ನಿಧಿ ಕುಂಭ ಸ್ಥಾಪನೆಯ ಆಮಂತ್ರಣ ಪತ್ರ ಬಿಡುಗಡೆ


Team Udayavani, Jan 17, 2019, 1:30 AM IST

nidhi-kumba.png

ಕಾಪು: ಸುಮಾರು  35 ಕೋ. ರೂ. ವೆಚ್ಚದಲ್ಲಿ ಸಮಗ್ರವಾಗಿ ಜೀರ್ಣೋದ್ಧಾರಗೊಳ್ಳಲಿರುವ‌ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದಲ್ಲಿ ಜ. 23ರಂದು ಜರಗಲಿರುವ ನಿಧಿಕುಂಭ ಸ್ಥಾಪನೆಯ ಆಮಂತ್ರಣ ಪತ್ರಿಕೆಯನ್ನು ಮಂಗಳವಾರ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಕಚೆೇರಿಯಲ್ಲಿ ಬಿಡುಗಡೆಗೊಳಿಸಲಾಯಿತು. 

ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ  ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿ, ಹೊಸ ಮಾರಿಗುಡಿಯು ದೇವಿಗೆ ಪ್ರಿಯವಾದ ಕೆಂಪು ಕಲ್ಲು (ಹಿಲ್‌ಕಲ್‌ ರೆಡ್‌) ಶಿಲೆಯಲ್ಲಿ ಮಾರಿಯಮ್ಮ ಮತ್ತು ಉಚ್ಚಂಗಡಿ ಗುಡಿ ನಿರ್ಮಾಣಗೊಳ್ಳಲಿದೆ. ಈಗಿನ ದೇವಾಲಯ ಪ್ರಾಕಾರದಿಂದ ಸಂಪೂರ್ಣ ಹಿಂದುಗಡೆಯಲ್ಲಿ ಖರೀದಿಸಲಾಗಿರುವ 1.03 ಎಕರೆ ಭೂಮಿಯಲ್ಲಿ 10 ಸಾವಿರ ಚದರ ಮೀಟರ್‌ ವಿಸೀ¤ರ್ಣದೊಂದಿಗೆ, ಭೂಮಟ್ಟದಿಂದ ಸುಮಾರು 7.50 ಅಡಿ ಎತ್ತರದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿದೆ ಎಂದರು. 

ಚೋಳ, ಹೊಯ್ಸಳ, ಕದಂಬ, ನೇರ,  ಚಾಲುಕ್ಯ ಶೈಲಿಯಲ್ಲಿ ನಿರ್ಮಾಣ ಕಾರ್ಯ  ಹೊಸ ಮಾರಿಗುಡಿ ದೇಗುಲವು ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ಅಧೀನದಲ್ಲಿದ್ದು, ಉಡುಪಿ ಜಿಲ್ಲಾಧಿಕಾರಿಗಳ ಅನುಮತಿ ಪಡೆದು ಕೊಂಡು ದೇವಸ್ಥಾನದ ನಿಧಿ ಮತ್ತು ಅಭಿವೃದ್ಧಿ ಸಮಿತಿಯ ನಿಧಿ ವಿನಿಯೋಗಿಸಿಕೊಂಡು ಪುನರ್‌ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಚೋಳ, ಹೊಯ್ಸಳ, ಕದಂಬ, ನೇರ ಮತ್ತು ಚಾಲುಕ್ಯ ಶೈಲಿಯಲ್ಲಿ ಮಾರಿಗುಡಿಯ ನವ ನಿರ್ಮಾಣ ಕಾರ್ಯ ನಡೆಯಲಿದ್ದು, ಶಿಲ್ಪಿ ಪಯ್ಯನ್ನೂರು ಶಶಿಧರ ಆಚಾರ್ಯ ಸಮಗ್ರ ಜೀರ್ಣೋದ್ಧಾರ ಕಾರ್ಯ ನಡೆಸಲಿದ್ದಾರೆ. ಬೆಂಗಳೂರಿನ ಪ್ರಸಿದ್ಧ ಗುತ್ತಿಗೆದಾರ ಶಶಿಧರ್‌ ವಾತಿಯಾ ಟೆಂಡರ್‌ ಮೂಲಕ ದೇಗುಲ ನಿರ್ಮಾಣದ ಗುತ್ತಿಗೆ ವಹಿಸಿಕೊಂಡಿದ್ದಾರೆ ಎಂದರು.

