ಮಲ್ಲಾರು – ಪಕೀರಣಕಟ್ಟೆ ವಾರ್ಡ್‌ ಟ್ಯಾಂಕ್‌ ಕುಸಿಯುವ ಭೀತಿ


Team Udayavani, Jan 22, 2019, 12:50 AM IST

tank.jpg

ಕಾಪು: ಕಾಪು ಪುರಸಭಾ ವ್ಯಾಪ್ತಿಯ ಮಲ್ಲಾರು – ಪಕೀರಣಕಟ್ಟೆಯಲ್ಲಿ ನೂರಾರು ಮನೆಗಳಿಗೆ ನೀರುಣಿಸುವ ನೀರಿನ ಟ್ಯಾಂಕ್‌ನ ಬೀಮ್‌ ಶಿಥಿಲಗೊಂಡಿದ್ದು, ಇದರೊಂದಿಗೆ ಕಬ್ಬಿಣದ ಏಣಿ ತುಂಡಾಗಿ ನೇತಾಡುತ್ತಿರುವುದರಿಂದ ಗ್ರಾಮಸ್ಥರಲ್ಲಿ ಅಪಾಯದ ಆತಂಕ ಮೂಡಿಸಿದೆ.

ಬಿರುಕು ಬಿಟ್ಟಿದೆ ನೀರಿನ ಟ್ಯಾಂಕ್‌ 
  ಸಾವಿರಾರು ಲೀಟರ್‌ ನೀರನ್ನು ತುಂಬಿಸಿಕೊಂಡು, ಸುಮಾರು 120ಕ್ಕೂ ಅಧಿಕ ಮನೆಗಳಿಗೆ ವರ್ಷಪೂರ್ತಿ ನೀರುಣಿಸುವ  ಟ್ಯಾಂಕ್‌ನ ಅಡಿ ಭಾಗದ ಪಿಲ್ಲರ್‌ಗಳಲ್ಲಿ  ಅಲ್ಲಲ್ಲಿ ಸಿಮೆಂಟ್‌ ಕಳಚಿ, ರಾಡ್‌ಗಳು ತೋರುತ್ತಿವೆ. ಮಾತ್ರವಲ್ಲದೇ ಟ್ಯಾಂಕ್‌ ಸೋರಿಕೆಯಾಗುತ್ತಿರುವುದನ್ನೂ ಗ್ರಾಮಸ್ಥರು ಗಮನಿಸಿದ್ದಾರೆ. ಹಲವು ವರ್ಷಗಳ ಹಿಂದೆ ನಿರ್ಮಾಣಗೊಂಡಿರುವ ಈ ಟ್ಯಾಂಕ್‌ನ ಗುಣಮಟ್ಟ ಪರಿಶೀಲನೆ ನಡೆಯಬೇಕು ಎನ್ನುವ ಆಗ್ರಹ ಸ್ಥಳೀಯರದ್ದಾಗಿದೆ. 

ತುಂಡಾದ ಏಣಿ 
ಈ ಬೃಹದಾಕಾರದ ಟ್ಯಾಂಕ್‌ಗೆ ಭೂಮಿಯಿಂದ ತುದಿಯವರೆಗೆ ತೆರಳಲು ನಿರ್ಮಿಸಲಾಗಿದ್ದ ಕಬ್ಬಿಣದ ಮೆಟ್ಟಿಲುಗಳು ತುಕ್ಕು ಹಿಡಿದ ಪರಿಣಾಮ ಕಳೆದ ಮಳೆಗಾಲದಲ್ಲಿ ತುಂಡಾಗಿ ಬಿದ್ದಿತ್ತು. ತುಂಡಾಗಿ ಬಿದ್ದ ಕಬ್ಬಿಣದ ಮೆಟ್ಟಿಲುಗಳು ಕಳೆದ ಏಳು ತಿಂಗಳುಗಳಿಂದ ಗಾಳಿಯಲ್ಲಿ ನೇತಾಡುತ್ತಿದ್ದು, ಇಂದೋ ನಾಳೆಯೋ ಮುರಿದು ಬೀಳುವ ಲಕ್ಷಣಗಳು ಗೋಚರಿಸುತ್ತಿವೆ.

