ಕನ್ನಡ ಉಳಿದರೆ ಸಂಸ್ಕೃತಿ ಉಳಿಯುತ್ತದೆ: ಶಿವ ಪೂಜಾರಿ


Team Udayavani, Feb 3, 2019, 1:00 AM IST

kannada.jpg

ಬ್ರಹ್ಮಾವರ: ಕನ್ನಡ ಶ್ರೀಮಂತ ಪ್ರಾಚೀನ ಭಾಷೆ. ಕನ್ನಡ ಉಳಿದರೆ ಸಭ್ಯತೆ, ಸಂಸ್ಕೃತಿ ಉಳಿಯುತ್ತದೆ ಎಂದು ಸಾಹಿತಿ, ಲೇಖಕ ಬಾರಕೂರಿನ ಬಾಬು ಶಿವ ಪೂಜಾರಿ ಹೇಳಿದರು.

ಅವರು ಶನಿವಾರ ಬಾರಕೂರಿನ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್‌ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಠಾರದಲ್ಲಿ  ಶ್ರೀಕ್ಷೇತ್ರ ಧರ್ಮಸ್ಥಳದ ಶಾಂತಿವನ ಟ್ರಸ್ಟ್‌, ಜಿ.ಪಂ. ಸಾರ್ವಜನಿಕ ಶಿಕ್ಷಣ ಇಲಾಖೆ, ಶ್ರೀ ರಾಮಕೃಷ್ಣ ಆಶ್ರಮ ಬೆಳಗಾವಿ ಮತ್ತು ಮಂಗಳೂರು, ಬಾರಕೂರು ಆನ್‌ಲೈನ್‌ ಡಾಟ್‌ಕಾಮ್‌, ಕನ್ನಡ ಸಾಹಿತ್ಯ ಪರಿಷತ್‌ ಬ್ರಹ್ಮಾವರ-ಬಾರಕೂರು ವಲಯದ ಸಹಯೋಗದಲ್ಲಿ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಸಂಘದ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ 156ನೇಯ ಜಯಂತಿ ಪ್ರಯುಕ್ತ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ 18ನೇ ವರ್ಷದ ಮಕ್ಕಳ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.

ಇಂದು ಕನ್ನಡದ ಸ್ಥಿತಿಗತಿ ಚಿಂತಾಜನಕವಾಗಿದೆ. ಸುಮಾರು 1,800 ಕನ್ನಡ ಶಾಲೆಗಳು ಅಂತಿಮ ಹಂತದಲ್ಲಿವೆ. ನಾವು ಸಂಕಲ್ಪ ಮಾಡಿದರೆ ಖಂಡಿತ ಕನ್ನಡ ಶಾಲೆ, ಭಾಷೆ ಉಳಿಯುತ್ತದೆ ಎಂದರು.

ಬೈಂದೂರು ಕಿರಿಮಂಜೇಶ್ವರದ ಶುಭದಾ ಅಂಗ್ಲ ಮಾಧ್ಯಮ ಶಾಲೆಯ ಎಂಟನೆ  ತರಗತಿಯ ವಿದ್ಯಾರ್ಥಿನಿ ಸ್ವೀಕೃತಿ ಶೆಟ್ಟಿ  ಅಧ್ಯಕ್ಷತೆ ವಹಿಸಿದ್ದರು.

ಮಕ್ಕಳ ಸ್ವರಚಿತ ಕವನ ಸಂಕಲನ ವನ್ನು ಕನ್ನಡ ಸಾಹಿತ್ಯ ಪರಿಷತ್‌ ಬ್ರಹ್ಮಾವರ-ಬಾರಕೂರು ವಲಯ ಘಟಕದ ಅಧ್ಯಕ್ಷ ಕೆ. ಅಶೋಕ್‌ ಭಟ್‌ ಚಾಂತಾರು ಬಿಡುಗಡೆಗೊಳಿಸಿದರು.

ಸಾ.ಶಿ.ಇಲಾಖೆಯ ಜಿಲ್ಲಾ ದೈಹಿಕ ಶಿಕ್ಷಣ ಅಧಿ ಕಾರಿ ಮಧುಕರ ಎಸ್‌. ಶುಭಾಶಂಸನೆಗೈದರು. ಅತಿಥಿಗಳಾಗಿ ಶಾಂತಿವನ ಟ್ರಸ್ಟ್‌ನ ಕಾರ್ಯದರ್ಶಿ ಬಿ. ಸೀತಾರಾಮ ತೋಳ್ಪಡಿತ್ತಾಯ, ಧರ್ಮಸ್ಥಳದ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ  ನಿರ್ದೇಶಕ ಐ. ಶಶಿಕಾಂತ್‌ ಜೈನ್‌, ಬಾರಕೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ| ರಮೇಶ್‌ ಆಚಾರ್ಯ, ಬಾರಕೂರು ಆನ್‌ಲೈನ್‌ ಡಾಟ್‌ಕಾಮ್‌ನ ಪ್ರತಿನಿ ಧಿ ಎರಿಕ್‌ ಸೋನ್ಸ್‌, ಬಾರಕೂರು ರಂಗನಕೇರಿ ಶೆಟ್ಟಿಗಾರ್‌ ಇಂಡಸ್ಟ್ರೀಸ್‌ನ ಮಾಲಕ ಶ್ರೀನಿವಾಸ ಶೆಟ್ಟಿಗಾರ್‌, ಪ್ರಧಾನ ಸಂಘಟಕ ರಾಮ ಭಟ್ಟ ಸಜಂಗದ್ದೆ ಉಪಸ್ಥಿತರಿದ್ದರು.

