ಕರಾವಳಿಗೆ ಪ್ರತ್ಯೇಕ ಮರಳು ನೀತಿ
Team Udayavani, Jan 30, 2019, 4:01 AM IST
ಉಡುಪಿ: ಕರಾವಳಿಯಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ಮರಳು ತೆಗೆಯುತ್ತಿದ್ದು, ಇತರ ಜಿಲ್ಲೆಗಳ ನಿಯಮಗಳು ಇಲ್ಲಿಗೆ ಅನ್ವಯಿಸುವುದಿಲ್ಲ. ಆದ್ದರಿಂದ ಕರಾವಳಿ ಜಿಲ್ಲೆಯಲ್ಲಿ ಮರಳುಗಾರಿಕೆ ಕುರಿತಂತೆ ಪ್ರತ್ಯೇಕ ನೀತಿ ರೂಪಿಸಲು ಕ್ಯಾಬಿನೆಟ್ ಉಪ ಸಮಿತಿಯಲ್ಲಿ ಚರ್ಚಿಸಲಾಗುವುದು ಎಂದು ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ್ ಪಾಟೀಲ್ ತಿಳಿಸಿದ್ದಾರೆ.
ಅವರು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಪ್ರಗತಿ ಪರಿಶೀಲನ ಸಭೆಯಲ್ಲಿ ಮಾತ
ನಾಡಿದರು. ಪ್ರತ್ಯೇಕ ಮರಳು ನೀತಿಗೆ ಅನುಗುಣವಾಗಿ ಸೇರಿಸಬಹುದಾದ ಅಂಶಗಳ ಕುರಿತು ವಿವರವಾದ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.
ಜಿಲ್ಲೆಯಲ್ಲಿ ಪ್ರಸ್ತುತ ಗುರುತಿಸಲಾಗಿರುವ 23 ನಾನ್ ಸಿಆರ್ಝಡ್ ವ್ಯಾಪ್ತಿಯಲ್ಲಿ ಮರಳು ತೆಗೆಯುವ ಕುರಿತಂತೆ ಪಿಡಬ್ಯೂಡಿ, ಕೆಆರ್ಐಡಿಎಲ್, ಪಿಆರ್ಇಡಿ ಸೇರಿದಂತೆ ವಿವಿಧ ಸರಕಾರಿ ಏಜೆನ್ಸಿಗಳಿಗೆ ಹಾಗೂ ಪ್ರಾಯೋಗಿಕವಾಗಿ ಈ ಮರಳು ದಿಬ್ಬವ್ಯಾಪ್ತಿಯ 2 ಗ್ರಾ.ಪಂ.ಗಳಿಗೆ ಪ್ರಾಯೋಗಿಕ ಅನುಮತಿ ನೀಡುವ ಕುರಿತು ನಿರ್ಧರಿಸಲಾಯಿತು.
ಸುದ್ದಿಗಾರರ ಜತೆ ಮಾತನಾಡಿದ ಸಚಿವರು, ಸಿಆರ್ಝಡ್ ವ್ಯಾಪ್ತಿಯ 30 ಮರಳು ದಿಬ್ಬಗಳಲ್ಲಿ ಐದಕ್ಕೆ ಕೆಸಿ
ಝಡ್ಎಂಪಿ (ಕರ್ನಾಟಕ ಕರಾವಳಿ ವಲಯ ನಿರ್ವಹಣಾ ಯೋಜನೆ) ಅನುಮೋದನೆ ಸಿಕ್ಕಿದೆ. ಇನ್ನು ಎಂಟಕ್ಕೆ ಎಂಟು ದಿನಗಳೊಳಗೆ ಅನುಮತಿ ಸಿಗಲಿದೆ. ಹೀಗಾದರೆ 13-13 ಲ.ಮೆ.ಟನ್ ಅಂದಾಜು ಮರಳು ಲಭ್ಯವಾಗಲಿದೆ.
ನಾನ್ಸಿಆರ್ಝಡ್ ಮರಳು ತೆಗೆಯಲು ಸರಕಾರದ ಇತರ ಇಲಾಖೆಗೂ ಅವಕಾಶ ನೀಡಲಾಗಿದೆ ಎಂದರು.
