್ಸಲ್‌ ದಂಡು ಪೇಜಾವರ ಮಠ ಮತ್ತು ಶ್ರೀಕೃಷ್ಣ ಮಠಕ್ಕೆ ಪ್ರವೇಶಿಸುವ ರಥಬೀದಿ ಮಾರ್ಗ, ಸಮಯ, ವ್ಯವಸ್ಥೆಯನ್ನು ಪರಿಶೀಲಿಸಿತು. ಮರ್ಸಿಡಿಸ್‌ ಬೆಂಜ್‌ ಕಾರಿನಲ್ಲಿ ರಾಷ್ಟ್ರಪತಿ ಆಗಮಿಸಲಿದ್ದು, ಇದೇ ಕಾರು ರಿಹರ್ಸಲ್‌ನಲ್ಲಿ ಪಾಲ್ಗೊಂಡಿತು. ಪ್ಯಾರಾ ಮಿಲಿಟರಿ ಪಡೆ ಈಗಾಗಲೇ ಆಗಮಿಸಿದ್ದು ಭದ್ರತೆಯಲ್ಲಿ ಪಾಲ್ಗೊಂಡಿದೆ. ಐಜಿಪಿ ಅವರು ವ್ಯವಸ್ಥೆಯನ್ನು ಅವಲೋಕಿಸಿದರು. 

ಸ್ಮರಣಿಕೆ ಸಿದ್ಧ 
ಪೇಜಾವರ ಮಠದಲ್ಲಿ ರಾಷ್ಟ್ರಪತಿಯವರಿಗೆ ನೀಡಲು ಶ್ರೀಕೃಷ್ಣ ಪ್ರತಿಮೆಯ ಆಕರ್ಷಕ ಸ್ಮರಣಿಕೆ ಸಿದ್ಧಪಡಿಸಲಾಗಿದೆ. ಹೊರದ್ವಾರವನ್ನು ಅಲಂಕರಿಸಲಾಗಿದೆ. ಪೇಜಾವರ ಮಠ ಮತ್ತು ಶ್ರೀಕೃಷ್ಣ ಮಠ ದಲ್ಲಿ ಆಸನಗಳನ್ನು  ಜೋಡಿಸಲಾಗಿದೆ. ಬೆಳಗ್ಗೆ 8 ಗಂಟೆಯೊಳಗೆ ಎಲ್ಲ ಪೂಜೆಗಳನ್ನು ಮುಗಿಸಲಾಗುವುದು. ಪತ್ರಕರ್ತರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಮಧ್ಯಾಹ್ನ11.45ಕ್ಕೆ ಹೆಲಿಪ್ಯಾಡ್‌ಗೆ ಆಗಮಿಸುವ ರಾಷ್ಟ್ರಪತಿ 12 ಗಂಟೆಗೆ ಪೇಜಾವರ ಮಠಕ್ಕೆ ಆಗಮಿಸುವರು, ಬಳಿಕ ಶ್ರೀಕೃಷ್ಣ ಮಠಕ್ಕೆ ತೆರಳಿ ದೇವರ ದರ್ಶನ ಪಡೆಯುವರು. ಅಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದ ತಣ್ತೀ ಸಂಶೋಧನ ಸಂಸದ್‌ ಹೊರತಂದಿರುವ “ಮಹಾಭಾರತ’ದ ಇ ಬುಕ್‌ ಉದ್ಘಾಟಿಸುವ ಸಾಧ್ಯತೆ ಇದೆ. 

ರಾಷ್ಟ್ರಪತಿ ಭೇಟಿ ಸಂದರ್ಭ ಪೇಜಾವರ ಮಠದಲ್ಲಿ ಪೇಜಾವರ ಹಿರಿಯ ಮತ್ತು ಕಿರಿಯ ಸ್ವಾಮೀಜಿ, ಪರ್ಯಾಯ ಪಲಿಮಾರು ಸ್ವಾಮೀಜಿ ಭಾಗವಹಿಸು ವರು. ಶ್ರೀಕೃಷ್ಣ ಮಠದಲ್ಲಿ ಈ ಮೂವರು ಸ್ವಾಮೀಜಿ ಯವರಲ್ಲದೆ ಸೋದೆ, ಕಾಣಿಯೂರು, ಅದಮಾರು ಕಿರಿಯ ಸ್ವಾಮೀಜಿ ಉಪಸ್ಥಿತರಿರುವರು. ಆಯ್ದ ಬೆರಳೆಣಿಕೆ ವ್ಯಕ್ತಿಗಳಿಗೆ ಮಾತ್ರ ಪಾಸ್‌ ನೀಡಲಾಗಿದೆ. ಪೇಜಾವರ ಸ್ವಾಮೀಜಿಯವರು ಬುಧವಾರ ರಾತ್ರಿ ಬೆಂಗಳೂರಿನಿಂದ ಉಡುಪಿ ಮಠಕ್ಕೆ ಆಗಮಿಸಿದ್ದಾರೆ.

ಸಾರ್ವಜನಿಕರಿಗೆ ಕಿರಿಕಿರಿ
ರಥಬೀದಿ ಸುತ್ತಮುತ್ತಲಿನ ಅಂಗಡಿಗಳನ್ನು ಬುಧವಾರವೇ ಬಂದ್‌ ಮಾಡಿದ್ದರಿಂದ ಮತ್ತು ರಿಹರ್ಸಲ್‌ನಿಂದ ಸಾರ್ವಜನಿಕರಿಗೆ, ವ್ಯವಹಾರಸ್ಥರಿಗೆ ತೊಂದರೆಯಾಯಿತು. 

ಶಾಲೆಗಳಿಗೆ ರಜೆ
ರಥಬೀದಿ ಸಮೀಪದ ಮುಕುಂದಕೃಪಾ ಶಾಲೆ ಮತ್ತು ವಿದ್ಯೋದಯ ಶಾಲೆಗಳಿಗೆ ಗುರುವಾರ ರಜೆ ಸಾರಲಾಗಿದೆ. ವಿದ್ಯೋದಯ ಶಾಲೆಯಲ್ಲಿ ಪೊಲೀಸ್‌ ವ್ಯವಸ್ಥೆ ಮಾಡಲಾಗಿದೆ.

ಮಾರ್ಗ ಬದಲಾವಣೆ
ಉಡುಪಿ: ನಗರದಲ್ಲಿ ಗುರುವಾರ ಬೆಳಗ್ಗಿನಿಂದ ಸಂಜೆಯ ವರೆಗೂ ವಾಹನ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಗಳು ಹೆಚ್ಚು. ಹಾಗಾಗಿ ನಗರಕ್ಕೆ ಆಗಮಿಸುವವರು ತುರ್ತು ಸಂದರ್ಭ ವಿನಾ ವಿಳಂಬಿಸಿಯೇ ಆಗಮಿಸುವುದು ಉತ್ತಮ. ಗುರುವಾರ ಬೆಳಗ್ಗೆ 7ರಿಂದ ಅಪರಾಹ್ನ 4ರ ವರೆಗೆ ಸಂಚಾರ ಮಾರ್ಗವನ್ನು ತಾತ್ಕಾಲಿಕವಾಗಿ ಬದಲಾಯಿಸಲಾಗುತ್ತದೆ. ಉಡುಪಿಯಲ್ಲಿ ಈಗ ಪ್ರವಾಸಿಗರ/ ಯಾತ್ರಾರ್ಥಿಗಳ ಸಂಖ್ಯೆಯೂ ಹೆಚ್ಚಿರುವುದರಿಂದ ಬದಲಾಯಿಸಿದ ಮಾರ್ಗ ಗಳಲ್ಲಿಯೂ ವಾಹನ ನಿಬಿಡತೆ ಉಂಟಾಗುವ ಸಾಧ್ಯತೆಗಳೂ ಇವೆ.

11.30ರಿಂದ ಝೀರೋ ಟ್ರಾಫಿಕ್‌ 
ಆದಿ ಉಡುಪಿಯಿಂದ ಬನ್ನಂಜೆ-ಶಿರಿಬೀಡು, ಸಿಟಿ ಬಸ್‌ನಿಲ್ದಾಣ- ಕಲ್ಸಂಕ- ರಥಬೀದಿ ವರೆಗೆ ಬೆಳಗ್ಗೆ 11.30ರಿಂದ ಅಪರಾಹ್ನ ಸುಮಾರು 2 ಗಂಟೆಯ ನಡುವೆ 2 ಬಾರಿ “ಝೀರೋ ಟ್ರಾಫಿಕ್‌’ ಇರಲಿದೆ. ರಾ.ಹೆದ್ದಾರಿ 66ರ ಕರಾವಳಿ ಬೈಪಾಸ್‌, ಅಂಬಾಗಿಲು, ಉದ್ಯಾವರ ಜಂಕ್ಷನ್‌ ಹಾಗೂ ಅಂಬಲಪಾಡಿ ಜಂಕ್ಷನ್‌ಗಳಲ್ಲಿಯೂ ಸಂಚಾರ ದಟ್ಟಣೆಯ ಸಾಧ್ಯತೆಗಳಿವೆ. “ಪೊಲೀಸರು ಅತಿ ನಿರ್ಬಂಧ ಹೇರುತ್ತಿದ್ದಾರೆ. ಭದ್ರತೆ ಹೆಸರಿನಲ್ಲಿ ರಸ್ತೆ ಬ್ಲಾಕ್‌ ಮಾಡುತ್ತಿದ್ದಾರೆ’ ಎಂಬ ದೂರುಗಳು ಸಾರ್ವಜನಿಕರಿಂದ ಬುಧವಾರವೇ ಬರಲಾರಂಭಿಸಿದ್ದವು.

