ನಿರ್ವಹಣೆಯಿಲ್ಲದೆ ಸೊರಗಿದ ಬಾರಕೂರು ಕೋಟೆಕೆರೆ


Team Udayavani, Feb 22, 2019, 12:30 AM IST

1902bvre3.jpg

ಬ್ರಹ್ಮಾವರ: ಐತಿಹಾಸಿಕ ಬಾರಕೂರು ಕೋಟೆಕೆರೆ ನಿರ್ವಹಣೆ ಇಲ್ಲದೆ ದುಃಸ್ಥಿತಿಗೆ ತಲುಪಿದ್ದು, ಜೀರ್ಣೋದ್ಧಾರ ನಿರೀಕ್ಷೆಯಲ್ಲಿದೆ.  ಬಾರಕೂರಿನ ಪ್ರಧಾನ ಧಾರ್ಮಿಕ ಕೇಂದ್ರ ಕೋಟೆಕೇರಿ ಶ್ರೀ ಪಂಚಲಿಂಗೇಶ್ವರ ಹಾಗೂ ಶ್ರೀ ಬಟ್ಟೆ ವಿನಾಯಕ ದೇವಸ್ಥಾನದ ಸಮೀಪ ಈ ಕೆರೆ ಇದೆ.  

7ನೇ ಶತಮಾನದ್ದು! 
ಬಾರಕೂರು ಕೋಟೆಕೇರಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ 7 ಶತಮಾನದಲ್ಲಿ ನಿರ್ಮಾಣಗೊಂಡಿದೆ ಎಂದು ಇತಿಹಾಸ ಹೇಳುತ್ತದೆ. ಅದೇ ಸಂದರ್ಭ ಕೋಟೆಕೆರೆಯೂ ರಚನೆ ಯಾಗಿತ್ತು ಎನ್ನಲಾಗಿದೆ. 
 
ರಾಜರ ಆಳ್ವಿಕೆ
ರಾಜರ ಆಳ್ವಿಕೆಯಲ್ಲಿ ವೈಭವದ ದಿನಗಳನ್ನು ಕಂಡ ನಗರಿ ಬಾರಕೂರು. ಆಳುಪರು, ಪಾಂಡ್ಯರು, ಜೈನರು, ವಿಜಯನಗರ, ಸಾಮಂತ ರಾಜರು ಬಾರಕೂರನ್ನು ಆಳಿದ್ದರು. ಪ್ರತಿ ನಿತ್ಯ ಉತ್ಸವ ನಡೆಯಲಿ ಎನ್ನುವ ಉದ್ದೇಶದಿಂದ 365 ದೇವಸ್ಥಾನಗಳನ್ನು ನಿರ್ಮಿಸಲಾಗಿತ್ತು. ಕೃಷಿ, ನೀರಾವರಿ ಮತ್ತಿತರ ಉದ್ದೇಶದಿಂದ ಸಾಕಷ್ಟು ಕೆರೆಗಳನ್ನೂ ನಿರ್ಮಿಸಲಾಗಿತ್ತು. ಬಾರಕೂರಿನಲ್ಲಿ ಕೋಟೆ ಕೆರೆ ಜತೆಗೆ ಮೂಡುಕೇರಿ, ಚೌಳಿಕೇರಿಗಳಲ್ಲಿ ಬೃಹತ್‌ ಕೆರೆಗಳಿವೆ.

ಸಮೃದ್ಧ ಕೆರೆ
ಕೋಟೆಕೆರೆಯಲ್ಲಿ ಮೊದಲು ಸಮೃದ್ಧ ನೀರಿತ್ತು. ನೂರಾರು ಎಕ್ರೆ ಕೃಷಿ ಭೂಮಿಗೆ ಆಸರೆಯಾಗಿತ್ತು. ದೇವಸ್ಥಾನದ ಕೆರೆ ದೀಪೋತ್ಸವವೂ ವಿಜೃಂಭಣೆಯಿಂದ ನಡೆಯುತ್ತಿತ್ತು. ಬೃಹತ್‌ ಶಿಲಾ ಕಲ್ಲು ಗಳಿಂದ, ಕೆಂಪು ಕಲ್ಲಿನಿಂದ ಕಟ್ಟಿದ ಸುಂದರ ಕೆರೆ ಇದಾಗಿದೆ. ನೋಡಲೂ ರಮಣೀಯವಾಗಿದ್ದು, ಸುಮಾರು 15 ವರ್ಷಗಳ ಹಿಂದೆ ಸ್ವಲ್ಪ ಪ್ರಮಾಣದ ಮಣ್ಣು ತೆಗೆಯಲಾಗಿತ್ತು. 

