ಹಿರಿಯ ನಾಗರಿಕರ ರಕ್ಷಕರಿಗೆ ಅಭದ್ರತೆ 


Team Udayavani, Jan 22, 2019, 12:50 AM IST

senior.jpg

ಉಡುಪಿ: ಹಿರಿಯ ನಾಗರಿಕರು ಮತ್ತು ವಿಕಲಚೇತನರ ಸಶಕ್ತೀಕರಣ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ “ಹಿರಿಯ ನಾಗರಿಕರ ಸಹಾಯವಾಣಿ’ಗೆ ಆರು ತಿಂಗಳುಗಳಿಂದ ಅನುದಾನ ಬಿಡುಗಡೆಯಾಗಿಲ್ಲ. ಹಾಗಾಗಿ ಅದರ ಅಧಿಕಾರಿ, ಸಿಬಂದಿಗೆ ವೇತನವೂ (ಗೌರವಧನ) ಸಿಗುತ್ತಿಲ್ಲ.

ಉಡುಪಿಯ ಹಿರಿಯ ನಾಗರಿಕರ ಸಹಾಯವಾಣಿ ಜಿಲ್ಲಾ ವ್ಯಾಪ್ತಿಯನ್ನು ಹೊಂದಿದೆ. ಇದನ್ನು ಉಡುಪಿ ಜಿಲ್ಲಾ ಮಹಿಳಾ ಮಂಡಳಿಗಳ ಒಕ್ಕೂಟ ನಿರ್ವಹಿಸುತ್ತಿದೆ. ಮೂವರು ಅಪ್ತಸಮಾಲೋಚಕರು, ಸೂಪರ್‌ವೈಸರ್‌ ಮತ್ತು ಕೋ-ಆರ್ಡಿನೇಟರ್‌ ಇಲ್ಲಿದ್ದಾರೆ. ದಿನನಿತ್ಯ ಹತ್ತಾರು ಪ್ರಕರಣಗಳನ್ನು ನಿಭಾಯಿಸಲಾಗುತ್ತದೆ.

ನಿರಂತರ ಕೆಲಸ 
ಅಸಹಾಯಕ, ಅನಾಥ ಹಿರಿಯ ನಾಗರಿಕರನ್ನು ಪತ್ತೆಹಚ್ಚಿ ಆಪ್ತಸಮಾಲೋಚನೆ ನಡೆಸುವ, ಚಿಕಿತ್ಸೆ ಕೊಡಿಸುವ, ಮನೆಯವರ ಪತ್ತೆಯಾದರೆ ಕರೆಯಿಸಿ ಕೌನ್ಸೆಲಿಂಗ್‌ ನಡೆಸುವ, ಅಗತ್ಯ ಬಿದ್ದರೆ ವೃದ್ಧಾಶ್ರಮಕ್ಕೆ ಸೇರ್ಪಡೆಗೊಳಿಸುವ ಕೆಲಸವನ್ನು ಕೂಡ ಸಹಾಯವಾಣಿ ಸಿಬಂದಿ ಮಾಡುತ್ತಾರೆ. ಸಾರ್ವಜನಿಕರಿಗೆ ಮಾಹಿತಿ, ಜಾಗೃತಿ ಶಿಬಿರಗಳ ಮೂಲಕ ಕಾಳಜಿ ಮೂಡಿಸುವ ಕೆಲಸಗಳು ಕೂಡ ನಡೆಯುತ್ತಿವೆ. ನಾನಾ ಕಾರಣಗಳಿಂದ ಬೀದಿಗೆ ಬೀಳುವ ಹಿರಿಯ ನಾಗರಿಕರ ಪಾಲಿಗೆ ಆಪದ್ಭಾಂಧವನಂತೆ ಇದು ಕಾರ್ಯನಿರ್ವಹಿಸುತ್ತ ಬಂದಿದೆ. ಆದರೆ ಈಗ ಗೌರವಧನ ಸಿಗದೆ ಸಹಾಯವಾಣಿ ಸಿಬಂದಿಯೇ ಅತಂತ್ರರಾಗಿದ್ದಾರೆ. 

ಎಸ್‌ಪಿ ಕಚೇರಿಯಲ್ಲಿ ಜಾಗವಿಲ್ಲ 
ಹಿರಿಯ ನಾಗರಿಕರ ಸಹಾಯವಾಣಿ ಎಸ್‌ಪಿ ಕಚೇರಿ ಅಥವಾ ಯಾವುದಾದರೊಂದು ಪೊಲೀಸ್‌ ಠಾಣೆ ಕಚೇರಿಯ ಜತೆಜತೆಗೆ ಕಾರ್ಯನಿರ್ವಹಿಸಬೇಕೆಂಬ ನಿಯಮವಿದೆ. ಆದರೆ ಉಡುಪಿಯಲ್ಲಿ ಇದು ಪ್ರಸ್ತುತ ರೆಡ್‌ಕ್ರಾಸ್‌ ಭವನದಲ್ಲಿ ಕಾರ್ಯನಿರ್ವಹಿಸುತ್ತಿದೆ.