ಅಪಾಯಕ್ಕೆ ಆಹ್ವಾನ 
ಕಬ್ಬಿಣದ ಏಣಿ ಸಂಪೂರ್ಣ ಮುರಿದು ಬಿದ್ದರೆ ಟ್ಯಾಂಕ್‌ನ ಹತ್ತಿರದಲ್ಲೇ ಇರುವ ಹತ್ತಾರು ಮನೆಗಳಿಗೆ ಭಾರೀ ಅಪಾಯವುಂಟಾಗುವ ಸಾಧ್ಯತೆಗಳಿವೆ. ತುಂಡಾಗಿ ನೇತಾಡುವ ಏಣಿಯ ಅಡಿಯಲ್ಲೇ ಹೈಟೆನ್ಶನ್‌ ವಿದ್ಯುತ್‌ ವಯರ್‌ ಕೂಡಾ ಹಾದು ಹೋಗಿದ್ದು, ಕೆಳಕ್ಕೆ ಬಿದ್ದರೆ ಇದು ಮತ್ತಷ್ಟು ಅಪಾಯಕ್ಕೆ ಎಡೆ ಮಾಡಿಕೊಡುವ ಸಾಧ್ಯತೆಗಳಿವೆ. ನೀರಿನ ಟ್ಯಾಂಕ್‌ನ ಕಬ್ಬಿಣದ ಏಣಿ ತುಂಡಾದ  ವಿಚಾರವನ್ನು ಈಗಾಗಲೇ ಸ್ಥಳೀಯರು ಪುರಸಭೆಯ ಮುಖ್ಯಾಧಿಕಾರಿ, ವಾರ್ಡ್‌ ಸದಸ್ಯರು ಸಹಿತ ಜನಪ್ರತಿನಿಧಿಗಳ ಗಮನಕ್ಕೆ ತಂದಿದ್ದಾರೆ. ಆದರೂ ಘಟನೆ ಸಂಭವಿಸಿ ಏಳು ತಿಂಗಳಾದರೂ ಪುರಸಭೆ ಕ್ರಮ ಕೈಗೊಳ್ಳದಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಟ್ಯಾಂಕ್‌ ಶುಚಿಯಾಗಿಲ್ಲ 
ಬೃಹತ್‌ ನೀರಿನ ಟ್ಯಾಂಕ್‌ನ ಮೇಲುಸ್ತುವಾರಿಗಾಗಿ ಒಬ್ಬರನ್ನು ನಿಯೋಜಿಸಿ, ಅವರ ಮೂಲಕ ಯಾವತ್ತಾದರೂ ಒಮ್ಮೆ ಟ್ಯಾಂಕ್‌ನ್ನು ಶುಚಿಗೊಳಿಸುವ ಪ್ರಕ್ರಿಯೆ ನಡೆಸುವುದು ವಾಡಿಕೆ. ಆದರೆ ಇಲ್ಲಿನ ಟ್ಯಾಂಕ್‌ನ ಮೇಲೆ ಹತ್ತುವ ಕಬ್ಬಿಣದ ಏಣಿ ತುಕ್ಕು ಹಿಡಿದು, ಗಾಳಿ ಮಳೆಗೆ ತುಂಡಾಗಿ ಬಿದ್ದು ಏಳು ತಿಂಗಳು ಕಳೆದಿದ್ದು, ಮೇಲೆ ಹೋಗಿ ಶುಚಿಗೊಳಿಸಲು ಸಾಧ್ಯವಿಲ್ಲದಂತಾಗಿದೆ. 
ಆ ಕಾರಣದಿಂದಾಗಿ ಟ್ಯಾಂಕ್‌ನ ಒಳಗಡೆಯೂ ಶುಚಿತ್ವ ಇಲ್ಲದಂತಾಗಿದೆ ಎಂಬ ಆರೋಪ ಸ್ಥಳೀಯರಿಂದ ಕೇಳಿ ಬಂದಿದೆ.