ಸಂಪೂರ್ಣ ನಿರ್ಲಕ್ಷ್ಯ
ಇತ್ತೀಚಿನ ವರ್ಷಗಳಲ್ಲಿ ಕರೆ ಸಂಪೂರ್ಣ ನಿರ್ಲಕ್ಷéಕ್ಕೊಳಗಾಗಿದೆ. ಗಿಡಗಂಟಿ ಆವರಿಸಿದ್ದು, ಆವರಣ ಕುಸಿಯ ತೊಡಗಿದೆ.  ಹೂಳು ತುಂಬಿ ನೀರಿನ ಸಂಗ್ರಹ ಸಾಮರ್ಥ್ಯ ತೀವ್ರ ಇಳಿಕೆಯಾಗಿದೆ. ಕಸ, ತ್ಯಾಜ್ಯ ಎಸೆಯುವ ಕೊಂಪೆಯಾಗಿ ಉಪಯೋಗಕ್ಕೆ ಬಾರದ ಸ್ಥಿತಿ ತಲುಪಿದೆ.

ವಿಪುಲ ಅವಕಾಶ
ಐತಿಹಾಸಿಕ ಕೋಟೆಕೆರೆ ಜೀರ್ಣೋ ದ್ಧಾರಕ್ಕೆ ವಿಫುಲ ಅವಕಾಶಗಳಿವೆ. ಇತ್ತೀಚಿನ ವರ್ಷಗಳಲ್ಲಿ ಅಂತರ್ಜಲ ಮಟ್ಟ ತೀವ್ರ ಕುಸಿದು ಪರಿಸರದ ಬಾವಿಗಳು ಬರಡಾಗಿವೆ. ಕೆರೆ ಅಭಿವೃದ್ದಿಗೊಳಿಸಿದರೆ ಕುಡಿಯುವ ನೀರಿಗೆ ಆಸರೆಯಾಗುತ್ತದೆ. ಸ್ವಚ್ಚಗೊಳಿಸಿ ಹೂಳು ತೆಗೆದರೆ ಮತ್ತೂಮ್ಮೆ ಸುಂದರ ಕೋಟೆ ಕೆರೆ ಕಾಣಲು ಸಾಧ್ಯವಿದೆ. ಕೋಟೆಕೆರೆ ಸಹಿತ ಬಾರಕೂರಿನ ಯಾವುದೇ ಕೆರೆ ಅಭಿವೃದ್ಧಿಗೊಳಿಸುವುದಾದರೂ ಶಾಶ್ವತ ಕಾಮಗಾರಿಯ ಅಗತ್ಯವಿದೆ. ಗುಣ ಮಟ್ಟದ ಕಾರ್ಯ ಕೈಗೊಂಡು ಸಮಗ್ರ ಅಭಿವೃದ್ಧಿಯಾಗಬೇಕು,  ಬಾಕೂìರಿನ ಕೋಟೆಯಲ್ಲಿ ಇತ್ತೀಚೆಗೆ ಆಳುಪೋತ್ಸವ ವಿಜೃಂಭಣೆಯಿಂದ ಜರಗಿತ್ತು. ಇಂತಹ ಉತ್ಸವಗಳ ಜತೆ ಐತಿಹಾಸಿಕ ಸ್ಥಳ, ಕೆರೆಗಳ ಅಭಿವೃದ್ದಿಯೂ ಆಗಲಿ ಎಂದು ಜತೆಗೆ ಆಶಿಸಿದ್ದಾರೆ.

ರಸ್ತೆಗೆ ಮನವಿ
ಕೆರೆ ಸಮೀಪ ಹಲವು ಮನೆಗಳಿದ್ದು, ಇಲ್ಲಿನ ನಿವಾಸಿಗಳು ಕೆರೆ ದಂಡೆಯ ಕಾಲು ಹಾದಿಯನ್ನೇ ಆಶ್ರಯಿಸಿದ್ದಾರೆ. ಸಂಚಾರಕ್ಕೆ ಅನುಕೂಲವಾಗಿ ಕೆರೆ ಬದಿ  ರಸ್ತೆ ನಿರ್ಮಿಸುವಂತೆ ಮನವಿ ಮಾಡಿದ್ದಾರೆ.

ಪ್ರವಾಸಿ ತಾಣ
ಕೋಟೆ ಕೆರೆ ಅಭಿವೃದ್ದಿ ಪಡಿಸಿ ಪ್ರೇಕ್ಷಣೀಯ ಸ್ಥಳವಾಗಿಸಲು ವಿಫುಲ ಅವಕಾಶವಿದೆ. ಕೆರೆ ಸ್ವತ್ಛಗೊಳಿಸುವ ಜತೆಗೆ ಸುತ್ತಲೂ ನಡೆದಾಡಲು ದಾರಿ ಹಾಗೂ ಪಾರ್ಕ್‌ ನಿರ್ಮಿಸಿದರೆ ಉತ್ತಮ ಪ್ರವಾಸೀ ತಾಣವಾಗಲಿದೆ.
– ಬಿ. ಮಂಜುನಾಥ ರಾವ್‌, ಆಡಳಿತ ಮೊಕ್ತೇಸರರು, 
ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಬಾರಕೂರು

– ಪ್ರವೀಣ್‌ ಮುದ್ದೂರು

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.