ಶಿರ್ಲಾಲು ಗ್ರಾ.ಪಂ: ಅಭಿವೃದ್ಧಿಗೊಳ್ಳದ ಮುಂಡ್ಲಿ ಸಂಪರ್ಕ ರಸ್ತೆ
Team Udayavani, Mar 16, 2019, 12:30 AM IST
ಅಜೆಕಾರು: ಶಿರ್ಲಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಂಡ್ಲಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಜಿಲ್ಲಾ ಪಂಚಾಯತ್ ರಸ್ತೆಯ ಡಾಮರು ಕಿತ್ತು ಹೋಗಿ ರಸ್ತೆ ಸಂಪೂರ್ಣ ಗುಂಡಿಗಳಿಂದ ಆವೃತಗೊಂಡಿದೆ.
ಸುಮಾರು 25 ವರ್ಷಗಳದೆ ಈ ರಸ್ತೆಯು ಡಾಮರೀಕರಣಗೊಂಡಿದ್ದು ಅನಂತರ ಡಾಮರು ಹಾಕಿಲ್ಲ. 4 ವರ್ಷಗಳ ಹಿಂದೆ ತೇಪೆ ಕಾರ್ಯ ನಡೆಸಲಾಗಿತ್ತು.
ಕಾರ್ಕಳದಿಂದ ಮುಂಡ್ಲಿಯ ಗ್ರಾಮೀಣ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದ್ದು ರಸ್ತೆಯುದ್ದಕ್ಕೂ ಹೊಂಡಗುಂಡಿ ಗಳು ನಿರ್ಮಾಣವಾಗಿರುವುದರಿಂದ ಸಂಚಾರ ನಡೆಸುವುದು ದುಸ್ತರವಾಗಿದೆ.
4 ಕಿ.ಮೀ. ಉದ್ದದ ರಸ್ತೆ
ಕಾರ್ಕಳದಿಂದ ದುರ್ಗಾ ಪಂಚಾಯತ್ ವ್ಯಾಪ್ತಿಯ ತೆಳ್ಳಾರು ವರೆಗೆ ರಸ್ತೆ ಅಭಿವೃದ್ಧಿಗೊಂಡಿದೆ ಆದರೆ ಸುಮಾರು 4 ಕಿ.ಮೀ. ಉದ್ದದ ಮುಂಡ್ಲಿವರೆಗಿನ ಈ ರಸ್ತೆ ಅಭಿವೃದ್ಧಿಯಾಗದೇ ಇರುವುದರಿಂದ ಸಂಚಾರಕ್ಕೆ ಸಂಕಷ್ಟ ಪಡಬೇಕಾಗಿದೆ.
ಶಿರ್ಲಾಲು ಪಂಚಾಯತ್ ವ್ಯಾಪ್ತಿಯ ಮುಡಾಗುಡ್ಡೆ, ಮುಂಡ್ಲಿ ಭಾಗದ ಜನತೆ ತಮ್ಮ ನಿತ್ಯ ವ್ಯವಹಾರಕ್ಕಾಗಿ ಕಾರ್ಕಳ ಪೇಟೆಗೆ ತೆರಳಬೇಕಾಗಿದ್ದು ಸಂಚಾರಕ್ಕೆ ಈ ರಸ್ತೆಯನ್ನೇ ಅವಲಂಬಿಸಿದ್ದಾರೆ. ನಿತ್ಯ ವಿದ್ಯಾರ್ಥಿಗಳು ಹಾಗೂ ನಿತ್ಯ ಕೆಲಸಕ್ಕೆ ತೆರಳುವವರಿಗೆ ಸಮಸ್ಯೆಯಾಗಿದೆ.
ಮನವಿ ನೀಡಿದರೂ ಪ್ರಯೋಜನವಿಲ್ಲ
ರಸ್ತೆ ಡಾಮರೀಕರಣಗೊಳಿಸಿ ಅಭಿವೃದ್ಧಿಪಡಿಸುವಂತೆ ನಿರಂತರ ಮನ ಮಾಡುತ್ತಾ ಬಂದಿದ್ದರೂ ಯಾವುದೇ ಪ್ರಯೋಜನವಿಲ್ಲದಂತಾಗಿದೆ ಎಂದು ಸ್ಥಳೀಯರು ದೂರಿದ್ದಾರೆ. ಪ್ರತಿ ಗ್ರಾಮಸಭೆಯಲ್ಲಿ ಈ ರಸ್ತೆ ಅಭಿವೃದ್ಧಿಯ ಬಗ್ಗೆ ನಿರ್ಣಯ ಕೈಗೊಂಡರೂ ಪಂಚಾಯತ್ ನಿರ್ಣಯಕ್ಕೆ ಯಾವುದೇ ಬೆಲೆ ಇಲ್ಲದಂತಾಗಿದೆ ಎಂಬುದು ಸ್ಥಳೀಯರ ಬೇಸರದ ನುಡಿ. ಸ್ಥಳೀಯ ಕೆಲ ಸಂಘ ಸಂಸ್ಥೆಗಳು ಪ್ರತಿ ವರ್ಷ ಹೊಂಡಗಳಿಗೆ ಮಣ್ಣು ತುಂಬಿಸುವ ಕೆಲಸವನ್ನು ಮಾಡುತ್ತದೆಯಾದರೂ ಕೆಲವೇ ದಿನಗಳಲ್ಲಿ ಈ ಮಣ್ಣು ಹೋಗಿ ಮತ್ತೆ ಹೊಂಡ ನಿರ್ಮಾಣವಾಗುತ್ತಿದೆ.
