ಬಜೆ ಹಿನ್ನೀರಿಗೆ ಶಾಸಕರ ಭೇಟಿ; ರೈತರಿಂದ ಅಹವಾಲು ​​​​​​​


Team Udayavani, Feb 17, 2019, 12:30 AM IST

baje-3.jpg

ಮಣಿಪಾಲ: ಬಜೆ ಹಿನ್ನೀರನ್ನು ಭತ್ತ ಸಹಿತ ಕೃಷಿಗೆ ಪಂಪ್‌ ಮೂಲಕ ತೆಗೆಯುವುದನ್ನು ನಿರ್ಬಂಧಿಸಿ ವಿದ್ಯುತ್‌ ಕಡಿತಗೊಳಿಸಿದ ಜಿಲ್ಲಾಡಳಿತದ ಕ್ರಮದಿಂದಾಗಿ ರೈತರು ಕಂಗಾಲಾಗಿದ್ದು, ಶನಿವಾರ ಕಾಪು ಶಾಸಕ ಲಾಲಾಜಿ ಆರ್‌. ಮೆಂಡನ್‌ ಉಡುಪಿ ನಗರ ಸಭೆಯ ಆಯುಕ್ತರು ಹಾಗೂ ಅಭಿಯಂತರೊಂದಿಗೆ ಬಜೆ ಡ್ಯಾಂಗೆ ತೆರಳಿ ಅವಲೋಕನ ನಡೆಸಿದರು. 

ಬಳಿಕ ರೈತರ ಅಹವಾಲು ಆಲಿಸಿದರು. ಮಂಗಳವಾರ ಜಿಲ್ಲಾಧಿಕಾರಿ ಸಭೆಯಲ್ಲಿ  ರೈತರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಶಾಸಕರು ಹೇಳಿದರು. ಮಂಗಳವಾರದ ಒಳಗೆ ಸಮಸ್ಯೆ ಬಗೆಹರಿಸದಿದ್ದರೆ ನಗರಕ್ಕೆ ನೀರು ಹೋಗಲು ಬಿಡುವುದಿಲ್ಲ ಎಂದು ರೈತರು ಪಟ್ಟು ಹಿಡಿದರು. 