ಸಮ್ಮಾನ
ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ನಾಗೇಶ್‌ ಶ್ಯಾನುಭಾಗ್‌ ಅವರನ್ನು ಅಭಿನಂದಿಸಲಾಯಿತು. ಕೊಕ್ಕರ್ಣೆ ಸರಕಾರಿ ಪ್ರೌಢಶಾಲೆಯ ಹತ್ತನೇ  ತರಗತಿಯ ಕ್ರೀಡಾ ಪ್ರತಿಭೆಗಳಾದ ಪ್ರಸನ್ನ, ವಿN°àಶ,  ಬಾರಕೂರು ಹೊಸಾಳದ ಸರಕಾರಿ ಹಿ.ಪ್ರಾ. ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿ ಅಶ್ವಿ‌ನ್‌ ಅವರನ್ನು ಸಮ್ಮಾನಿಸಲಾಯಿತು.

ಮಕ್ಕಳ ಸ್ವರಚಿತ ಕವನಗೋಷ್ಠಿ, ಚಿಂತನಗೋಷ್ಠಿ ನಡೆಯಿತು. ಅಕ್ಷತಾ ಸ್ವಾಗತಿಸಿ, ರಶ್ಮಿತಾ ವಂದಿಸಿದರು. ವಂಧ್ಯಾ ಆರ್‌. ಭಟ್‌, ಜನಾರ್ದನ ಎಸ್‌. ಉಡುಪ  ನಿರೂಪಿಸಿದರು. ವಡ್ಡರ್ಸೆ ಪ್ರಕಾಶ್‌ ಆಚಾರ್ಯ, ಬಿ. ಅಶೋಕ್‌ ಸಿ. ಪೂಜಾರಿ  ಸಹಕರಿಸಿದರು.

ಮನಸ್ಸಿನ ಆರೋಗ್ಯ
ದೇಹದ ಬೆಳವಣಿಗೆಗೆ ಸಂತುಲಿತ ಆಹಾರ ಹೇಗೆ ಮುಖ್ಯವೋ ಹಾಗೆಯೇ ಮನಸ್ಸಿನ ಆರೋಗ್ಯಕರ ಬೆಳವಣಿಗೆಗೆ ಸಾಹಿತ್ಯದ ಓದು ಮುಖ್ಯ. ಈ ನಿತ್ಯ ಸತ್ಯ ಅರ್ಥ ಮಾಡಿಕೊಂಡು ಓದುವ ಹವ್ಯಾಸವನ್ನು ಚಿಕ್ಕ ವಯಸ್ಸಿನಿಂದಲೇ ಬೆಳೆಸಿಕೊಳ್ಳಬೇಕು ಎಂದು ಸಮ್ಮೇಳನಾಧ್ಯಕ್ಷೆ ಸ್ವೀಕೃತಿ ಶೆಟ್ಟಿ ಹೇಳಿದರು. ಎಲ್ಲ ರಾಜ್ಯಗಳಲ್ಲೂ  ಭಾಷಾಭಿಮಾನ ಸ್ವಾಭಿಮಾನದ ಮುಕುಟವಾಗಿದೆ. ಆದರೆ ಇಂದು ಗ್ರಾಮೀಣ ಪ್ರದೇಶದ ಮಕ್ಕಳೂ ಕೂಡ ನಗರವಾಸದ ಆವೇಗದ ಸಂಕ್ರಮಣ ಕಾಲದಲ್ಲಿರುವಾಗ ಸಾಹಿತ್ಯ ಎಲ್ಲಿ ತನ್ನ ಮಹತ್ವ  ಕಳೆದುಕೊಳ್ಳುತ್ತದೋ ಎನ್ನುವ ಭಯ ಕಾಡುತ್ತಿದೆ. ಭಾಷೆಯೊಂದು ಉಳಿಯಬೇಕಾದರೆ ಶಿಕ್ಷಣದಲ್ಲಿ ಅದು ಸಶಕ್ತವಾಗಿ ಬಳಕೆಯಾಗಬೇಕು. ಒಂದನೇ ತರಗತಿಯಿಂದಲೇ ಕನ್ನಡ ಕಲಿಯುವುದನ್ನು ಕಡ್ಡಾಯಗೊಳಿಸಬೇಕು. ಕನ್ನಡಕ್ಕೆ ಪ್ರಾಧಾನ್ಯ ನೀಡಬೇಕು ಎಂದರು.

ಟಾಪ್ ನ್ಯೂಸ್

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.