ಪರಿಸರ ನಾಶದಿಂದ ಕನ್ನಡ ಸಂಸ್ಕೃತಿಗೆ ಹಿನ್ನಡೆ​​​​​​​


Team Udayavani, Jan 19, 2019, 12:30 AM IST

180119astro05.jpg

ಉಡುಪಿ: ಪರಿಸರ ನಾಶವೂ ಕನ್ನಡ ಸಂಸ್ಕೃತಿಗೆ ಪ್ರಮುಖ ಕಾರಣ ಎಂದು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ, ಜಾನಪದ ವಿದ್ವಾಂಸ ಡಾ| ಗಣನಾಥ ಎಕ್ಕಾರು ಬೆಟ್ಟು ಮಾಡಿದ್ದಾರೆ.
 
ಬ್ರಹ್ಮಗಿರಿ ಲಯನ್ಸ್‌ ಭವನದಲ್ಲಿ ಶುಕ್ರವಾರ ನಡೆದ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು, ಯುವಜನರಲ್ಲಿ ಸಾಹಿತ್ಯಾಸಕ್ತಿ ಕಡಿಮೆಯಾಗಲು ಪ್ರಕೃತಿ ನಾಶದಿಂದ ಸಂಸ್ಕೃತಿ ಸ್ಥಿತ್ಯಂತರಗೊಳ್ಳುತ್ತಿರುವುದು ಪ್ರಧಾನ ಕಾರಣ ಎಂದರು. 

ನಗರೀಕರಣ, ಕೈಗಾರಿಕೀಕರಣದಿಂದ ಪ್ರಕೃತಿ, ಸಂಸ್ಕೃತಿಯು ತನ್ನ ಮೂಲ ಸ್ವರೂಪವನ್ನು ಕಳೆದುಕೊಳ್ಳುತ್ತಿದೆ. ಔದ್ಯೋಗಿಕ ಕ್ಷೇತ್ರದಲ್ಲಿಯೂ ಕನ್ನಡ ಭಾಷೆ ಮಹತ್ವವನ್ನು ಕಳೆದುಕೊಳ್ಳುತ್ತಿರುವುದು ಬ್ಯಾಂಕುಗಳಲ್ಲಿ ಕಂಡುಬರುತ್ತಿದೆ. ಔದ್ಯೋಗಿಕ ಕ್ಷೇತ್ರಕ್ಕೆ ಸಂಬಂಧಿಸಿ ಸರೋಜಿನಿ ಮಹಿಷಿ ವರದಿಯನ್ನು ಕೂಡಲೇ ಜಾರಿಗೆ ತರುವುದು ಅಗತ್ಯ ಎಂದು ಒತ್ತಾಯಿಸಿದರು. 

ಶಾಲೆಗಳಿಗೆ 
ಮೂಲ ಸೌಕರ್ಯ ಅಗತ್ಯ

ಸರಕಾರ ಇಂಗ್ಲಿಷ್‌ ಮಾಧ್ಯಮ ಶಾಲೆಗಳನ್ನು ಆರಂಭಿಸುವ ಮೊದಲು ಸರಕಾರಿ ಮತ್ತು ಅನುದಾನಿತ ಶಾಲೆಗಳ ಮೂಲಭೂತ ಸೌಕರ್ಯದ ಕಡೆಗೆ ಗಮನ ಕೊಡಬೇಕು. ಇಂಗ್ಲಿಷ್‌ ಮಾಧ್ಯಮ ಶಾಲೆಗಳು ಸೌಲಭ್ಯ ಮತ್ತು ಪರಿಸರದಿಂದ ಉತ್ತಮವೆಂದು ಕಂಡುಬರುತ್ತಿದೆ ವಿನಾ ಮಾಧ್ಯಮದಿಂದಲ್ಲ. ಉತ್ತಮ ಸೌಲಭ್ಯ ಕಲ್ಪಿಸಿದ ಉತ್ತಮ ಶೈಕ್ಷಣಿಕ ಚಟುವಟಿಕೆಗಳಿಗೆ ಹೆಸರಾದ ಅನೇಕ ಶಾಲೆಗಳು ಉಡುಪಿ ತಾಲೂಕಿನಲ್ಲಿಯೇ ಬಹಳಷ್ಟು ಇವೆ. ಇತ್ತೀಚಿನ ವರ್ಷಗಳಲ್ಲಿ ಖಾಸಗಿ ಕಾಲೇಜುಗಳಲ್ಲಿ ಐಚ್ಛಿಕ ಬೋಧನೆಯನ್ನು ನಿಲ್ಲಿಸಲಾಗಿದೆ. ಪದವಿಯಲ್ಲಿ ಕನ್ನಡದೊಂದಿಗೆ ಇತರ ಎರಡು ಐಚ್ಛಿಕ ವಿಷಯಗಳನ್ನು ಆಯ್ಕೆ ಮಾಡುವ ಅವಕಾಶವಿರುವುದರಿಂದ ಕನ್ನಡದ ಆಯ್ಕೆಗೆ ತೊಂದರೆಯಾಗುವುದಿಲ್ಲ ಎಂಬುದನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಬೇಕಾಗಿದೆ ಎಂದು ಡಾ|ಎಕ್ಕಾರು ಅಭಿಪ್ರಾಯಪಟ್ಟರು. 

