ಕ್ರಿಯಾಶೀಲ ಶಿಕ್ಷಕರಿಂದ ಗುಣಮಟ್ಟದ ಶಿಕ್ಷಣ: ನಿರಂಜನ
Team Udayavani, Feb 22, 2019, 12:30 AM IST
ಕಾರ್ಕಳ: ನಗರದಲ್ಲಿರುವ ಬೋರ್ಡ್ ಹೈಸ್ಕೂಲ್ಗೆ ತನ್ನದೇ ಆದ ಇತಿಹಾಸವಿದ್ದು, ಇಲ್ಲಿ ಕಲಿತ ಹಲವಾರು ವಿದ್ಯಾರ್ಥಿಗಳು ನಾನಾ ಕ್ಷೇತ್ರಗಳಲ್ಲಿ ಅತ್ಯುತ್ತುಮ ಸ್ಥಾನಮಾನ ಅಲಂಕರಿಸಿದ್ದಾರೆ. ಇದು ಶಾಲೆಯ ಹೆಗ್ಗಳಿಕೆ ಎಂದು ನಿಟ್ಟೆ ಎನ್ಎಂಎಎಂಐಟಿ ಕಾಲೇಜಿನ ಪ್ರಾಂಶುಪಾಲ ನಿರಂಜನ ಚಿಪೂಣಕರ್ ಅವರು ಹೇಳಿದರು.
ಫೆ. 21ರಂದು ಬೋರ್ಡ್ ಹೈಸ್ಕೂಲ್ನ ನವೀಕರಣಗೊಂಡ ಕಂಪ್ಯೂಟರ್ ಕೊಠಡಿ ಉದ್ಘಾಟಿಸಿ ಅವರು ಮಾತನಾಡಿದರು.
ಹಿರಿಯ ವಿದ್ಯಾರ್ಥಿಗಳ ಪ್ರೋತ್ಸಾಹ, ಕ್ರಿಯಾಶೀಲ ಶಿಕ್ಷಕರಿದ್ದಲ್ಲಿ ಸರಕಾರಿ ಶಾಲೆಯ ಮಕ್ಕಳಿಗೂ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯಲು ಸಾಧ್ಯ. ಬೋರ್ಡ್ ಹೈಸ್ಕೂಲ್ನಲ್ಲಿ ಇಂತಹ ವಾತಾವರಣವಿದ್ದು, ಮುಂದಿನ ದಿನಗಳಲ್ಲಿ ಇಲ್ಲಿನ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಏರಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅಶೋಕ್ ಅಡ್ಯಂತಾಯ ಮಾತನಾಡಿ, ಬೋರ್ಡ್ ಹೈಸ್ಕೂಲ್ನಲ್ಲಿ ಕಳೆದ ಬಾರಿ ಶೇ.100 ಫಲಿತಾಂಶ ದಾಖಲಾಗಿದೆ. ಇಲ್ಲಿನ ವಿದ್ಯಾರ್ಥಿಗಳು ಪ್ರತಿಭಾವಂತರಿದ್ದಾರೆ. ಈಗಾಗಲೇ ಶಾಲಾ ಅಭಿವೃದ್ಧಿ ನಿಟ್ಟಿನಲ್ಲಿ ಹಳೆ ವಿದ್ಯಾರ್ಥಿ ಸಂಘದಿಂದ ವಿವಿಧ ಯೋಜನೆಗಳನ್ನು ರೂಪಿಸಲಾಗಿದೆ ಎಂದರು.
ಪುರಸಭಾ ಸದಸ್ಯೆ, ಎಸ್ಡಿಎಂಸಿ ಸದಸ್ಯೆ ಸುಮಾ ಕೇಶವ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮಾಧವ ಭಟ್ ಮಾತನಾಡಿದರು. ಎಸ್ಡಿಎಂಸಿ ಅಧ್ಯಕ್ಷ ಸುರೇಂದ್ರ ನಾಯಕ್ ಅಧ್ಯಕ್ಷತೆ ವಹಿಸಿದ್ದರು.
ಕೆ. ದಿನೇಶ್ ಪುರಾಣಿಕ್ ಅವರ ಸ್ಮರಣಾರ್ಥ ಅವರ ಮಕ್ಕಳು ಆಧುನಿಕ ಶೈಲಿಯ ರೀತಿಯಲ್ಲಿ ಕಂಪ್ಯೂಟರ್ ಕೊಠಡಿ ನವೀಕರಣ ಮಾಡಿಸಿದ್ದು, ನಿಟ್ಟೆ ವಿ.ವಿ. ರಿಜಿಸ್ಟ್ರಾರ್ ಯೋಗೀಶ್ ಹೆಗ್ಡೆ 4 ಕಂಪ್ಯೂಟರ್, ಇಡ್ಯ ಜನಾರ್ದನ ಅವರು ಕಂಪ್ಯೂಟರ್ ಮತ್ತು ಸಿಪಿಯುಗಳನ್ನು ಕೊಡುಗೆ ನೀಡಿದರು.ವಿದ್ಯಾರ್ಥಿನಿಯರಾದ ಗಗನ, ರೂಪಾಲಿ, ಖುಷಿ, ವೈಶಾಲಿ, ತಾಜಿನ್ ಪ್ರಾರ್ಥಿಸಿದರು. ಮುಖ್ಯಶಿಕ್ಷಕ ಮುರಳೀಧರ್ ಪ್ರಭು ಸ್ವಾಗತಿಸಿ, ವಿದ್ಯಾರ್ಥಿನಿ ನಿರೀಕ್ಷಾ ಕಾರ್ಯಕ್ರಮ ನಿರೂಪಿಸಿದರು. ರಾಜೀವ ಶೇಡಿಮನೆ ವಂದಿಸಿದರು.
ಗತವೈಭವ ಕಾಣಲಿ
ವಿಜ್ಞಾನ ಪ್ರಯೋಗಾಲಯ ಉದ್ಘಾಟಿಸಿದ ಇಸ್ರೋದ ನಿವೃತ್ತ ವಿಜ್ಞಾನಿ, ಹಿರಿಯ ವಿದ್ಯಾರ್ಥಿ ಸಂಘದ ಸದಸ್ಯರೂ ಆಗಿರುವ ಇಡ್ಯ ಜನಾರ್ದನ ಅವರು ಮಾತನಾಡಿ, ಅಂದಿನ ಕಾಲದಲ್ಲಿ ಬೋರ್ಡ್ ಹೈಸ್ಕೂಲ್ನಲ್ಲಿ ಒಂದೊಂದು ತರಗತಿಯಲ್ಲಿ ನಾಲ್ಕೈದು ವಿಭಾಗಗಳಿದ್ದು, ಸಾವಿರಕ್ಕಿಂತಲೂ ಹೆಚ್ಚಿನ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದರು. ನಾನಾ ಸೌಲಭ್ಯಗಳೊಂದಿಗೆ ಇಲ್ಲಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವತ್ತ ಹಿರಿಯ ವಿದ್ಯಾರ್ಥಿ ಸಂಘ ಮುಂದಾಗಿದೆ. ಖಾಸಗಿ ಶಾಲೆಗಳಲ್ಲಿರುವ ಸೌಲಭ್ಯ ನೀಡಿ, ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸುವಲ್ಲಿ ನಾವೆಲ್ಲರೂ ಪ್ರಯತ್ನಿಸುತ್ತಿದ್ದೇವೆ. ಈ ಮೂಲಕ ಶಾಲೆ ಮತ್ತೆ ಗತವೈಭವವನ್ನು ಕಾಣು ವಂತಾಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ
Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ
Veerappa Moily; ದೇಶಕ್ಕೆ ಕ್ರಿಕೆಟ್ ಕಾಮೆಂಟ್ರಿಯನ್ ಬೇಕಿಲ್ಲ
MUST WATCH
ಹೊಸ ಸೇರ್ಪಡೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್