ಕಾರ್ಕಳ ತಾಲೂಕಿನಲ್ಲಿ  ಆಗಿಂದಾಗ್ಗೆ ಬೆಂಕಿ ಅವಘಡ​​​​​​​


Team Udayavani, Mar 16, 2019, 12:30 AM IST

150319kkram12.jpg

ವಿಶೇಷ ವರದಿ- ಕಾರ್ಕಳ: ಬಿರು ಬೇಸಗೆಯಲ್ಲಿ ಅಗ್ನಿಶಾಮಕ ಠಾಣೆಗೆ ಅವಘಡದ್ದೆ ಆತಂಕ. ಕಾರ್ಕಳ ತಾಲೂಕಿನಲ್ಲಂತೂ ವರ್ಷದಿಂದ ವರ್ಷಕ್ಕೆ ಬೆಂಕಿ ಅವಘಡ ಸಂಖ್ಯೆ ಹೆಚ್ಚಾಗಿ ಕಂಡು ಬರುತ್ತಿರುವುದರಿಂದ ಸಾರ್ವಜನಿಕರ ಕರೆಗಳು ಜಾಸ್ತಿಯಾಗಿದೆ. ಅಗ್ನಿಶಾಮಕ ದಳಕ್ಕೆ ನಿರಂತರವಾಗಿ ಅವಘಡ ಕುರಿತಾಗಿ ಕರೆಗಳು ಬರುತ್ತಿದ್ದು, ಜನವರಿಯಿಂದ 94 ಕರೆಗಳು ಬಂದಿವೆ. ಕಳೆದ ಬಾರಿ ಇದರ ಸಂಖ್ಯೆ ಕೇವಲ 50. ಬೆಳ್ಮಣ್‌ ಭಾಗದಿಂದ ಹೆಚ್ಚಿನ ಕರೆಗಳು ಬರುತ್ತಿರುವುದು ಗಮನಾರ್ಹ.

ಓಬಿರಾಯನ ಕಾಲದ ಉಪಕರಣ
ಪ್ರತಿಯೊಂದು ಕ್ಷೇತ್ರವೂ ಇಂದು ಆಧುನಿಕ ತಂತ್ರಜ್ಞಾನಕ್ಕೆ ಮೊರೆ ಹೋಗುತ್ತಿದ್ದಲ್ಲಿ ಅಗ್ನಿಶಾಮಕ ದಳ ಮಾತ್ರ ಓಬಿರಾಯನ ಕಾಲದ ಬಸ್‌ ಅನ್ನು ಹಿಡಿದುಕೊಂಡೇ ಮುಂದುವರಿಯತ್ತಿದೆ. ತಂತ್ರಜ್ಞಾನ ಕೂಡ ಹಳೆಯದ್ದೇ. ಕಿರಿದಾದ ರಸ್ತೆಗಳಲ್ಲಿ ಬಸ್‌ ಓಡಾಟ ಸಾಧ್ಯವಿಲ್ಲದಾದರೆ ಪರ್ಯಾಯ ವ್ಯವಸ್ಥೆ ಅಗ್ನಿಶಾಮಕ ಇಲಾಖೆಯಲ್ಲಿಲ್ಲ. ನೆರೆ ಸಂದರ್ಭ ನುರಿತ ಈಜು ಪಟುಗಳು ಇಲಾಖೆಯಲ್ಲಿಲ್ಲದ ಕಾರಣ ಇತರರನ್ನೇ ಅವಲಂಬಿಸುವುದು ಅನಿವಾರ್ಯವಾಗಿದೆ.

ಬುಲೆಟ್‌ ಬೈಕ್‌
ಅಗ್ನಿಶಾಮಕ ದಳವು ಇದೀಗ 10 ಲೀಟರ್‌ ನೀರು ಸಾಮರ್ಥ್ಯ ಹೊಂದಿರುವ ಟ್ಯಾಂಕ್‌ನ ಬುಲೆಟ್‌ ಬೈಕ್‌ ಒಂದನ್ನು ಹೊಂದಿರುವುದು ಇಲಾಖೆಯ ಅಪ್‌ಡೇಟ್‌ಗಳಲ್ಲಿ ಒಂದು ಎಂದು ಹೇಳಬಹುದು.

ಸಿಬಂದಿ ಕೊರತೆ
ಕಾರ್ಕಳ ಅಗ್ನಿಶಾಮಕ ಇಲಾಖೆಯಲ್ಲಿ ಒಟ್ಟು 27 ಮಂದಿ ಸಿಬಂದಿ ಇರಬೇಕಿತ್ತು. ಆದರೆ, ಪ್ರಸ್ತುತ 
ಕೇವಲ 17 ಮಂದಿ ಸಿಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹೀಗಾಗಿ ಗೃಹರಕ್ಷಕ ದಳದ ಸಿಬಂದಿ ಸಹಕಾರ ಪಡೆದು ಕಾರ್ಯ ನಿರ್ವಹಿಸಲಾಗುತ್ತಿದೆ. ಎಫ್ಎಸ್‌ಒ (ಫೈರ್‌ ಸ್ಟೇಷನ್‌ ಆಫೀಸರ್‌‌) ಮತ್ತು ಎಎಫ್ಎಸ್‌ಓ (ಅಸಿಸ್ಟೆಂಟ್‌ ಫೈರ್‌ ಸ್ಟೇಷನ್‌ ಆಫೀಸರ್‌) ಹುದ್ದೆಯೂ ಖಾಲಿಯಿದೆ.