ಸೇತುವೆ ಬಳಿ ಕುಸಿಯುತ್ತಿರುವ ರಸ್ತೆ
ಮುಂಡ್ಲಿ ಸೇತುವೆ ಹಾಗೂ ಪವರ್ ಪ್ರಾಜೆಕ್ಟ್ ಬಳಿಯಲ್ಲಿ ಪ್ರತೀ ವರ್ಷ ಮಳೆಗಾಲದಲ್ಲಿ ರಸ್ತೆ ಕುಸಿಯುತ್ತಿದೆ. ಈ ಕುಸಿತವನ್ನು ತಾತ್ಕಾಲಿಕವಾಗಿ ತಡೆಯಲಾಗುತ್ತದೆಯೇ ಶಾಶ್ವತ ಕಾಮಗಾರಿ ನಡೆಸಿ ರಸ್ತೆ ಕುಸಿತ ತಡೆಯುವ ಯಾವುದೇ ಪ್ರಯತ್ನ ನಡೆಯುತ್ತಿಲ್ಲ.
ಬಸ್ ಸಂಚಾರದಲ್ಲಿ ವ್ಯತ್ಯಯ
ಮುಂಡ್ಲಿಗೆ ನಿತ್ಯ ಸುಮಾರು 10 ಬಸ್ಗಳು 20 ಬಾರಿ ಸಂಚಾರ ನಡೆಸುತ್ತಿದ್ದರೆ ಇತ್ತೀಚಿನ ದಿನಗಳಲ್ಲಿ 3ರಿಂದ4 ಬಸ್ಗಳು ಸಂಚಾರ ಸ್ಥಗಿತಗೊಳಿಸಿವೆ. ಮಾರ್ಗ ಹದಗೆಟ್ಟಿರುವುದರಿಂದ ಇನ್ನಷ್ಟು ಬಸ್ಗಳು ಸಂಚಾರ ಸ್ಥಗಿತಗೊಳಿಸುವ ಇರಾದೆಯಲ್ಲಿವೆ.
ಚುನಾವಣೆ ಬಹಿಷ್ಕಾರದ ಚಿಂತನೆ
ದಶಕಗಳಿಂದ ರಸ್ತೆ ಅಭಿವೃದ್ಧಿ ಪಡಿಸುವಂತೆ ಮನವಿ ಮಾಡಿದರೂ ರಸ್ತೆ ಅಭಿವೃದ್ಧಿ ಕಾಣದೆ ಮನನೊಂದ ಸ್ಥಳೀಯರು ಮುಂಬರುವ ಲೋಕಸಭಾ ಚುನಾವಣೆ ಬಹಿಷ್ಕಾರದ ಚಿಂತನೆಯಲ್ಲಿದ್ದಾರೆ.
ದಶಕ ಕಳೆದರೂ ಅಭಿವೃದ್ಧಿಗೊಂಡಿಲ್ಲ
ಅತಿ ಅಗತ್ಯವಾಗಿರುವ ಮುಂಡ್ಲಿ ಸಂಪರ್ಕ ರಸ್ತೆ ಸಂಪೂರ್ಣ ಹದೆಗೆಟ್ಟು ದಶಕಗಳೇ ಕಳೆದಿದ್ದರೂ ಅಭಿವೃದ್ಧಿಗೊಂಡಿಲ್ಲ. ಈ ಬಗ್ಗೆ ಗ್ರಾಮಸ್ಥರು ಹಲವು ಬಾರಿ ಮನವಿ ಮಾಡಿದರೂ ನಿಷ್ಪ್ರಯೋಜಕವಾಗಿದೆ.
–ಪ್ರಜ್ವಲ್ ಜೈನ್ ಮುಂಡ್ಲಿ, ಸ್ಥಳೀಯರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?