ಹೊಸ್ಮಾರು-ಈದು ರಸ್ತೆಯಲ್ಲ; ಹೊಂಡಗುಂಡಿಗಳೇ ಎಲ್ಲ…


Team Udayavani, Jan 19, 2019, 12:30 AM IST

1801kar1a.jpg

ಹೊಸ್ಮಾರು: ಬೆಳ್ತಂಗಡಿ-ಧರ್ಮಸ್ಥಳ ಮುಖ್ಯರಸ್ತೆಗೆ ಸಂಪರ್ಕಿಸುವ ಕಾರ್ಕಳ ತಾಲೂಕಿನ ಹೊಸ್ಮಾರು-ಈದು ಒಳರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಸಂಚಾರ ದುಸ್ತರವಾಗಿದೆ. ಕಳೆದ ಮೂರ್‍ನಾಲ್ಕು ವರ್ಷಗಳಿಂದ ಈ ರಸ್ತೆ ದುರಸ್ತಿಗೊಳ್ಳದೇ ಆ ಭಾಗದ ಜನತೆಯ ಆಕ್ರೋಶಕ್ಕೆ ಕಾರಣವಾಗಿದೆ.

ಹೊಸ್ಮಾರು ಸಮೀಪದ ಈದು ಕ್ರಾಸ್‌ನಿಂದ ಒಳಸಂಚರಿಸಿ ಸುಮಾರು 5 ಕಿ.ಮೀ. ಉದ್ದದ ರಸ್ತೆ ಇದು. ಅದೇ ಭಾಗದಿಂದ ನಾರವಿಗೆ ಸಂಪರ್ಕಿಸುವ ರಸ್ತೆ ಕೂಡ ಪೂರ್ತಿ ಹದಗೆಟ್ಟಿದೆ. ಈ ರಸ್ತೆಯಲ್ಲಿ ವಾಹನ ಸಂಚಾರ ಮಾತ್ರವಲ್ಲದೇ ಜನತೆ ನಡೆದಾಡುವುದು ಅಸಾಧ್ಯ ಎಂಬಂತಾಗಿದೆ. ಹತ್ತೆನ್ನೆರಡು ವರ್ಷಗಳ ಹಿಂದೆ ಈ ರಸ್ತೆ ಡಾಮರೀಕರಣಗೊಂಡಿತ್ತು. ಅನಂತರ ಯಾವುದೇ ದುರಸ್ಥಿ ಕಾರ್ಯ ನಡೆದಿಲ್ಲ.

ಎಲ್ಲೆಲ್ಲೂ ಹೊಂಡಗುಂಡಿಗಳೇ
ಅಲ್ಲಲ್ಲಿ ಬೃಹತ್‌ ಹೊಂಡಗಳು ತುಂಬಿದ್ದು, ರಸ್ತೆ ಎಲ್ಲಿದೆ ಎಂದು ಹುಡುಕಬೇಕಾದ ಪ್ರಮೇಯ ಎದುರಾಗಿದೆ. ಜಲ್ಲಿಕಲ್ಲುಗಳು ಮೇಲೆದ್ದು ಅಲ್ಲಲ್ಲಿ ರಾಶಿ ಬಿದ್ದಿದೆ. ಪೂರ್ಣ ಕಿತ್ತು ಹೋದ ರಸ್ತೆಯಲ್ಲಿ ಆ ಭಾಗದ ಜನರು ಸರ್ಕಸ್‌ ಮಾಡುವಂತಾಗಿದೆ. ಮಳೆಗಾಲದಲ್ಲಿ ಈ ರಸ್ತೆಯ ಗುಂಡಿಗಳಲ್ಲಿ ನೀರು ನಿಂತು ಸಮಸ್ಯೆ ಎದುರಾಗುತ್ತಿದೆ. ಈ ರಸ್ತೆ 2007-08ರಲ್ಲಿ ಗ್ರಾಮ ಸಡಕ್‌ ಯೋಜನೆಯಲ್ಲಿ ದುರಸ್ಥಿ ಆಗಿತ್ತು.

