“ಕಾನೂನು ಇರುವುದು ಸಾರ್ವಜನಿಕರ ಒಳಿತಿಗಾಗಿ’
Team Udayavani, Feb 22, 2019, 12:30 AM IST
ಕಾಪು: ಕಾನೂನುಗಳು ಸಾರ್ವಜನಿಕರ ಅನುಕೂಲಕ್ಕಾಗಿ ಇರುತ್ತವೆಯೇ ಹೊರತು ಸರಕಾರದ ಹಿತಕ್ಕಾಗಿ ಅಲ್ಲ. ಅದನ್ನು ಸಾರ್ವಜನಿಕರು ಕೂಡಾ ಮನಗಂಡು ರಸ್ತೆ ಸುರಕ್ಷತೆಯನ್ನು ಕಾಪಾಡುವಲ್ಲಿ ಇಲಾಖೆಯೊಂದಿಗೆ ಕೈ ಜೋಡಿಸಿ ಸಹಕರಿಸುವುದು ಅತ್ಯಗತ್ಯವಾಗಿದೆ ಎಂದು ಕಾಪು ಪೊಲೀಸ್ ಠಾಣಾ ಸಿಬಂದಿ ಗಣೇಶ್ ನಾಯ್ಕ ಹೇಳಿದರು.
ಕಾಪು ಪೊಲೀಸ್ ಠಾಣೆಯ ಸಹಕಾರದೊಂದಿಗೆ ಕಾಪು ರೋಟರಿ ಕ್ಲಬ್ನ ಶತಾಬ್ದಿ ವೇದಿಕೆಯಲ್ಲಿ ನಡೆದ ರಸ್ತೆ ಸುರಕ್ಷತಾ ಮಾಸಾಚರಣೆ ಮಾಹಿತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಾಹನ ಸಂಚರಿಸುವಾಗ ಹೆಲ್ಮೆಟ್ ಧರಿಸುವುದು, ಸೀಟ್ ಬೆಲ್ಟ್ ಹಾಕುವುದು, ಟ್ರಾಫಿಕ್ ಸಿಗ್ನಲ್ ಪಾಲಿಸುವುದು, ನಿಧಾನವಾಗಿ ಚಲಿಸುವುದು, ಅಮಲು ಪದಾರ್ಥ ಸೇವಿಸಿ ವಾಹನ ಚಾಲನೆ ಮಾಡದಿರುವುದು, ಇನ್ಸೂರೆನ್ಸ್ ಪಾವತಿಸುವುದು ಇತ್ಯಾದಿ ಕಾನೂನುಗಳನ್ನು ಸಾರ್ವಜನಿಕರು ಪಾಲನೆ ಮಾಡಬೇಕು ಎಂದರು.
ಕಾಪು ರೋಟರಿ ಕ್ಲಬ್ನ ಕಾರ್ಯದರ್ಶಿ ಪ್ರವೀಣ್, ರೋಟರಿ ವಲಯ ಸೇನಾನಿ ಕೆ. ಸದಾಶಿವ ಭಟ್, ಪೂರ್ವಾಧ್ಯಕ್ಷರಾದ ವಿದ್ಯಾಧರ ಪುರಾಣಿಕ್, ಶ್ರೀನಿವಾಸ ರಾವ್, ಪೊಲೀಸ್ ಠಾಣಾ ಸಿಬಂದಿಗಳಾದ ರಮೇಶ್, ಗಿರೀಶ್ ಉಪಸ್ಥಿತರಿದ್ದರು.ಕಾಪು ರೋಟರಿ ಅಧ್ಯಕ್ಷ ಜೇಮ್ಸ್ ಡಿ’ ಸೋಜ ಸ್ವಾಗತಿಸಿದರು. ಮಾಜಿ ಸಹಾಯಕ ಗವರ್ನರ್ ಮನೋಹರ್ ರಾವ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