ರೈತರ ಆಕ್ರೋಶ
ಸ್ವರ್ಣೆಯ ನೀರನ್ನು ಬಳಸಿಕೊಂಡು ಕೃಷಿ ಮಾಡುತ್ತಿದ್ದೇವೆ. ಮಳೆಗಾಲದಲ್ಲಿ ಡ್ಯಾಂನಿಂದಾಗಿ ನಮ್ಮ ಕೃಷಿ ಪ್ರದೇಶ ಮುಳುಗಡೆಯಾಗುತ್ತದೆ. ಕೊಳಕೆ ಬೆಳೆ ಕೈಗೆ ಬರುವ ಹೊತ್ತಿಗೆ ನೀರು ಬಳಕೆಗೆ ನಿರ್ಬಂಧ ಹೇರಲಾಗಿದೆ. ನಗರ ಸಭೆಯ ನೀರಿನ ಬೇಡಿಕೆ ಹೆಚ್ಚಾಗಿದ್ದರೂ ಹಿಂದಿನ ವ್ಯವಸ್ಥೆಯಲ್ಲೇ ನೀರು ಕೊಂಡೊಯ್ಯಲಾಗುತ್ತಿದೆಯೇ ಹೊರತು ಹೆಚ್ಚುವರಿ ವ್ಯವಸ್ಥೆಗೆ ಯಾವುತ್ತೂ ಕ್ರಮ ಕೈಗೊಂಡಿಲ್ಲ. ರೈತರನ್ನು ಸತಾಯಿಸುವ ಕೆಲಸವನ್ನಷ್ಟೇ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನೊಂದು ಡ್ಯಾಂ ಯಾರದ್ದು? ಅಧಿಕಾರಿಗಳಿಗೇ ಗೊಂದಲ!
ಬಜೆ ಮೊದಲ ಹಂತದ ಡ್ಯಾಂ ಬಳಿ ವಿದ್ಯುತ್‌ ಉತ್ಪಾದನೆ ಕಂಪೆನಿಯ ಡ್ಯಾಂ ಇದೆ. ಇಲ್ಲಿಗೆ ಶಾಸಕರೊಂದಿಗೆ ತೆರಳಿ ನಗರಸಭೆಯ ಅಧಿಕಾರಿಗಳು ಪರಿಶೀಲನೆ ನಡೆಸಿದರು. ವಾಪಸಾದ ಬಳಿಕ ಇನ್ನೊಂದು ಡ್ಯಾಂ ಯಾರದ್ದು ಎಂಬ ಪತ್ರಕರ್ತರ ಪ್ರಶ್ನೆಗೆ ಅವರ ಮರುಪ್ರಶ್ನೆಯೇ ಉತ್ತರವಾಗಿತ್ತು. ಅಲ್ಲಿಂದ ನೀರನ್ನು ಬಳಸುತ್ತಿರುವ ನಗರಸಭೆಯ ಅಧಿಕೃತರಿಗೇ ಡ್ಯಾಂ ಯಾರದ್ದು ಎಂಬ ಸ್ಪಷ್ಟತೆ ಇಲ್ಲದೆ ಜಿಲ್ಲಾಡಳಿತದತ್ತ ಬೆರಳು ತೋರಿಸುವ ಸ್ಥಿತಿ  ಇರುವುದು ಶೋಚನೀಯ ಎಂದು ಸ್ಥಳದಲ್ಲಿದ್ದ ರೈತರು ಅಭಿಪ್ರಾಯಪಟ್ಟರು. 

ಜನವರಿಯಲ್ಲಿ 1.5 ಮೀಟರ್‌ ಏರಿಸಬೇಕು
ಜನವರಿ ವೇಳೆಗೆ ಬಜೆ ಇನ್ನೊಂದು ಡ್ಯಾಂನ ತಡೆಯನ್ನು 1.5 ಮೀ. ಏರಿಕೆ ಮಾಡಿದರೆ 1 ತಿಂಗಳಿಗೆ ಉಳಿಯುವಷ್ಟು ನೀರನ್ನು ಸಂಗ್ರಹಿಸಲು ಸಾಧ್ಯವಾಗುತ್ತದೆ ಎಂದು ರೈತರು ಸಲಹೆ ನೀಡಿದರು. ಶೀರೂರಿನಲ್ಲಿರುವ 2ನೇ ಹಂತದ ಡ್ಯಾಂನಲ್ಲಿ ಲೀಕೇಜ್‌ ಇದೆ. ನೀರು ಸಂಗ್ರಹಕ್ಕೆ ಪೂರಕ ಸ್ಥಳ ಇಲ್ಲ. ಇದರಿಂದ ಹೆಚ್ಚೇನು ಪ್ರಯೋಜನವಿಲ್ಲ. ಹೆಚ್ಚುವರಿ ನೀರು ಸಂಗ್ರಹ ಯೋಜನೆ ರೂಪಿಸಲು ನಗರ ಸಭೆ/ ಜಿಲ್ಲಾಡಳಿತ ಯೋಚಿಸಬೇಕಿದೆ. 

