ಕಾಳ್ಗಿಚ್ಚು: ತಡೆಗಟ್ಟಲು ಅರಣ್ಯ ಇಲಾಖೆ ಸಜ್ಜು
Team Udayavani, Feb 26, 2019, 1:00 AM IST
ಉಡುಪಿ: ರಾಜ್ಯದ ವಿವಿಧೆಡೆ ಅರಣ್ಯ ಪ್ರದೇಶಗಳಿಗೆ ಬೆಂಕಿ ತಗುಲಿ ಅಪಾರ ಹಾನಿಯುಂಟಾಗುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಕುಂದಾಪುರ ಮತ್ತು ಕಾರ್ಕಳ ತಾಲೂಕಿನಲ್ಲಿ ದಟ್ಟ ಅರಣ್ಯ ಪ್ರದೇಶಗಳಿದ್ದು, ಇಲ್ಲಿ ಬೆಂಕಿ ಅನಾಹುತಗಳಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕುಂದಾಪುರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್ ಮತ್ತು ಕುದ್ರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ರುದ್ರನ್ ಹೇಳಿದ್ದಾರೆ.
– ರಸ್ತೆ ಬದಿ ಬೆಳೆದ ಗಿಡ, ಹುಲ್ಲುಗಳಿಂದ ಸಾಮಾನ್ಯವಾಗಿ ಬೆಂಕಿ ಹರಡುತ್ತದೆ. ಇದಕ್ಕಾಗಿ ವಿವಿಧ ಕಡೆಗಳಲ್ಲಿ ಸುಮಾರು ಒಂದೂವರೆ ಮೀ. ಅಗಲದಲ್ಲಿ ಹುಲ್ಲುಗಳನ್ನು ಕಟಾವು ಮಾಡಿ ಸುಡಲಾಗಿದೆ. ಒಂದು ವೇಳೆ ಬೆಂಕಿ ತಗಲಿದರೂ ವಿಸ್ತರಿಸದಂತೆ ಇದು ತಡೆಯುತ್ತದೆ.
– ಅಗ್ನಿ ದುರಂತ ನಡೆದರೆ ಅದನ್ನು ತಡೆಗಟ್ಟುವ ಉಪಕರಣಗಳನ್ನೂ ಸಜ್ಜುಗೊಳಿಸಲಾಗಿದೆ. ಇವುಗಳನ್ನು ಪ್ರತಿ ವಲಯದಲ್ಲಿ ಸುಸ್ಥಿತಿಯಲ್ಲಿಡಲಾಗಿದೆ. ಇದರ ಜತೆ ರಬ್ಬರ್ನಿಂದ ತಯಾರಿಸಲಾದ ಫಯರ್ ಬೀಟರ್ಗಳನ್ನು ಬಳಸಲಾಗುತ್ತದೆ. ಇದು ಹಳೆಯ ಕ್ರಮ.
– ಅಗ್ನಿಶಾಮಕ ಇಲಾಖೆಯೊಂದಿಗೆ ಅರಣ್ಯ ಇಲಾಖೆ ನಿರಂತರ ಸಂಪರ್ಕದಲ್ಲಿದ್ದು, ಅಗತ್ಯವಿದ್ದಾಗ ಬಳಸಿಕೊಳ್ಳಲಾಗುತ್ತದೆ.
– ಕುದುರೆಮುಖ ವನ್ಯಜೀವಿ ವಿಭಾಗದಿಂದ ಅಗ್ನಿ ದುರಂತದ ಬಗ್ಗೆ ಜನಜಾಗೃತಿಗೊಳಿಸುವ ಕ್ರಮ ನಡೆಯುತ್ತಿದೆ. ಶಾಲಾ ಕಾಲೇಜುಗಳಲ್ಲಿ, ಸಾರ್ವಜನಿಕರು ಸೇರುವ ಸ್ಥಳದಲ್ಲಿ ಹುಲ್ಲುಗಾವಲಿಗೆ ಬೆಂಕಿ ಕೊಟ್ಟರೆ ಆಗುವ ತೊಂದರೆಗಳ ಬಗೆಗೆ ತಿಳಿ ಹೇಳಲಾಗುತ್ತಿದೆ. ಹುಲ್ಲುಗಾವಲಿಗೆ ಬೆಂಕಿ ಹಾಕಿದರೆ ಮುಂದಿನ ವರ್ಷ ಹೊಸ ಹುಲ್ಲು ಸಿಗುತ್ತದೆ ಎಂಬ ಕಲ್ಪನೆ ಇದೆ. ಆದರೆ ಈಗಿನ ಹುಲ್ಲುಗಾವಲನ್ನು ಹಾಗೆಯೇ ಬಿಟ್ಟರೆ ಸುಮಾರು 250 ವರ್ಷಗಳ ಬಳಿಕ ಇದು ಕಾಡಾಗಿ ಪರಿವರ್ತನೆಯಾಗುತ್ತದೆ. ಆದ್ದರಿಂದ ಮುಂದಿನ ಕಾಡನ್ನು ಈಗಲೇ ಬೆಂಕಿ ಹಾಕಿ ನಾಶ ಮಾಡಬೇಡಿ ಎಂದು ಜನರಿಗೆ ತಿಳಿವಳಿಕೆ ನೀಡಲಾಗುತ್ತಿದೆ.
– ಎಲ್ಲಿಯೇ ಕಾಡಿನಲ್ಲಿ ಹೊಗೆ ಕಾಣಿಸಿದರೂ ಅದನ್ನು ಗುರುತಿಸಿ ಅದನ್ನು ನಿಯಂತ್ರಿಸಲು ಸಿಬಂದಿ ಸಜ್ಜಾಗಿದ್ದಾರೆ. ಅಗ್ನಿಶಾಮಕ ಇಲಾಖೆಯಲ್ಲಿರುವಂತೆ ವಾಟರ್ ಸ್ಪ್ರೆàಯರ್ ಯಂತ್ರವನ್ನು ಸಜ್ಜುಗೊಳಿಸಿಕೊಂಡಿದ್ದಾರೆ.
– ಈಗ ಮಂಗನ ಕಾಯಿಲೆ ಎಚ್ಚರಿಕೆಯಿಂದ ಪ್ರವಾಸೀ ತಾಣಗಳಿಗೆ ನಿರ್ಬಂಧ ಹೇರಲಾಗಿದೆ. ಬೀಡಿ ಸಿಗರೇಟು ಸೇದಿ ಬೆಂಕಿ ನಂದಿಸದೆ ಹಾಗೆಯೇ ಹುಲ್ಲುಗಾವಲಿನ ಮೇಲೆ ಹಾಕಿ ಅದು ಅಗ್ನಿ ಅನಾಹುತಕ್ಕೆ ಕಾರಣವಾಗುವುದನ್ನು ತಡೆಗಟ್ಟುವುದೂ ಪ್ರವಾಸಿ ತಾಣಗಳ ಭೇಟಿ ನಿಷೇಧಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್