ವಿಧಾನ ಪರಿಷತ್ ವಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ವಿಧಾನಸಭೆಯ ವಿಪಕ್ಷದ ಮುಖ್ಯ ಸಚೇತಕ ವಿ. ಸುನೀಲ್ ಕುಮಾರ್, ಸಂಸದೆ ಶೋಭಾ ಕರಂದ್ಲಾಜೆ, ಶಾಸಕರಾದ ರಘುಪತಿ ಭಟ್, ಲಾಲಾಜಿ ಮೆಂಡನ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ಬಿ.ಎಂ. ಸುಕುಮಾರ ಶೆಟ್ಟಿ, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ. ಮಹೇಶ್ವರ ರಾವ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕಠಾರಿಯಾ, ನಿರ್ದೇಶಕ ಪ್ರಸನ್ನ ಕುಮಾರ್, ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಜಿ.ಪಂ. ಸಿಇಒ ಸಿಂಧು ಬಿ ರೂಪೇಶ್, ಎಸ್ಪಿ ಲಕ್ಷ್ಮಣ ಬ. ನಿಂಬರಗಿ, ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಪದ್ಮಜ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಸಭೆ ಮುನ್ನ ಸಚಿವರು ಧರಣಿ ನಿರತರನ್ನು ಉದ್ದೇಶಿಸಿ ಮಾತನಾಡಿದರು.
ನಾನ್ ಸಿಆರ್ಝಡ್ ಮರಳುಗಾರಿಕೆಗೆ ಅನುಮತಿ
ಮಂಗಳೂರು: ಸಚಿವ ರಾಜಶೇಖರ ಬಿ. ಪಾಟೀಲ ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಇಲಾಖಾ ಪ್ರಗತಿ ಪರಿಶೀಲನ ಸಭೆ ನಡೆಸಿದ್ದು, ನಾನ್ ಸಿಆರ್ಝಡ್ನಲ್ಲಿ ಮರಳುಗಾರಿಕೆ ನಡೆಸಲು ಅನುಮತಿ ನೀಡುವಂತೆ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಎಲ್ಲರಿಗೆ ಗುತ್ತಿಗೆ: ಭರವಸೆ; ಧರಣಿ ಅಂತ್ಯ
ನಾವು ಎಲ್ಲ 171 ಗುತ್ತಿಗೆದಾರರಿಗೆ ಮರಳು ತೆಗೆಯಲು ಅವಕಾಶ ನೀಡಬೇಕೆಂದು ಒತ್ತಾಯಿಸಿದ್ದೆವು. ಇವರಲ್ಲಿ 79 ಜನರು ನಿಯಮ ಉಲ್ಲಂ ಸಿದ್ದಾರೆಂಬ ಕಾರಣಕ್ಕೆ ಜಿಲ್ಲಾಡಳಿತ ಪರವಾನಿಗೆ ರದ್ದು ಮಾಡಿತ್ತು. ಇದೇನೂ ಅಕ್ರಮ ಮರಳುಗಾರಿಕೆಯಂತಹ ನಿಯಮ ಉಲ್ಲಂಘನೆಯಲ್ಲ. ಕೇವಲ ಜಿಪಿಎಸ್ ಉಲ್ಲಂಘನೆ. ಇದನ್ನು ರದ್ದುಪಡಿಸಿ ಎಲ್ಲರಿಗೂ ಗುತ್ತಿಗೆ ಕೊಡುವುದಾಗಿ ಸಚಿವರು ಭರವಸೆ ನೀಡಿದ್ದಾರೆ. ಜಿಲ್ಲೆಯನ್ನು ಒಂದು ಕ್ಲಸ್ಟರ್ ಆಗಿ ಮಾಡಬೇಕೆಂಬ ಬೇಡಿಕೆಗೂ ಒಪ್ಪಿದ್ದಾರೆ. ಬೇಡಿಕೆ ಈಡೇರಿಸುವ ಸಚಿವರ ಭರವಸೆ ಹಿನ್ನೆಲೆಯಲ್ಲಿ ಧರಣಿ ಹಿಂದಕ್ಕೆ
ಪಡೆಯುತ್ತೇವೆ.
ಕೆ. ರಘುಪತಿ ಭಟ್, ಶಾಸಕ, ಉಡುಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು