ಕೊಡಂಗಳ ಮರ್ಣೆ: 14ನೇ ಶತಮಾನದ ಆಳುಪ ಶಾಸನ ಪತ್ತೆ


Team Udayavani, Dec 29, 2018, 12:30 AM IST

shriva.jpg

ಶಿರ್ವ: ಮೂಡುಬೆಳ್ಳೆ ಸಮೀಪದ ಕೊಡಂಗಳ-ಮರ್ಣೆಯ ಕೊಲಪು ಮಹಾವಿಷ್ಣುಮೂರ್ತಿ ದೇವಾಲಯದ ಹೊರ ಪ್ರಾಕಾರದಲ್ಲಿ ತ್ರಿಕೋನಾಕಾರದಲ್ಲಿರುವ ಒಂದು ವಿಶಿಷ್ಟ ಶಾಸನ ಕಲ್ಲು ಪತ್ತೆಯಾಗಿದೆ. 

ಶಾಸನದ ಮೇಲ್ಭಾಗದಲ್ಲಿ   ಒಂದು  ಶಿವಲಿಂಗ, ಎಡ-ಬಲದಲ್ಲಿ ಎರಡು ದೀಪದ ಕಂಭಗಳು ಹಾಗೂ ನಂದಿಯ ಅಸ್ಪಷ್ಟ ಶಿಲ್ಪದ ಚಿತ್ರಣವಿದ್ದು ಮೇಲೆ ಸೂರ್ಯ-ಚಂದ್ರರ ಉಬ್ಬು ಶಿಲ್ಪಗಳಿವೆ.

ಸುಮಾರು 19 ಸಾಲುಗಳ ಬರಹವನ್ನು ಹೊಂದಿರುವ ಈ ಶಾಸನದಲ್ಲಿ ಕೆಳಭಾಗದಲ್ಲಿನ 7 ಸಾಲುಗಳ ಬರಹ ಅಸ್ಪಷ್ಟವಾಗಿ ಗೋಚರಿಸುತ್ತದೆ. ಮೇಲಿನ ಭಾಗದಲ್ಲಿರುವ ಬರಹ ಸಂಪೂರ್ಣ ಅಳಿಸಿ ಹೋಗಿದೆ. ಶಾಸನೋಕ್ತ ವಿಷಯದ ಪ್ರಕಾರ ಇದೊಂದು ದಾನ ಶಾಸನವೆಂದು ಸ್ಪಷ್ಟವಾಗುತ್ತದೆ ಎಂದು ಶಿರ್ವ ಎಂ.ಎಸ್‌.ಆರ್‌.ಎಸ್‌. ಕಾಲೇಜು ಪುರಾತತ್ವ ಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ|ಟಿ.ಮುರುಗೇಶಿ ತಿಳಿಸಿದ್ದಾರೆ.

ಶಾಸನದಲ್ಲಿ ದೇವಾಲಯದ ಅಧಿಕಾರಿಯನ್ನು ಉಲ್ಲೇಖೀಸಲಾಗಿದೆ. ಆಳುಪರ ಇತರೆ ಶಾಸನಗಳಲ್ಲಿ  ಅಧಿಕಾರಿಗಳ ಉಲ್ಲೇಖ ಕಂಡುಬರುತ್ತದೆ. ಶಾಸನದ ಲಿಪಿ ಲಕ್ಷಣದ ಆಧಾರದ ಮೇಲೆ 14ನೇ ಶತಮಾನದ ಶಾಸನವೆಂದು ಕಾಲವನ್ನು ನಿರ್ಣಯಿಸಬಹುದಾಗಿದೆ. ಶಾಸನದ ಕೆಳಭಾಗದಲ್ಲಿ ಎದುರು-ಬದುರಾಗಿ ನಿಂತ ಎರಡು ಕರುಗಳ ಉಬ್ಬು ಶಿಲ್ಪಗಳನ್ನು ಚಿತ್ರಿಸಲಾಗಿದೆ.

ಶಾಸನದ ಮಹತ್ವ
ಶಾಸನ ಇರುವ ದೇವಾಲಯವನ್ನು ಈಗ ಕೊಲಪು ಮಹಾವಿಷ್ಣುಮೂರ್ತಿ ದೇವಾಲಯವೆಂದು ಕರೆಯಲಾಗುತ್ತಿದೆ. ಶಾಸನೋಕ್ತ ಅಧಿಕಾರಿಯ ಉಲ್ಲೇಖ ಮೂಲತಃ ಈ ದೇವಾಲಯ ಜೈನ ಅಧಿಕಾರಿಗಳ ಆಡಳಿತಕ್ಕೊಳಪಟ್ಟಿತ್ತೆಂದು ಸ್ಪಷ್ಟಪಡಿಸುತ್ತದೆ. ಪ್ರಸ್ತುತ ದೇವಾಲಯದಲ್ಲಿನ ಮಹಾವಿಷ್ಣುಮೂರ್ತಿ 17ನೇ ಶತಮಾನದ ಶಿಲ್ಪ ಶೈಲಿಯನ್ನು ಹೊಂದಿದೆ. ಆದ್ದರಿಂದ ಪ್ರಸ್ತುತ ದೇವಾಲಯ ಮೂಲತಃ ಶೈವ ದೇವಾಲಯವಾಗಿದ್ದು,ಜೈನರ ಆಡಳಿತೆಗೆ ಒಳಪಟ್ಟ ದೇವಾಲಯ ಆಗಿತ್ತು. ಅನಂತರ ವೈಷ್ಣವರ ಅಧೀನಕ್ಕೆ ಒಳಪಟ್ಟು, ಮಹಾವಿಷ್ಣುಮೂರ್ತಿ ದೇವಾಲಯವಾಗಿ ಮಾರ್ಪಟ್ಟಿದೆ ಎಂಬ ಅಂಶದ ಮೇಲೆ ಈ ಶಾಸನ ಬೆಳಕು ಚೆಲ್ಲುತ್ತದೆ. ಈ ಶಾಸನ ಅಧ್ಯಯನದಲ್ಲಿ  ವೆಂಕಟೇಶ್‌ ಭಟ್‌, ಅರ್ಚಕರಾದ ಪುಂಡರೀಕಾಕ್ಷ ಆಚಾರ್ಯ, ಬ್ರಹ್ಮಾವರ ಎಸ್‌.ಎಂ.ಎಸ್‌. ಕಾಲೇಜಿನ ಪ್ರಶಾಂತ್‌ ಶೆಟ್ಟಿ  ಸಹಕರಿಸಿದ್ದಾರೆ.

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.