ದೇವಸ್ಥಾನದ ಬಳಿ ದುರ್ವಾಸನೆ ಬೀರಿದ ಕೊಳಚೆ ನೀರು
Team Udayavani, Mar 16, 2019, 12:30 AM IST
ಕಾಪು: ಕಾಪು ಪುರಸಭೆಯ ತೆಂಕಪೇಟೆ ಮತ್ತು ಜನಾರ್ದನ ದೇವಸ್ಥಾನದ ಮುಂಭಾಗದಲ್ಲಿ ಒಳಚರಂಡಿ ಯೋಜನೆಗೆಂದು ಹಾಕಲಾಗಿದ್ದ ಪೈಪ್ಲೈನ್ಗೆ ಪುರಸಭೆಯ ಅನುಮತಿಯಿಲ್ಲದೇ ಮನೆ ಮತ್ತು ವಾಣಿಜ್ಯ ಕಟ್ಟಡಗಳ ಮಲಿನ ನೀರನ್ನು ಏಕಾಏಕಿಯಾಗಿ ಬಿಟ್ಟ ಪರಿಣಾಮ ಗುರುವಾರ ರಾತ್ರಿ ಕಾಪು ಪೇಟೆಯ ಜನರು ದುರ್ನಾತದ ಪರಿಸ್ಥಿತಿಯನ್ನು ಎದುರಿಸುವಂತಾಯಿತು.
ಚಿಮ್ಮಿದ ಕೊಳಚೆ ನೀರು
ಹಳೇ ಮಾರಿಯಮ್ಮ ದೇವಸ್ಥಾನದ ಮುಂಭಾಗದಲ್ಲಿ ಕಾಪು ಪೇಟೆಯನ್ನು ಪ್ರವೇಶಿಸುವ ದ್ವಾರದಿಂದ ಹಿಡಿದು ಮಲ್ಲಾರು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದವರೆಗಿನ ಜನರು ಇದರಿಂದಾಗಿ ಅಸಹನೀಯ ಪರಿಸ್ಥಿತಿಯನ್ನು ಎದುರಿಸುವಂತಾಯಿತು. ಒಳಚರಂಡಿಯಲ್ಲಿ ಕೊಳಚೆ ನೀರು ಒಮ್ಮೆಲೆ ಹರಿದು ಬಂದ ಪರಿಣಾಮ ಅಲ್ಲಲ್ಲಿ ಅಳವಡಿಸಲಾಗಿದ್ದ ಮ್ಯಾನ್ಹೋಲ್ಗಳಲ್ಲಿ ಕೊಳಚೆ ನೀರು ಮೇಲೆದ್ದು ಬಂದು ಕೆಟ್ಟ ದುರ್ವಾಸನೆ ಬೀರಿದೆ.
ಪುರಸಭೆಗೆ ದೂರು
ಗುರುವಾರ ಸಂಜೆ ಕಂಡು ಬಂದ ಮಲಿನ ನೀರು ಮತ್ತು ದುರ್ವಾಸನೆಯ ಸ್ಥಿತಿಯನ್ನು ಗಮನಿಸಿದ ಪುರಸಭಾ ಸದಸ್ಯ ಅನಿಲ್ ಕುಮಾರ್ ಮತ್ತು ಸ್ಥಳೀಯ ನಿವಾಸಿಗಳು ಈ ಬಗ್ಗೆ ಪುರಸಭೆಗೆ ದೂರು ನೀಡಿದ್ದರು. ಶುಕ್ರವಾರ ಬೆಳಗ್ಗೆಯೇ ಈ ಬಗ್ಗೆ ಕಾರ್ಯೋನ್ಮುಖರಾದ ಮುಖ್ಯಾಧಿಕಾರಿ ಅವರು ಪುರಸಭೆಯ ಸಿಬಂದಿಗಳು, ಪೌರ ಕಾರ್ಮಿಕರು ಮತ್ತು ಒಳಚರಂಡಿ ಯೋಜನೆಯ ಗುತ್ತಿಗೆದಾರ ಸಿಬಂದಿಗಳನ್ನು ಬಳಸಿಕೊಂಡು ತುರ್ತು ಕಾರ್ಯಾಚರಣೆ ನಡೆಸಿದರು.