ವೈಚಾರಿಕ, ವೈಜ್ಞಾನಿಕ ಚಿಂತನೆಗಳು ಅಗತ್ಯ. ವಚನ-ದಾಸ ಚಳವಳಿಗಳು ಸಮಾಜದ ಕೆಟ್ಟ ಸಂಪ್ರದಾಯ, ದುಷ್ಟ ಆಚರಣೆಗಳನ್ನು ಪ್ರಶ್ನಿಸಿವೆ. ಇದರ ಮುಂದುವರಿದ ಭಾಗವೇ ನವೋ ದಯ, ನವ್ಯ ಸಾಹಿತ್ಯ, ದಲಿತ- ಸಮ್ಮಿಶ್ರ ಸಾಹಿತ್ಯಗಳು, ಕುವೆಂಪು- ಕಾರಂತರ ಸಾಹಿತ್ಯಗಳು. ಉಡುಪಿಯಲ್ಲಿ ಸ್ವಾಮೀಜಿ ಯವರು ಮಡೆ-ಎಡೆ ಸ್ನಾನ ವನ್ನು ನಿಲ್ಲಿಸಿರುವುದು ಅಭಿನಂದನೀಯ. ಉಡುಪಿಯು ಹಿಂದಿನಿಂದಲೂ ಸಾಮರಸ್ಯಕ್ಕೆ ಹೆಸರಾಗಿದ್ದು ಈಗಲೂ ಮುಂದುವರಿದು ಕೊಂಡು ಬರುತ್ತಿದೆ. ಇದು ಮುಂದುವರಿಯಬೇಕು ಎಂದು ಎಕ್ಕಾರು ಹೇಳಿದರು.  

ಟಿಆರ್‌ಪಿ ಹಿಂದೆ ದೃಶ್ಯಮಾಧ್ಯಮಗಳು
ದೃಶ್ಯ ಮಾಧ್ಯಮಗಳು ಇತ್ತೀಚಿಗೆ ಟಿಆರ್‌ಪಿ ಬೆನ್ನು ಬಿದ್ದು ಭಿನ್ನ ಹಾದಿ ತುಳಿಯುತ್ತಿರುವುದು ಕರ್ನಾಟಕದಲ್ಲಿ ಕಂಡುಬರುವ ಕಹಿ ಸತ್ಯ. ಸಾಹಿತ್ಯ, ಸಂಸ್ಕೃತಿ ಬೆಳವಣಿಗೆ ಹಿನ್ನೆಲೆಯಲ್ಲಿ ಪತ್ರಿಕೆ ಮತ್ತು ದೃಶ್ಯ ಮಾಧ್ಯಮಗಳಿಗೆ ಕನ್ನಡಿಗರು ಹಕ್ಕೊತ್ತಾಯ ಮಾಡುವ ಅಗತ್ಯವಿದೆ. 
– ಡಾ| ಗಣನಾಥ ಎಕ್ಕಾರು

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.