ಹೆಬ್ರಿಯಲ್ಲಿ ಕೇಂದ್ರವಿರಲಿ
ಹೆಬ್ರಿ ಪ್ರದೇಶ ಕಾರ್ಕಳದಿಂದ 35 ಕಿ.ಮೀ. ದೂರದಲ್ಲಿರುವ ಕಾರಣ ಅಲ್ಲೊಂದು ಅಗ್ನಿಶಾಮಕ ಘಟಕ ತೆರೆಯುವುದು ಅತಿ ಅಗತ್ಯ. ತುರ್ತು ಸಂದರ್ಭಗಳಲ್ಲಿ ಕಾರ್ಕಳದಿಂದ ಅಲ್ಲಿಗೆ ತಲುಪುವಾಗ ಅನಾಹುತ ಸಂಭವಿಸುವುದಂತೂ ಖಚಿತ. ಹಾಗಾಗಿ ಅದೇ ಪರಿಸರದಲ್ಲೊಂದು ಘಟಕ ತೆರೆಯುವಂತೆ ಬೇಡಿಕೆ ಹೆಚ್ಚಿದ್ದು, ಇದರಿಂದ ಕಾರ್ಕಳ ಅಗ್ನಿಶಾಮಕ ದಳದ ಒತ್ತಡವೂ ಕಡಿಮೆಯಾಗಲಿದೆ.

ಇತ್ತೀಚೆಗೆ ಹೆಬ್ರಿ ಪರಿಸರದ ಸಿಂಡಿಕೇಟ್‌ ಮತ್ತು ಕಾರ್ಪೊರೇಷನ್‌ ಬ್ಯಾಂಕ್‌ನಲ್ಲಿ ಅಗ್ನಿ ದುರಂತ ಸಂಭವಿಸಿದ್ದು ಈ ವೇಳೆ ಕಾರ್ಕಳದಿಂದಲೇ ಅಗ್ನಿಶಾಮಕ ದಳದ ಸಿಬಂದಿ ತೆರಳಿ ಬೆಂಕಿ ನಂದಿಸಿದ್ದರು.

ಮುಂಜಾಗ್ರತಾ ಕ್ರಮ
ವಿದ್ಯುತ್‌ ಪರಿವರ್ತಕ (ಟಿಸಿ) ಸುತ್ತುಮುತ್ತಲು ಮುಳಿಹುಲ್ಲು ಇದ್ದಲ್ಲಿ  ಮೆಸ್ಕಾಂ ಸಿಬಂದಿಗೆ ತಿಳಿಸಿ, ಸ್ವತ್ಛಗೊಳಿಸುವುದು. ಗುಡ್ಡಕಾಡು ಪ್ರದೇಶಕ್ಕೆ ಪಾರ್ಟಿ ಮಾಡಲು ತೆರಳುವವರ ಬಗ್ಗೆ ನಿಗಾ ವಹಿಸುವುದು, ಅವಘಡ ಸಂಭವಿಸಿದಲ್ಲಿ ತತ್‌ಕ್ಷಣವೇ 101 ಅಥವಾ 08258 232223 ನಂಬರ್‌ಗೆ ಮಾಹಿತಿ ಒದಗಿಸುವುದು. ಸಣ್ಣಪುಟ್ಟ ಅವಘಡ ತಪ್ಪಿಸುವ ನಿಟ್ಟಿನಲ್ಲಿ ಸ್ಥಳೀಯರೇ ಸೂಕ್ತ ರೀತಿಯಲ್ಲಿ ಸ್ಪಂದಿಸಿವುದು ಅಗತ್ಯವಾಗಿದೆ.

ಸಾರ್ವಜನಿಕರ ಸಹಕಾರ ಅಗತ್ಯ
ಬೆಂಕಿ ಅವಘಡ ಸಂಭವಿಸಿದ ತತ್‌ಕ್ಷಣ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದಲ್ಲಿ ಕೂಡಲೇ ಸ್ಪಂದಿಸಲು ಅನುಕೂಲವಾಗುವುದು. ಸಿಬಂದಿ ಕೊರತೆ ಸರಿದೂಗಿಸುವ ನಿಟ್ಟಿನಲ್ಲಿ ಗೃಹ ರಕ್ಷಕ ದಳದವರನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಕೆಲವು ಸಂದರ್ಭಗಳಲ್ಲಿ ಸಾರ್ವಜನಿಕರೂ ಸಹಕರಿಸಬೇಕಾಗಿದೆ.
-ವಸಂತ ಕುಮಾರ್‌ ಎಚ್‌.ಎಂ.,
ಜಿಲ್ಲಾ ಅಗ್ನಿಶಾಮಕ ಅಧಿಕಾರಿ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.