ಭರದಿಂದ ಸಾಗುತ್ತಿರುವ ಜೀರ್ಣೋದ್ಧಾರ ಕಾಮಗಾರಿ
Team Udayavani, Jan 19, 2019, 12:30 AM IST
ಹೆಬ್ರಿ: ಸುಮಾರು 800 ವರ್ಷಗಳ ಇತಿಹಾಸವನ್ನು ಹೊಂದಿರುವ ಹೆಬ್ರಿ ಸಮೀಪ ಕೆರೆಬೆಟ್ಟು ಶ್ರೀ ಮಹಾಲಿಂಗೇಶ್ವ ರ ಮಹಾಗಣಪತಿ ದೇವಸ್ಥಾನದ ಜೀಣೋದ್ಧಾರ ಕಾರ್ಯ ಭರದಿಂದ ಸಾಗುತ್ತಿದ್ದು ಪುನ: ಪ್ರತಿಷ್ಠೆ , ನೂತನ ಗಣಪತಿ ದೇವರಗುಡಿ ಇನ್ನಿತರ ಕಾರ್ಯಕ್ರಮಗಳು ನಡೆಯಲಿದೆ.
ಶ್ರೀ ಸಾನ್ನಿಧ್ಯವು ಚಾರ ಮತ್ತು ಕಳೂ¤ರು ಗ್ರಾಮಗಳಿಗೆ ಸೇರಿದ್ದಾಗಿದ್ದು ಊರ ಪರವೂರ ಭಕ್ತರಿಂದ ಅಭಿವೃದ್ಧಿ ಕಾರ್ಯ ಆಗಬೇಕಾಗಿದೆ. ಈಗಾಗಲೇ ಪುನ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ನಿರ್ಣಯದಂತೆ ಸುಮಾರು 51 ಲಕ್ಷ ರೂಪಾಯಿ ಅಂದಾಜು ವೆಚ್ಚದಲ್ಲಿ ಗಣಪತಿ ದೇವರ ನೂತನ ಗುಡಿ ನಿರ್ಮಾಣ, ಬೊಬ್ಬರ್ಯ ಗುಡಿ ನಿರ್ಮಾಣ,ಅರ್ಚಕ ನಿವಾಸ,ಸುತ್ತು ಪೌಳಿಗೆ ಕಲ್ಲು ಹಾಸುವಿಕೆ,ಪೌಳಿಯ ಹಂಚುಮಾಡಿನ ಪುನ: ದುರಸ್ತಿ,ಅಶ್ವತ ಕಟ್ಟೆ ನಿರ್ಮಾಣ,ಕೆರೆ ದುರಸ್ತಿ, ದೇವಾಲಯದ ಸುತ್ತ ಆವರಣ ಗೋಡೆ ಮೊದಲಾದ ಜೀರ್ಣೋದ್ಧಾರ ಕಾರ್ಯಗಳು ಹಾಗೂ ಅಷ್ಟಬಂಧ ಪುನ:ಪ್ರತಿಷ್ಠೆ, ಬ್ರಹ್ಮಕಲಶ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ನಡೆಯಬೇಕಾಗಿದೆ.
ಗ್ರಾಮೀಣ ಪ್ರದೇಶವಾದ ಇತಿಹಾಸವಿರುವ ಪುರಾತನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಕ್ತರ ದಾನಿಗಳ ಸಹಾಯದ ನಿರೀಕ್ಷೆಯಲ್ಲಿದ್ದು ಈ ಮಹಾನ್ ಕಾರ್ಯಕ್ಕೆ ಧನ ಸಹಾಯ ಮಾಡುವವರು ಕರ್ನಾಟಕ ಬ್ಯಾಂಕ್, ಚಾರ ಪುನ: ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಶ್ರೀ ಮಹಾಲಿಂಗೇಶ್ವರ ದೇವಾಲಯ , ಕೆರೆಬೆಟ್ಟು S.B A/C NO : 1782500100/29101 ಈ ಮೂಲಕ ಮಾಡಬಹುದೆಂದು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಕೆ.ರತ್ನಾಕರ ಶೆಟ್ಟಿ ಕೆರೆಬೆಟ್ಟು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