ಸಮಸ್ಯೆ ಗಂಭೀರವಾಗಿ ಪರಿಗಣಿಸಿಲ್ಲ
 ಬೃಹತ್‌ ವಾಟರ್‌ ಟ್ಯಾಂಕ್‌ನ ಮೇಲೇರುವ ಏಣಿ ತುಂಡಾಗಿ ಬಿದ್ದು ಏಳು ತಿಂಗಳು ಕಳೆದಿದ್ದು, ತುಂಡಾಗಿ ನೇತಾಡುತ್ತಿರುವ ಬಗ್ಗೆ ಪುರಸಭೆಯ ವಾರ್ಡ್‌ ಸದಸ್ಯರ ಗಮಕ್ಕೆ ತರಲಾಗಿದ್ದರೂ ಈ ಸಮಸ್ಯೆಯನ್ನು ಯಾರೂ ಕೂಡಾ ಗಂಭೀರವಾಗಿ ತೆಗೆದುಕೊಂಡಿಲ್ಲ. ಪುರಸಭೆಯ ಅಧಿಕಾರಿಗಳ ಗಮನಕ್ಕೂ ಇದನ್ನು ತರಲಾಗಿದೆ. ಇದರಿಂದ ಸುತ್ತಮುತ್ತಲಿನ ಮನೆಯವರಲ್ಲಿ ಆತಂಕವಿದೆ. ಯಾವಾಗ ಮುರಿದು ಬೀಳುತ್ತದೆಯೋ ಎಂಬ ಹೆದರಿಕೆ ಜನರನ್ನು ಕಾಡುತ್ತಿದೆ. 
-ಹಮೀದ್‌, ಪಕೀರಣಕಟ್ಟೆ

ತೆರವು ಮಾಡುತ್ತೇವೆ
ನೀರಿನ ಟ್ಯಾಂಕ್‌ನ ಕಬ್ಬಿಣದ ಏಣಿ ತುಂಡಾಗಿ ನೇತಾಡುತ್ತಿರುವ ವಿಚಾರ ನಮ್ಮ ಗಮನಕ್ಕೆ ಬಂದಿದ್ದು, ತೆರವು ಗೊಳಿಸಲು ಕ್ರಮ ತೆಗೆದುಕೊಳ್ಳುತ್ತೇವೆ. ಏಣಿಯನ್ನು ಟ್ಯಾಂಕ್‌ಗೆ ಹಾನಿಯಾಗದಂತೆ, ಆಧುನಿಕ ತಂತ್ರಜ್ಞಾನದ ನೆರವಿನಿಂದ ತೆರವುಗೊಳಿಸಿ ಜನರ ಆತಂಕವನ್ನು ದೂರ ಮಾಡಲು ಪ್ರಯತ್ನಿಸುತ್ತೇವೆ.
-ರಾಯಪ್ಪ, ಮುಖ್ಯಾಧಿಕಾರಿ, ಕಾಪು ಪುರಸಭೆ

– ರಾಕೇಶ್ ಕುಂಜೂರು 

ಟಾಪ್ ನ್ಯೂಸ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MASOCON

MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

Udupi: ವಿಡಿಯೋ ಕರೆ ರೆಕಾರ್ಡ್‌ ಮಾಡಿ ಹಣಕ್ಕೆ ಬೇಡಿಕೆ

Udupi: ವಿಡಿಯೋ ಕರೆ ರೆಕಾರ್ಡ್‌ ಮಾಡಿ ಹಣಕ್ಕೆ ಬೇಡಿಕೆ

Fraud: ಅಪರಿಚಿತ ವ್ಯಕ್ತಿಯಿಂದ 2.41 ಲಕ್ಷ ರೂ. ವಂಚನೆ

Fraud: ಅಪರಿಚಿತ ವ್ಯಕ್ತಿಯಿಂದ 2.41 ಲಕ್ಷ ರೂ. ವಂಚನೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.