ಅಟೋಗಳೂ ಬರುವುದಿಲ್ಲ
ಪೂರ್ಣ ಹದಗೆಟ್ಟಿರುವ ರಸ್ತೆಯಿಂದಾಗಿ ಆ ಭಾಗಕ್ಕೆ ಆಟೋಗಳು ಬಾಡಿಗೆಗೆ ಬರುವುದಕ್ಕೂ ಹಿಂದೇಟು ಹಾಕುತ್ತಿವೆ. ಅದೇ ರಸ್ತೆಯನ್ನು ಅವಲಂಭಿಸಿ ನೂರಾರು ಮನೆಗಳಿದ್ದು, ಒಂದು ಶಾಲೆಯಿದೆ. ಆಟೋ ಸಂಚಾರ ಕೂಡ ಕಡಿಮೆಯಾಗಿ ನಾರವಿ ಹಾಗೂ ಹೊಸ್ಮಾರು ಭಾಗದಿಂದ ಈದು ಭಾಗಕ್ಕೆ ತೆರಳುವವರಿಗೆ ಸಂಕಷ್ಟ ಎದುರಾಗಿದೆ. ದ್ವಿಚಕ್ರ ವಾಹನದಲ್ಲಿ ತೆರಳುವವರಿಗೆ ಬೆನ್ನು ನೋವು ಎದುರಾಗುವುದು ಖಂಡಿತ ಎನ್ನುತ್ತಾರೆ ಆ ಭಾಗದ ಕೆಲವು ಮಂದಿ.

ಬಸ್ಸುಗಳ ಸಂಚಾರ ಸ್ಥಗಿತ
ಈ ಭಾಗಕ್ಕೆ ಕೆಲವು ವರ್ಷಗಳ ಹಿಂದೆ ದಿನಕ್ಕೆ 9 ಬಸ್‌ಗಳು ಓಡಾಡುತ್ತಿದ್ದವು. ಕಾರ್ಕಳ ಹೊಸ್ಮಾರು ಈದು ಹಾಗೂ ವೇಣೂರು ಕಡೆಯಿಂದ ಬರುವ ಬಸ್‌ ನಾರವಿ ಮೂಲಕ ಈದುವಿಗೆ ತೆರಳುತ್ತಿತ್ತು.ಆದರೆ ಸದ್ಯ ಒಂದು ಬಸ್‌ ಮಾತ್ರ ದಿನಕ್ಕೊಮ್ಮೆ ಆಭಾಗದಲ್ಲಿ ಓಡಾಡುತ್ತಿದೆ. ರಸ್ತೆ ಕಾರಣದಿಂದಾಗಿ ಬಸ್‌ಗಳನ್ನು ಸ್ಥಗಿತಗೊಳಿಸಿದ್ದಾರೆ.

ಟೆಂಡರ್‌ ಪ್ರಕ್ರಿಯೆ ಆಗಿದೆ
ಈದು-ಹೊಸ್ಮಾರು ರಸ್ತೆ ದುರಸ್ಥಿಗೆ ಸಂಬಂಧಿಸಿದಂತೆ 70 ಲಕ್ಷ ರೂ. ಇಡಲಾಗಿದ್ದು, ಈಗಾಗಲೇ ಟೆಂಡರ್‌ ಪ್ರಕ್ರಿಯೆ ಮುಗಿದಿದೆ. ಜನತೆಗೆ ಸಮಸ್ಯೆಯಾಗುತ್ತಿರುವ ಬಗ್ಗೆ ಗಮನಿಸುತ್ತಿದ್ದು, ಕೆಲಸ ಪ್ರಾರಂಭಿಸಲು ಸೂಚನೆ ನೀಡಲಾಗಿದೆ.
– ದಿವ್ಯಶ್ರೀ ಅಮೀನ್‌,ಜಿ.ಪಂ. ಸದಸ್ಯೆ.

ಕಳಪೆ ಕಾಮಗಾರಿ
ಈ ಹಿಂದೆ ಹಾಕಲಾಗಿದ್ದ ಡಾಮರು 30 ವರ್ಷಗಳು ಕಳೆದರೂ ಗಟ್ಟಿಯಾಗಿತ್ತು.  ಗ್ರಾಮ ಸಡಕ್‌ನಲ್ಲಿ ಇತ್ತೀಚಿನ ವರ್ಷದಲ್ಲಿ ಹಾಕಲಾಗಿದ್ದ ರಸ್ತೆ ಪೂರ್ತಿ ಹೋಗಿದ್ದು, ಅದು ಕಳಪೆ ಕಾಮಗಾರಿಯಾಗಿದೆ. ಆ ಭಾಗದ ನೂರಾರು ಮನೆಯ ಜನತೆ 
ಇದೇ ರಸ್ತೆಯನ್ನು ಅಲವಂಬಿಸಿದ್ದಾರೆ. ಆದರೆ ರಸ್ತೆಯ ಕಾರಣದಿಂದಾಗಿ ಬರುತ್ತಿದ್ದ ಬಸ್‌ಗಳೂ ಕೂಡ ನಿಂತಿವೆ.
– ಸಂಜಯ್‌ ಭಟ್‌, 
ಸ್ಥಳೀಯರು.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.