ಉಡುಪಿ ಜಿಲ್ಲೆ: 6 ಮಂಗಗಳ ಶವ ಪತ್ತೆ
Team Udayavani, Jan 20, 2019, 4:11 AM IST
ಉಡುಪಿ/ಕುಂದಾಪುರ/ಸಿದ್ದಾಪುರ: ಜಿಲ್ಲೆಯಲ್ಲಿ ಶನಿವಾರ ಒಟ್ಟು ಆರು ಮಂಗಗಳ ಮೃತ ದೇಹ ಪತ್ತೆಯಾಗಿದೆ.
ಕುಂದಾಪುರ ತಾಲೂಕಿನ ಬೆಳ್ವೆ, ಮಡಾಮಕ್ಕಿ, ವಂಡ್ಸೆ, ನಾಡ, ಸಿದ್ದಾಪುರ ಮತ್ತು ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಸಮೀಪದ ಕೆಂಜೂರು, ಕಾರ್ಕಳ ತಾಲೂಕಿನ ಕಡ್ತಲ ದೊಡೇರಂಗಡಿಯಲ್ಲಿ ಮಂಗಗಳ ಮೃತ ದೇಹಗಳು ಪತ್ತೆಯಾದವು. ಇದರಲ್ಲಿ ಮಡಾಮಕ್ಕಿ ಮತ್ತು ಕಡ್ತಲದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಎರಡು ಕೊಳೆತ ಸ್ಥಿತಿಯಲ್ಲಿತ್ತು. ಸಿದ್ದಾಪುರ, ವಂಡ್ಸೆ ಪ್ರದೇಶದಲ್ಲಿ ಈಗಾಗಲೇ ಸಿಕ್ಕಿದ ಮಂಗಗಳಿಗೆ ಕಾಯಿಲೆ ಇರುವುದು ದೃಢಪಟ್ಟ ಕಾರಣ ಮತ್ತೆ ಪರೀಕ್ಷೆಗೆ ಕಳುಹಿಸಿಲ್ಲ.
ಜ್ವರ ಬಂದ ಮೂವರ ರಕ್ತವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ಇವರಾರಿಗೂ ಮಂಗನ ಕಾಯಿಲೆ ಇಲ್ಲ ಎಂದು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ. ಕಮಲಶಿಲೆ ದೇವಸ್ಥಾನದಿಂದ 25,000 ರೂ. ಮೌಲ್ಯದ ಡಿಎಂಪಿ ತೈಲಕ್ಕೆ ಬೇಡಿಕೆ ಬಂದಿದೆ.
ಕೆಎಂಸಿ: ಮತ್ತೆ ಮೂವರು ದಾಖಲು
ಉಡುಪಿ: ಶಂಕಿತ ಮಂಗನಕಾಯಿಲೆ ಚಿಕಿತ್ಸೆಗಾಗಿ ಶಿವಮೊಗ್ಗ ಜಿಲ್ಲೆಯ ಸಾಗರ ಮತ್ತು ಆಸುಪಾಸಿನ ಮೂವರು ಶನಿವಾರ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದುವರೆಗೆ ಕೆಎಂಸಿಯಲ್ಲಿ 101 ಮಂದಿ ಶಂಕಿತ ಮಂಗನ ಕಾಯಿಲೆ ಚಿಕಿತ್ಸೆಗೆ ದಾಖಲಾಗಿ 65 ಮಂದಿ ಚಿಕಿತ್ಸೆ ಪಡೆದು ಬಿಡುಗಡೆಗೊಂಡಿದ್ದಾರೆ.
ಕಡಬ: ಮತ್ತೆ 3 ಶವ ಪತ್ತೆ
ಕಡಬ ಕುಟ್ರಾಪ್ಪಾಡಿ ಗ್ರಾಮದಲ್ಲಿ ಇನ್ನೂ 3 ಮಂಗಗಳ ಶವಗಳು ಪತ್ತೆಯಾಗಿವೆ. ಈ ವರೆಗೆ ತಾಲೂಕಿನಲ್ಲಿ ಒಟ್ಟು 5 ಶವಗಳು ಪತ್ತೆಯಾಗುವುದರೊಂದಿಗೆ ಜನರಲ್ಲಿ ಮಂಗನಕಾಯಿಲೆಯ ಭೀತಿ ಮನೆಮಾಡಿದೆ.ರಾಮಕುಂಜ ಗ್ರಾ.ಪಂ. ವ್ಯಾಪ್ತಿಯ ಹಳೆನೇರೆಂಕಿ ಗ್ರಾಮದ ಕದ್ರ ನಿವಾಸಿ ಆದಂ ಅವರಿಗೆ ಸೇರಿದ ತೋಟದಲ್ಲಿ ಜ. 16ರಂದು 1 ಮಂಗನ ಶವ ಪತ್ತೆಯಾಗಿತ್ತು. ಅದಕ್ಕೂ ಮೊದಲು ಕುಟ್ರಾಪ್ಪಾಡಿ ಗ್ರಾಮದ ಉಳಿಪ್ಪು ಅರಣ್ಯ ಪ್ರದೇಶದಲ್ಲಿ ಸಂಪೂರ್ಣ ಕೊಳೆತುಹೋಗಿದ್ದ ಶವ ಪತ್ತೆಯಾಗಿತ್ತು. ಆದ್ದರಿಂದ ಶವದ ಭಾಗಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲು ಸಾಧ್ಯವಾಗಿರಲಿಲ್ಲ. ಈ ಮಧ್ಯೆ ವಾರದ ಹಿಂದೆ ಕುಟ್ರಾಪ್ಪಾಡಿ ಗ್ರಾಮದ ಕುಂಟೋಡಿ ಜಯಚಂದ್ರ ರೈ ಅವರಿಗೆ ಸೇರಿದ ತೋಟದಲ್ಲಿ ಪತ್ತೆಯಾಗಿದ್ದ ಮಂಗನ ಶವವನ್ನು ಸ್ಥಳೀಯರು ಮಣ್ಣಿನಲ್ಲಿ ಹೂತು ಬಳಿಕ ಕಡಬ ಸರಕಾರಿ ಆಸ್ಪತ್ರೆಗೆ ಮಾಹಿತಿ ನೀಡಿದ್ದರು. ಅದರಂತೆ ಸ್ಥಳಕ್ಕೆ ಭೇಟಿ ನೀಡಿದ ಬೆಳ್ತಂಗಡಿಯ ಕ್ಯಾಸನೂರು ಕಾಡಿನ ಕಾಯಿಲೆ (ಕೆಎಫ್ಡಿ) ಘಟಕದ ವೈದ್ಯಾಧಿಕಾರಿಗಳು ಪರಿಸರದಲ್ಲಿ ಕಂಡುಬಂದ ಉಣುಗುಗಳನ್ನು ಸಂಗ್ರಹಿಸಿ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.ಕುಟ್ರಾಪ್ಪಾಡಿ ಗ್ರಾಮದ ಉರುಂಬಿಯ ಶೇಖರ ಗೌಡ ಅವರ ತೋಟದಲ್ಲಿ ಮತ್ತು ಮೀನಾಡಿಯಲ್ಲಿ ಹಲವು ದಿನಗಳ ಹಿಂದೆ ಮಂಗ ಸತ್ತಿರುವ ವಿಚಾರ ಶನಿವಾರ ಬೆಳಕಿಗೆ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು