ಅಂಬುಲೆನ್ಸ್ಗೆ ದಾರಿ ಬಿಡಿ: ನಾಮಫಲಕ ಅನಾವರಣ
Team Udayavani, Jan 19, 2019, 12:40 AM IST
ಬ್ರಹ್ಮಾವರ: ಇತ್ತೀಚಿಗಿನ ದಿನಗಳಲ್ಲಿ ಅಪಘಾತಗಳು ಹೆಚ್ಚುತ್ತಿದ್ದು ತರ್ತು ಚಿಕಿತ್ಸೆಗಾಗಿ ಅಂಬುಲೆನ್ಸ್ ಮುಖಾಂತರ ಆಸ್ಪತ್ರೆಗೆ ಕೊಂಡೊಯ್ಯವುದು ಸಹಜವಾಗಿದೆ. ಇಂತಹ ಸಂದರ್ಭದಲ್ಲಿ ಪ್ರಜ್ಞಾವಂತರಾದ ನಾವುಗಳು ಅಂಬುಲೆನ್ಸ್ ವಾಹನ ಚಲಿಸುತ್ತಿರುವಾಗ ದಾರಿ ಬಿಡುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ಸಿಂಡಿಕೇಟ್ ಬ್ಯಾಂಕ್ ವಲಯ ಕಚೇರಿಯ ಮಹಾ ಪ್ರಬಂಧಕ ಭಾಸ್ಕರ ಹಂದೆ ಹೇಳಿದರು.
ಅವರು ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಬ್ರಹ್ಮಾವರ ರುಡ್ಡೆಟ್ ಸಂಸ್ಥೆಯಲ್ಲಿ ತರಬೇತಿ ಪಡೆದು ಸ್ವ ಉದ್ಯೋಗ ಆರಂಭಿಸಿ ಯಶಸ್ವಿಯಾದ ಉದ್ಯಮಿಗಳ ಸಂಘ ಆಸರೆ ಸಂಘಟನೆ ವತಿಯಿಂದ ಹೇರೂರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಅಂಬುಲೆನ್ಸ್ಗೆ ದಾರಿ ಬಿಡಿ ನಾಮ ಫಲಕವನ್ನು ಅನಾವರಣಗೊಳಿಸಿ ಮಾತನಾಡಿದರು.ಒಂದು ಕ್ಷಣವೂ ಕೂಡ ಅಮೂಲ್ಯವಾಗಿದ್ದು, ಆ ಅವಧಿಯಲ್ಲೇ ಗಾಯಾಳು ಪ್ರಾಣಾಪಾಯದಿಂದ ಪಾರಾಗುವ ಸಾಧ್ಯತೆ ಇದೆ ಎಂದರು.
ಈ ಸಂದರ್ಭದಲ್ಲಿ ಕೆನರಾ ಬ್ಯಾಂಕ್ನ ಸಹಾಯಕ ಮಹಾ ಪ್ರಬಂಧಕ ರಾಜಶೇಖರ ಮೇಠಿ, ರುಡ್ಸೆಟ್ ಸಂಸ್ಥೆ ಕೇಂದ್ರ ಕಚೇರಿಯ ನಿರ್ವಾಹಕ ನಿರ್ದೇಶಕ ಎಂ. ಜನಾರ್ಧನ್ ಸರ್, ಸಿಂಡಿಕೇಟ್ ಬ್ಯಾಂಕ್ನ ಉಪ ಮಹಾ ಪ್ರಬಂಧಕ ಹೀರೆಮs…, ಪ್ರಾದೇಶಿಕ ಪ್ರಬಂಧಕ ಸುಜಾತ ಜಿ., ವಿಶೇಷ ಸಮಾಜ ಸೇವಕ ವಿಶು ಕುಮಾರ್ ಶೆಟ್ಟಿ, ರುಡ್ಸೆಟ್ನ ನಿರ್ದೇಶಕ ರಾಘವೇಂದ್ರ ಎಲ್.ಬಿ., ಸಂಸ್ಥೆಯ ಉಪನ್ಯಾಸಕ ಕರುಣಾಕರ್ ಜೈನ್, ಆಸರೆಯ ಅಧ್ಯಕ್ಷ ಕೆ.ಸಿ. ಅಮೀನ್, ಗೌರವಾಧ್ಯಕ್ಷ ರಾಜೇಶ್ ಡಿ., ಪ್ರಧಾನ ಕಾರ್ಯದರ್ಶಿಗಳಾದ ರಾಘವೇಂದ್ರ ಕೋಡಿ, ಭಾಸ್ಕರ್ ಜಿ., ಉಪಾಧ್ಯಕ್ಷರಾದ ಸುಮತಿ ಸುವರ್ಣ, ಭರತ್ ಆಚಾರ್, ನೂತನ ಅಧ್ಯಕ್ಷೆ ಕೀಶ್ವರ್, ಉಪಾಧ್ಯಕ್ಷ ಕುಶ ಕುಮಾರ್, ಕಾರ್ಯದರ್ಶಿ ಉಮೇಶ್ ನಾೖರಿ, ಆಸರೆಯ ಸದಸ್ಯರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್