ಸಹಾಯವಾಣಿಯನ್ನು ಸರಕಾರ, ಅಧಿಕಾರಿಗಳು ನಿರ್ಲಕ್ಷಿಸುತ್ತಿದ್ದಾರೆ. ಎಸ್‌ಪಿ ಕಚೇರಿಯಲ್ಲಿಯೇ ಅವಕಾಶ ನೀಡುವಂತೆ ಕೋರಲಾಗಿತ್ತಾದರೂ ನೀಡಿಲ್ಲ. ಓಡಾಟಕ್ಕೆ ವಾಹನ ಕೇಳಲಾಗಿತ್ತು, ಅದೂ ಸಿಕ್ಕಿಲ್ಲ. ಈಗ ಅನುದಾನ ಕೂಡ ಬಿಡುಗಡೆ ಮಾಡಿಲ್ಲ ಎಂಬ ಅಸಹಾಯಕತೆ ಸಹಾಯವಾಣಿ ನಿರ್ವಹಿಸುತ್ತಿರುವ ಮಹಿಳಾ ಮಂಡಳಿಗಳ ಒಕ್ಕೂಟದ ಪದಾಧಿಕಾರಿಗಳದ್ದು. 

ಬೇರೆ ಜಿಲ್ಲೆಗಳಲ್ಲಿ ಇಂತಹ ಸಮಸ್ಯೆಗಳಿಲ್ಲ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರಿಕರು ಮತ್ತು ವಿಕಲಚೇತನರ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಯತ್ನಪಟ್ಟರೆ ಅನುದಾನ ದೊರೆಯಬಹುದು. ಉಡುಪಿಯ ಹಿರಿಯ ನಾಗರಿಕರ ಸಹಾಯವಾಣಿಗೆ ರಾಜ್ಯದಲ್ಲಿಯೇ ಉತ್ತಮ ಹೆಸರಿದೆ. ಆದರೆ ಈಗ ಇದನ್ನು ಮುಂದುವರಿಸುವುದು ಹೇಗೆಂಬ ಚಿಂತೆ ಕಾಡುತ್ತಿದೆ ಎಂದು ಸಿಬಂದಿ ಅಸಮಾಧಾನ ತೋಡಿಕೊಂಡಿದ್ದಾರೆ.

ಹಿರಿಯ ನಾಗರಿಕರ ರಕ್ಷಣೆಯ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿಕೊಂಡು ಬರುತ್ತಿರುವ ಸಹಾಯವಾಣಿಯವರಿಗೆ ಗೌರವಧನ ದೊರೆಯದಿರುವುದನ್ನು ಜಿಲ್ಲಾಧಿಕಾರಿ ಗಮನಕ್ಕೆ ತಂದಿದ್ದೇವೆ. ಸದ್ಯ ಅನುದಾನ ಬಾರದಿದ್ದರೂ ಇತರ ಅಗತ್ಯ ಖರ್ಚನ್ನು ಹೊಂದಿಸಿಕೊಂಡು ಹೋಗುತ್ತಿದ್ದೇವೆ. ಆದರೆ ಗೌರವಧನ ಪಾವತಿ ಸಾಧ್ಯವಾಗುತ್ತಿಲ್ಲ. 
– ವಸಂತಿ ರಾವ್‌ ಕೊರಡ್ಕಲ್‌
ಮಹಿಳಾ ಮಂಡಳಿಗಳ ಒಕ್ಕೂಟದ ಅಧ್ಯಕ್ಷೆ 

ಸರಕಾರಿ ಮಟ್ಟದಲ್ಲೇ ಆಗಬೇಕು
 ಇದು ಇಡೀ ರಾಜ್ಯದಲ್ಲಿರುವ ಸಮಸ್ಯೆ. ಇಲಾಖೆಯ ನಿರ್ದೇಶಕರಿಗೆ ಈಗಾಗಲೇ ಮಾಹಿತಿ ನೀಡಿದ್ದೇವೆ. ಅನುದಾನ ಬರುವ ವರೆಗೆ ಒಕ್ಕೂಟದವರೇ ನಿರ್ವಹಿಸಬೇಕಾಗುತ್ತದೆ. ಕೆಲವೇ ದಿನಗಳಲ್ಲಿ ಅನುದಾನ ಬಿಡುಗಡೆಯಾಗುವ ಭರವಸೆ ದೊರೆತಿದೆ.
– ನಿರಂಜನ್‌,  ಹಿರಿಯ ನಾಗರಿಕರು ಮತ್ತು ವಿಕಲಚೇತನರ ಕಲ್ಯಾಣಾಧಿಕಾರಿ

– ಸಂತೋಷ್‌ ಬೊಳ್ಳೆಟ್ಟು 

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.