ಸವಾರ ಸ್ಥಳದಲ್ಲೇ ಸಾವು, ಇಬ್ಬರು ಗಂಭೀರ
Team Udayavani, Jan 17, 2019, 12:30 AM IST
ಕಾರ್ಕಳ: ಬಸ್ ಹಾಗೂ ಸ್ಕೂಟರ್ ಪರಸ್ಪರ ಢಿಕ್ಕಿ ಹೊಡೆದು ಓರ್ವ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ಕುಕ್ಕುಂದೂರು ನೆಲ್ಲಿಗುಡ್ಡೆಯ ಬಳಿ ಬುಧವಾರ ಬೆಳಗ್ಗೆ ಸಂಭವಿಸಿದೆ.
ಸ್ಕೂಟರ್ ಚಲಾಯಿಸುತ್ತಿದ್ದ ದಿನೇಶ್ (28) ಮೃತ ವ್ಯಕ್ತಿ. ಅವರು ಪಡ್ಯ ಕದಿಕೆ ನಿವಾಸಿ ಕೃಷ್ಣನ್-ರತಿ ನಾಯಕ್ ದಂಪತಿಯ ಏಕೈಕ ಪುತ್ರರಾಗಿದ್ದರು. ಹಿಂಬದಿ ಸವಾರರಾಗಿದ್ದ ವೇಲು ಹಾಗೂ ಮುರುಗೇಶ್ ಗಂಭೀರ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸ ಲಾಗಿದೆ. ಇವರೆಲ್ಲರೂ ಕಾರ್ಮಿಕ ರಾಗಿದ್ದು, ತಮಿಳುನಾಡು ಮೂಲದವರಾಗಿದ್ದಾರೆ.ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆಲ್ಮೆಟ್ ರಹಿತ ತ್ರಿಬಲ್ ರೈಡ್!
ಕಾರ್ಕಳದಿಂದ ಉಡುಪಿಯತ್ತ ತೆರಳುತ್ತಿದ್ದ ದ್ವಿಚಕ್ರ ವಾಹನ ಉಡುಪಿ ಕಡೆಯಿಂದ ಕಾರ್ಕಳ ಕಡೆಗೆ ತೆರ ಳುತ್ತಿದ್ದ ಬಸ್ಸಿಗೆ ಢಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ದಿನೇಶ ಸ್ಥಳದಲ್ಲೇ ಮೃತಪಟ್ಟಿದ್ದರು. ಸಹಸವಾರರು ರಸ್ತೆಗೆ ಉರುಳಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಸ್ಕೂಟರ್ನಲ್ಲಿ ಮೂವರು ತೆರಳುತ್ತಿದ್ದು, ಯಾರೂ ಹೆಲ್ಮೆಟ್ ಧರಿಸಿರಲಿಲ್ಲ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