ಜ. 27-31: ಅತ್ತೂರು ಜಾತ್ರೆ


Team Udayavani, Jan 16, 2019, 4:46 AM IST

attur.jpg

ಕಾರ್ಕಳ: ಅತ್ತೂರಿನ ಸಂತ ಲಾರೆನ್ಸ್‌ ಬಸಿಲಿಕಾದ ವಾರ್ಷಿಕ ಮಹೋತ್ಸವ (ಅತ್ತೂರು ಜಾತ್ರೆ)ವು ಜ. 27ರಿಂದ 31ರ ವರೆಗೆ ಜರಗಲಿದೆ. ಜ. 20ರಂದು ವಿವಿಧ ಕಾರ್ಯಕ್ರಮಗಳ ಉದ್ಘಾಟನೆ ನಡೆಯಲಿದೆ ಎಂದು ಬಸಿಲಿಕಾದ ನಿರ್ದೇಶಕ ಫಾ| ಜಾರ್ಜ್‌ ಡಿ’ಸೋಜಾ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ವಾರ್ಷಿಕ ಮಹೋತ್ಸವದಲ್ಲಿ 35 ದಿವ್ಯ ಬಲಿಪೂಜೆಗಳು ಕೊಂಕಣಿಯಲ್ಲಿ,11 ಕನ್ನಡದಲ್ಲಿ ನಡೆಯಲಿವೆ. ಶಿವಮೊಗ್ಗ, ಬೆಳ್ತಂಗಡಿ, ಮೈಸೂರು, ಮಂಗಳೂರು ಹಾಗೂ ಉಡುಪಿ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರು ಬಲಿಪೂಜೆ ನೆರವೇರಿಸಲಿದ್ದಾರೆ. ಜ. 28ರಂದು ಪೂರ್ವಾಹ್ನ10ಕ್ಕೆ ಅಸ್ವಸ್ಥರಿಗಾಗಿ ಪೂಜೆ ನಡೆಯಲಿದೆ.

ಮಹೋತ್ಸವಕ್ಕೆ ಸರ್ವರೀತಿಯ ಸಿದ್ಧತೆಗಳು ನಡೆಯುತ್ತಿವೆ. ಹಣ, ವಸ್ತುರೂಪದ ಹರಕೆ, ಮೋಂಬತ್ತಿ ಹರಕೆ ಸಲ್ಲಿಸಲು ಚರ್ಚ್‌ನ ಎಡಬದಿಯಲ್ಲಿ ವ್ಯವಸ್ಥೆ ಮಾಡಲಾಗಿದೆ. 5 ಕಡೆಗಳಲ್ಲಿ ಕುಡಿಯುವ ನೀರು, 60 ಶೌಚಾಲಯ, ವಿವಿಧ ಭಾಗಗಳಿಂದ ಆಗಮಿಸುವವರಿಗೆ ಅಲ್ಲಲ್ಲಿ ಪಾರ್ಕಿಂಗ್‌, ಪಾಸ್‌ ಹೊಂದಿದವರಿಗೆ ಪರ್ಪಲೆಗುಡ್ಡೆಯಲ್ಲಿ ಪಾರ್ಕಿಂಗ್‌ ವ್ಯವಸ್ಥೆ ಮಾಡಲಾಗಿದೆ. ಅಂಗಡಿ, ಸ್ಟಾಲ್‌ಗ‌ಳಲ್ಲಿ ದುಡಿಯುವ ಕಾರ್ಮಿಕರಿಗೆ ಶೌಚಾಲಯ, ಸ್ನಾನಗೃಹಗಳನ್ನು ನಿರ್ಮಿಸಲು ಸ್ಥಳೀಯ ಆಡಳಿತಕ್ಕೆ ತಿಳಿಸಲಾಗಿದೆ ಎಂದರು.

ಭಕ್ತರ ಸುರಕ್ಷೆಗೆ ಆದ್ಯತೆ: ಭಕ್ತರ ಸುರಕ್ಷೆ ನಿಟ್ಟಿನಲ್ಲಿ ಹಳೆಯ ಹಾಗೂ ಹೊಸ ಇಗರ್ಜಿಗಳ ಒಳಗಡೆ, ಬಸಿಲಿಕಾದ ವಠಾರದಲ್ಲಿ 64 ಸಿಸಿ ಕೆಮರಾ ಅಳವಡಿಸಲಾಗಿದೆ. ಅಂಗಡಿ ಮುಂಗಟ್ಟುಗಳ ಪರಿಸರದಲ್ಲಿ ಕೆಮರಾ ಅಳವಡಿಸಲು ಸ್ಥಳೀಯಾಡಳಿತಕ್ಕೆ ಸೂಚಿಸಲಾಗಿದೆ ಎಂದರು. ಚರ್ಚ್‌ನ ಸಹಾಯಕ ನಿರ್ದೇಶಕ ಫಾ| ಜೆನ್ಸಿಲ್‌ ಆಳ್ವ, ಚರ್ಚ್‌ನ 18 ಆಯೋಗದ ಅಧ್ಯಕ್ಷ ರಿಚರ್ಡ್‌ ಪಿಂಟೊ, ಜಾನ್‌ ಡಿ’ಸೋಜಾ, ಸಂತೋಷ್‌ ಡಿ’ಸೋಜಾ, ಲೀನಾ ಡಿ’ಸಿಲ್ವಾ ಉಪಸ್ಥಿತರಿದ್ದರು.

ಭಿಕ್ಷಾಟನೆಗಿಲ್ಲ ಅವಕಾಶ
ವಾರ್ಷಿಕ ಮಹೋತ್ಸವದ ಸಂದರ್ಭ ನಡೆಯುವ ಭಿಕ್ಷಾಟನೆಯನ್ನು ಈ ವರ್ಷ ಕಾನೂನಾತ್ಮಕವಾಗಿ ನಿಷೇಧಿಸಲಾಗಿದೆ. ಆದ್ದರಿಂದ ಹಬ್ಬದ ಶುಕ್ರವಾರ ಭಿಕ್ಷುಕರಿಗೆ ನೀಡುತ್ತಿದ್ದ ಹಣ ವಿತರಣೆಯನ್ನು ನಿಷೇಧಿಸಲಾಗಿದ್ದು, ಜಾತ್ರೆಯಲ್ಲಿ ಭಿಕ್ಷುಕರು ಕಂಡುಬಂದರೆ ನಿರಾಶ್ರಿತ ಕೇಂದ್ರಗಳಿಗೆ ಬಿಡಲಾಗುವುದು ಎಂದು ಫಾ| ಜಾರ್ಜ್‌ ಡಿ’ಸೋಜಾ ತಿಳಿಸಿದರು.

ಟಾಪ್ ನ್ಯೂಸ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.