ಸ್ಥಳದಲ್ಲಿ ಸುಮಾರು 50 ಮಂದಿ ರೈತರು, ತಾಪಂ ಸದಸ್ಯೆ ಸಂಧ್ಯಾ ಕಾಮತ್‌,  ಬೊಮ್ಮರಬೆಟ್ಟು ಗ್ರಾಪಂ ಪಿಡಿಒ ರಾಜಶೇಖರ್‌ ರಾವ್‌, ಉಪಾಧ್ಯಕ್ಷ ಹರೀಶ್‌ ಸಾಲಿಯಾನ್‌, ಸದಸ್ಯ ನಾರಾಯಣ ಪೂಜಾರಿ, ಪ್ರಕಾಶ್‌ ಕುಕ್ಕೆಹಳ್ಳಿ, ಉಮೇಶ್‌ ಶೆಟ್ಟಿ, ಶೇಖರ್‌ ಶೆಟ್ಟಿ, ಸಂತೋಷ್‌ ಕುಮಾರ್‌, ದೇವರಾಜ್‌ ಶಾಸಿŒ ಮತ್ತಿತರರಿದ್ದರು. 

ಕಟ್ಟಡ/ಗಾರ್ಡನ್‌ಗೆ ನೀರು ಬಿಡುತ್ತಾರೆ!
ಜೀವನಾಧಾರವಾದ ಬೆಳೆ ಕರಟುತ್ತಿದ್ದರೂ ಹಿನ್ನೀರು ಬಳಕೆಗೆ ನಿರ್ಬಂಧ ಹೇರಲಾಗಿದೆ. ಆದರೆ ನಗರದಲ್ಲಿ ಇದೇ ನೀರನ್ನು ಕಟ್ಟಡ ನಿರ್ಮಾಣಕ್ಕೆ, ಗಾರ್ಡನ್‌ಗೆ ಹರಿಸಲಾಗುತ್ತಿದೆ. ಇದನ್ನು ನಿಯಂತ್ರಿಸುವ ಸಾಧ್ಯವಾಗದ ಅಧಿಕಾರಿಗಳು ಬಡ ರೈತರ ಮೇಲೆ ದಬ್ಟಾಳಿಕೆ ಮಾಡುತ್ತಿದ್ದಾರೆ ಎಂದು ರೈತ ಮುಖಂಡರು ದೂರಿದರು.

ಶೀಘ್ರ ಕ್ರಮ 
ಜಿಲ್ಲಾಧಿಕಾರಿ ಮಂಗಳವಾರ ಸಭೆ ಕರೆದಿದ್ದಾರೆ.ವಾರದಲ್ಲಿ 2 ದಿನ ನೀರು ಬೇಕು ಎಂದು ರೈತರಿಂದ ಬೇಡಿಕೆ ಬಂದಿದೆ. ಡ್ಯಾಂ ಎತ್ತರ ಹೆಚ್ಚಿಸಿದ್ದಲ್ಲಿ ನೀರಿನ ಸಂಗ್ರಹ ಹೆಚ್ಚಲಿದೆ ಎಂಬ ಸಲಹೆಯೂ ಇದೆ. ಈ ಬಗ್ಗೆ ಚರ್ಚಿಸಿ ಶೀಘ್ರ ಕ್ರಮ ಕೈಗೊಳ್ಳಲಾಗುವುದು.
– ಲಾಲಾಜಿ ಆರ್‌. ಮೆಂಡನ್‌,ಶಾಸಕ,ಕಾಪು

ಡಿಸಿ ಗಮನಕ್ಕೆ ತರಲಾಗುವುದು
ರೈತರ ಸಮಸ್ಯೆ ಬಗ್ಗೆ ಜಿಲ್ಲಾಧಿಕಾರಿ ಗಮನಕ್ಕೆ ತರಲಾಗುವುದು.ನಗರ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣಕ್ಕೆ, ಗಾರ್ಡನ್‌ಗೆ ನೀರು ಬಿಡುವುದನ್ನು ನಿಲ್ಲಿಸಲಾಗುವುದು. ಹೆಚ್ಚುವರಿ ನೀರಿನ ಸಂಪರ್ಕ ನೀಡುತ್ತಿಲ್ಲ.
– ಆನಂದ ಸಿ.ಕಲ್ಲೋಳಿಕರ್‌,ನಗರಾಯುಕ್

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.