ಸಾಹಿತ್ಯ ಸಮ್ಮೇಳನದ ಫ‌ಲಶ್ರುತಿ ಅಗತ್ಯ


Team Udayavani, Jan 18, 2019, 12:50 AM IST

sahitya-sammelana.jpg

ಸಮ್ಮೇಳನಕ್ಕಾಗಿ ಸಮ್ಮೇಳನ ನಡೆಯುವ ಬದಲು ಸಮ್ಮೇಳನದಿಂದ ಫ‌ಲಶ್ರುತಿ ಸಿಗುವಂತಾಗಬೇಕು. ಅಲ್ಲಿ ಗಂಭೀರವಾದ ಚರ್ಚೆ  ನಡೆಯುವಂತಾಗಬೇಕು. ಈಗ ಸಮ್ಮೇಳನವೆಂದರೆ ಹಬ್ಬದ ವಾತಾವರಣ ಇರುತ್ತದೆ. ಸಮ್ಮೇಳನದ ನಿರ್ಣಯವೂ ಅನುಷ್ಠಾನವಾಗುವುದಿಲ್ಲ. 

ಉಡುಪಿ: ಜ.18ರಂದು ಬ್ರಹ್ಮಗಿರಿ ಲಯನ್ಸ್‌ ಭವನದಲ್ಲಿ ನಡೆಯುವ ಉಡುಪಿ ತಾ| ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಸಾಹಿತಿ, ಸಂಘಟಕ ಡಾ| ಗಣನಾಥ ಎಕ್ಕಾರು ಆಯ್ಕೆಯಾಗಿದ್ದಾರೆ. ಮೂಲತಃ ಮಂಗಳೂರು ತಾಲೂಕಿನ ಎಕ್ಕಾರಿನವರಾದ ಡಾ| ಗಣನಾಥರು, ಹತ್ತು ಪುಸ್ತಕಗಳ ರಚನೆ, ಪತ್ರಿಕೆಗಳಲ್ಲಿ ಲೇಖನಗಳು, ಜಾನಪದ ಮತ್ತು ಸಾಹಿತ್ಯತಜ್ಞರು. ಉಡುಪಿ ತಾ| ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷರಾಗಿ, ಉಡುಪಿಯಲ್ಲಿ ನಡೆದ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ, ಮೂರು ದಶಕಗಳಿಂದ ಕಾಲೇಜು ಶಿಕ್ಷಣ ಇಲಾಖೆಯ ವಿವಿಧ ಕಾಲೇಜುಗಳಲ್ಲಿ  ಪ್ರಾಧ್ಯಾಪಕರಾಗಿ, ಪ್ರಾಂಶುಪಾಲರಾಗಿ, ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಯಾಗಿ, ಮಂಗಳೂರು ವಿಶ್ವ ವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ನೋಡಲ್‌ ಅಧಿಕಾರಿಯಾಗಿ, ಸಂಯೋಜನಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದು ಪ್ರಸ್ತುತ ಕರ್ನಾಟಕ ಸರಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ರಾಜ್ಯ ಎನ್ನೆಸ್ಸೆಸ್‌ ಕೋಶದಲ್ಲಿ ರಾಜ್ಯ ಸಂಪರ್ಕಾಧಿಕಾರಿ ಮತ್ತು ಸರಕಾರದ ಪದನಿಮಿತ್ತ ಜಂಟಿ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರು “ಉದಯವಾಣಿ’ಗೆ ನೀಡಿದ ಸಂದರ್ಶನದ ಭಾಗ ಇಂತಿದೆ:

-ಸಾಹಿತ್ಯ ಸಮ್ಮೇಳನಗಳಲ್ಲಿ ಸಮ್ಮೇಳನಾಧ್ಯಕ್ಷರ ಸ್ಥಾನ ಹಿಂದಿನಷ್ಟು  ಇಲ್ಲ ಎಂದೆನಿಸುತ್ತದೆಯೆ?
ಹಿಂದಿನ ತಲೆಮಾರಿನಲ್ಲಿದ್ದಷ್ಟು ಸಾಹಿತ್ಯಿಕ ಕೃಷಿ ಈಗ ಕಂಡು ಬಾರದಿರುವುದೇ ಈ ಅನಿಸಿಕೆಗೆ ಕಾರಣ. ಹಿಂದೆ ಬೇರೆ ಮಾಧ್ಯಮಗಳಿರಲಿಲ್ಲ, ಏನೇ ಇದ್ದರೂ ಸಾಹಿತ್ಯದ ಮೂಲಕವೇ ಅಭಿವ್ಯಕ್ತಿ ಗೊಳಿಸುತ್ತಿದ್ದರು. ಹಿಂದಿನ ರೀತಿಯ ಸಾಹಿತಿಗಳು ಈಗಿಲ್ಲ. 