ದೊಡ್ಡವರು ಮತ್ತೆ ಮತ್ತೆ ಬಂದರೆ! 
ಉಡುಪಿ: ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿ, ರಾಜ್ಯಪಾಲರು, ಮಂತ್ರಿಮಾಗಧರು ಆಗಾಗ್ಗೆ ಬಂದರೆ ಸ್ಥಳೀಯರಿಗೆ ಒಂದಿಷ್ಟು ತೊಂದರೆಯಾದರೂ ಊರಿಗೆ ಒಂದಿಷ್ಟು ಪ್ರಯೋಜನಗಳೂ ಆಗುತ್ತವೆ. ರಾಷ್ಟ್ರಪತಿ ಭೇಟಿಗಾಗಿ ಡಿಸೆಂಬರ್‌ ಎರಡನೇ ವಾರದಿಂದಲೇ ಜಿಲ್ಲಾಡಳಿತ ಸಿದ್ಧತೆ ನಡೆಸುತ್ತಿದೆ. ಬುಧವಾರದಿಂದಲೇ ವಾಹನಸಂಚಾರ ಮುಕ್ತ ರಸ್ತೆ ಪ್ರಯೋಗ ನಡೆಸಲಾಗುತ್ತಿದೆ. ರಥಬೀದಿ, ಬನ್ನಂಜೆ ಸುತ್ತಮುತ್ತಲಿನ ಅಂಗಡಿಗಳನ್ನು ಮುಚ್ಚಿಸಲಾಗುತ್ತಿದೆ. ಸಾವಿರಕ್ಕೂ ಹೆಚ್ಚು ಪೊಲೀಸರು ಏದುಸಿರು ಬಿಟ್ಟುಕೊಂಡು ಓಡಾಡುತ್ತಿದ್ದಾರೆ. ಇಷ್ಟೆಲ್ಲ ಕಿರಿಕಿರಿ ಅನುಭವಿಸಿದರೂ ಒಂದಷ್ಟು ಅನುಕೂಲವಾಗಿದೆ. ಸಾಮಾನ್ಯರು ಎಷ್ಟೇ ಬೊಬ್ಬೆ ಹೊಡೆದರೂ ಎಚ್ಚರವಾಗದ ಆಡಳಿತದವರು ಈಗ ಒಮ್ಮಿಂದೊಮ್ಮೆಗೆ ಎಚ್ಚೆತ್ತು ರಸ್ತೆ ದುರಸ್ತಿ, ತೇಪೆ, ದಾರಿ ಬದಿ ಇದ್ದ ಕಸ ವಿಲೇವಾರಿ ಇತ್ಯಾದಿ ಕೆಲಸಗಳನ್ನು ಮಾಡುತ್ತಿದ್ದಾರೆ!

ರಸ್ತೆ ದುರಸ್ತಿಗೆ 1 ಕೋ.ರೂ.
ಉಡುಪಿ ನಗರಸಭೆಯ 34 ವಾರ್ಡುಗಳಲ್ಲಿ ರಸ್ತೆ, ದುರಸ್ತಿಗಳನ್ನು ಸುಮಾರು 1 ಕೋ.ರೂ. ವೆಚ್ಚದಲ್ಲಿ ಮಾಡಲಾಗಿದೆ. ವೆಚ್ಚವನ್ನು ನಗರಸಭೆ ಭರಿಸಿದೆಯಾದರೂ ರಾಷ್ಟ್ರಪತಿ ಭೇಟಿಗಾಗಿಯೇ ತೆಗೆದಿಟ್ಟ ಹಣವಲ್ಲ. ಇವೆಲ್ಲ ಟೆಂಡರ್‌ ಕಾಮಗಾರಿಗಳು. ಆದರೂ ರಾಷ್ಟ್ರಪತಿ ಬಾರದೆ ಇದ್ದರೆ ಇಷ್ಟು ಬೇಗ ನಡೆಯುತ್ತಿರಲಿಲ್ಲ. 2017ರಲ್ಲಿ ರಾಷ್ಟ್ರಪತಿಗಳಾಗಿದ್ದ ಪ್ರಣವ್‌ ಮುಖರ್ಜಿ ಬಂದಾಗ ಕರಾವಳಿ ಬೈಪಾಸ್‌ ಕಾಮಗಾರಿ ಪೂರ್ಣಗೊಂಡಿರಲಿಲ್ಲ. ಆದರೂ ಅದರ ಅಂಡರ್‌ಪಾಸ್‌ನ್ನು ತರಾತುರಿಯಲ್ಲಿ ಬಿಟ್ಟುಕೊಡಲಾಗಿತ್ತು. 

ಟಾಪ್ ನ್ಯೂಸ್

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

12-

Gangolli: ರಿಕ್ಷಾ-ಕಾರು ಢಿಕ್ಕಿ

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.