9 ಸಂಖ್ಯೆಗೆ ವಿಶೇಷ ಮಹತ್ವ 
ಹೊಸ ಮಾರಿಗುಡಿಯಲ್ಲಿ ನವದುರ್ಗೆ ಯರ ಒಂಬತ್ತು ಸೋಪಾನ, ಒಂಭತ್ತು ಹಂತ, ಒಂಭತ್ತು ಗೋಪುರಗಳು ಇರುವಂತೆ ನವ ನಿರ್ಮಾಣ ನಡೆಯಲಿದೆ. ಈ ಮೂಲಕ ಸುಂದರ ಶಿಲ್ಪಗಳ ಕಲರವ, ಮನೋಹರ ದೃಶ್ಯಾವಳಿಗಳ ಅನಾವರಣ, ವಾಸ್ತು ವಿನ್ಯಾಸ, ನಿರ್ಮಾಣ ಶೆ„ಲಿಗಳೊಂದಿಗೆ ವಿದ್ವಾಂಸರ,  ವಿಷಯ ತಜ್ಞರ ಸಲಹೆಯಂತೆ ಅಮ್ಮನ ಆಲಯ ಸಿದ್ಧಗೊಳಿಸಲಾಗುವುದು. ನವೀಕರಣ ಗೊಳ್ಳುವ ಈ ಆಲಯವು ಸಂಪೂರ್ಣ ಶಿಲಾಮಯವಾಗಿ ಮೂಡಿ ಬರಲಿದೆ. ಅಭಿವೃದ್ಧಿ ಸಮಿತಿಯ ನೇತೃತ್ವದಲ್ಲಿ ವಿವಿಧ ಉಪಸಮಿತಿ ರಚಿಸಲಾಗುತ್ತಿದ್ದು, ಸಮಿತಿಯ ರಚನೆಯಲ್ಲೂ 9 ಮಂದಿಯ ತಂಡಗಳ ರಚನೆಗೆ ಒತ್ತು ನೀಡಲಾಗುತ್ತಿದೆ. ನಿಧಿ ಕುಂಭ ಪ್ರತಿಷ್ಟಾಪನೆಗೆ ಪೂರ್ವಭಾವಿ ಯಾಗಿ 99 ಮಂದಿ  ಭಕ್ತರು  ದೀಪ ಬೆಳಗಿಸಿ ನಿಧಿ ಕುಂಭಕ್ಕೆ ಚಾಲನೆ ನೀಡಲಿದ್ದಾರೆ ಎಂದವರು ತಿಳಿಸಿದರು. 

ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷ ಅನಿಲ್‌ ಬಲ್ಲಾಳ್‌ ಬೀಡು, ಪ್ರಧಾನ ಕಾರ್ಯದರ್ಶಿ ರಮೇಶ್‌ ಹೆಗ್ಡೆ ಕಲ್ಯ, ಕೋಶಾಧಿಕಾರಿ ಪ್ರಶಾಂತ್‌ ಕುಮಾರ್‌ ಶೆಟ್ಟಿ, ಉಪಾಧ್ಯಕ್ಷರಾದ ಕಾಪು ದಿವಾಕರ ಶೆಟ್ಟಿ, ಮಾಧವ ಆರ್‌. 
ಪಾಲನ್‌, ಗಂಗಾಧರ ಸುವರ್ಣ, ಸಲಹೆಗಾರ ನಡಿಕೆರೆ ರತ್ನಾಕರ ಶೆಟ್ಟಿ, ಪ್ರಚಾರ ಸಮಿತಿಯ ಅಧ್ಯಕ್ಷ ಯೋಗೀಶ್‌ ಶೆಟ್ಟಿ ಬಾಲಾಜಿ, ಸಮಿತಿ ಪದಾಧಿಕಾರಿಗಳಾದ ನಿರ್ಮಲ್‌ ಕುಮಾರ್‌ ಹೆಗ್ಡೆ, ಶೇಖರ್‌ ಸಾಲ್ಯಾನ್‌, ಜಯರಾಮ ಆಚಾರ್ಯ, ಹರೀಶ್‌ ನಾಯಕ್‌, ಪ್ರಭಾತ್‌ ಶೆೆಟ್ಟಿ, ಶೇಖರ್‌ ಕೋಟ್ಯಾನ್‌, ರಮೇಶ್‌ ಶೆಟ್ಟಿ, ಕೃಷ್ಣ ಕುಮಾರ್‌ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.