– ಜಾನಪದ ಕಲಾವಿದರಿಗೆ ಸಿಗುವುದಕ್ಕಿಂತ ಹೆಚ್ಚಿನ ಸಾಮಾಜಿಕ, ಆರ್ಥಿಕ ಮನ್ನಣೆ ಅವರನ್ನು ಆಧರಿಸಿ ಅಧ್ಯಯನ ನಡೆಸುವ ಅಕಾಡೆಮಿಕ್‌ ವಿದ್ವಾಂಸರಿಗೆ ಸಿಗುತ್ತಿದೆಯೆ?
ಒಂದು ದಶಕದಿಂದ ಚಿತ್ರಣ ಬದಲಾಗಿದೆ. ಹಿಂದೆ ಅಕಾಡೆಮಿ ಪ್ರಶಸ್ತಿಗಳನ್ನು ಕೊಡುವಾಗ ವಿದ್ವಾಂಸ ರನ್ನೇ ಗುರುತಿಸುತ್ತಿದ್ದರು. ಈಗ ಒಂದು ದಶಕ ದಿಂದ ಕಲಾವಿದರನ್ನೇ ಗುರುತಿಸುತ್ತಿದ್ದಾರೆ. ವಿದ್ವಾಂಸರು ಕಲಾವಿದರಿಂದ ವಿಷಯ ಸಂಗ್ರಹಿಸಿ ಪ್ರಕಟಿಸುತ್ತಿದ್ದರು. ಈಗ ಜಾನಪದ ಕಲಾವಿದರು ಎಂದು ಹೇಳುವುದಕ್ಕಿಂತ ಅವರನ್ನು ಜಾನಪದ ಕವಿಗಳೆಂದೇ ಪರಿಗಣಿಸುತ್ತಿದ್ದಾರೆ. ಅವರಿಗೆ ಅದರ ಕಾಪಿರೈಟ್‌ ಕೂಡ ಇದೆ. 

– ಜಾನಪದ ಕಲಾವಿದರಿಗೆ ಅಕಾಡೆಮಿಕ್‌  ಶಿಕ್ಷಣ ಕೊಟ್ಟರೆ ಜಾನಪದ ಕಲೆ ಇನ್ನಷ್ಟು ವಿಜೃಂಭಿಸಬಹುದೆ?
ಖಂಡಿತವಾಗಿ. ಜಾನಪದ ಕಲಾವಿದ ರಿಗೆ ತರಬೇತಿ ಕೊಟ್ಟರೆ ಹೆಚ್ಚು ಅನುಕೂಲ ವಾಗು¤ದೆ. ಹಿಂದಿನ ತಲೆಮಾರಿನ ಕಲಾವಿದರು ಈಗಿನ ತಲೆಮಾರಿನ ಕಲಾವಿದರಿಗೆ ತಾತ್ವಿಕವಾಗಿ ವಿದ್ಯೆಯನ್ನು ಹಸ್ತಾಂತರಿಸಬೇಕು. ಈಗ ಹಾಗೆ ಆಗುತ್ತಿಲ್ಲ. ಇದಕ್ಕೆ ಸಾಮಾಜಿಕ, ಆರ್ಥಿಕ ಕಾರಣಗಳಿರ ಬಹುದು. ಕಲಾವಿದರನ್ನೇ ಪ್ರಾಧ್ಯಾಪಕರು, ಸಂಪನ್ಮೂಲ ವ್ಯಕ್ತಿಗಳನ್ನಾಗಿ ರೂಪಿಸಿದರೆ ಪರಿಣಾಮಕಾರಿ ಆಗುತ್ತದೆ. 

– ಜಾನಪದ ಅಧ್ಯಯನ ಸಂಶೋಧಕರು ಕೇವಲ ದಾಖಲೀ ಕರಣಕ್ಕೆ ಸೀಮಿತವಾಗುತ್ತಿದ್ದಾರೆಯೆ?
ಹೌದು. ಜಿಶಂಪರಂತಹ ಸಾಹಿತಿಗಳು ಇಂಟರ್‌ಲೈಸೇಶನ್‌ (ತಮ್ಮೊಳಗೆ ಒಂದಾಗುವುದು) ಆಗುತ್ತಿದ್ದರು. ಕೆಲವರು ಕೇವಲ ಮಾಹಿತಿ ಸಂಗ್ರಹ ಮತ್ತು ಅಧ್ಯಯನ ಮಾಡುತ್ತಾರೆ. ವಿಶೇಷವಾಗಿ ದಲಿತ ಹಿನ್ನೆಲೆಯಲ್ಲಿ ಬಂದ ಜಾನಪದ ವಿದ್ವಾಂಸರು ಸ್ವತಃ ಕಲಾವಿದರಾಗಿರುತ್ತಾರೆ. ಉದಾಹರಣೆಗೆ ವೀರಗಾಸೆ ಬಗ್ಗೆ ಅಧ್ಯಯನ ನಡೆಸುವವರಿಗೆ ವೀರಗಾಸೆ ಕುಣಿತವೂ ಗೊತ್ತಿರುತ್ತದೆ. ಹಿಂದೆ ಜರ್ಮನಿಯಿಂದ ಯಕ್ಷಗಾನ ಕುರಿತು ಅಧ್ಯಯನ ನಡೆಸಲು ಬಂದವರು ಸ್ವತಃ ಯಕ್ಷಗಾನವನ್ನು ಕಲಿತು ಅಧ್ಯಯನ ನಡೆಸುತ್ತಿದ್ದರು. 

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.