ಪೈಪ್ಲೈನ್ ಸಂಪರ್ಕ ಕಡಿತ
ಕಾರ್ಯಾಚರಣೆ ವೇಳೆ ಕೆಲವು ಕಡೆಗಳಲ್ಲಿ ಪುರಸಭೆಯ ಒಪ್ಪಿಗೆಯಿಲ್ಲದೇ ಪುರಸಭೆಯ ಒಳಚರಂಡಿ ಯೋಜನೆಯ ಮ್ಯಾನ್ಹೋಲ್ಗೆ ಕಲುಷಿತ ಮಲಿನ ನೀರನ್ನು ಬಿಡುತ್ತಿರುವುದನ್ನು ಪತ್ತೆ ಹಚ್ಚಿದ ಸ್ವತ್ಛ ಸರ್ವೇಕ್ಷಣಾ ತಂಡ ಸಂಬಂಧಪಟ್ಟವರಿಗೆ ಎಚ್ಚರಿಕೆ ನೀಡಿ, ಅನುಮತಿಯಿಲ್ಲದೇ ಮ್ಯಾನ್ಹೋಲ್ಗೆ ಜೋಡಿಸಿರುವ ಪೈಪ್ಲೈನ್ ಸಂಪರ್ಕವನ್ನು
ಕಡಿತಗೊಳಿಸಿದೆ.
ಪುರಸಭೆ ವ್ಯಾಪ್ತಿಯ ನಾಗರಿಕರ ಆರೋಗ್ಯದ ಹಿತದೃಷ್ಟಿ ಮತ್ತು ಪರಿಸರದ ಹಿತದೃಷ್ಟಿಯನ್ನು ಗಮನದಲ್ಲಿ ಇರಿಸಿಕೊಂಡು ಪ್ರತಿಯೊಂದು ವಾಣಿಜ್ಯ ಮಳಿಗೆ, ಹೊಟೇಲ್, ಮನೆ ಸಹಿತ ಎಲ್ಲಾ ಮಾದರಿಯ ಕಟ್ಟಡಗಳಲ್ಲೂ ಅಲ್ಲಿ ಉತ್ಪ³ತ್ತಿಯಾಗುವ ಮಲಿನ ಮತ್ತು ಕಲುಷಿತ ನೀರನ್ನು ಎಸ್ಟಿಪಿ ತಂತ್ರಜ್ಞಾನದ ಮೂಲಕ ಶುದ್ಧೀಕರಿಸಿ ತಾವೇ ಅದರ ವಿಲೇವಾರಿಗೆ ಕ್ರಮ ತೆಗೆದುಕೊಳ್ಳಬೇಕಿದೆ. ಒಂದು ವೇಳೆ ಇನ್ನು ಮುಂದೆಯೂ ಇದೇ ರೀತಿಯಲ್ಲಿ ಒಳಚರಂಡಿ ಯೋಜನೆಯ ಮ್ಯಾನ್ಹೋಲ್ಗೆ ಮಲಿನ ನೀರನ್ನು ಬಿಟ್ಟಲ್ಲಿ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಪುರಸಭಾ ಮುಖ್ಯಾಧಿಕಾರಿ ರಾಯಪ್ಪ ಎಚ್ಚರಿಕೆ ನೀಡಿದ್ದಾರೆ.
ಯೋಜನೆ ಅನುಷ್ಠಾನಕ್ಕೆ ಜಾಗದ ಕೊರತೆ
ಕಾಪು ಪುರಸಭೆ ವ್ಯಾಪ್ತಿಯಲ್ಲಿ ಒಳಚರಂಡಿ ಶುದ್ಧೀಕರಣ ಘಟಕ ಸ್ಥಾಪನೆಗೆ ಈಗಾಗಲೇ ಮೂರು ಕೋ. ರೂ. ಅನುದಾನ ಬಿಡುಗಡೆಯಾಗಿದ್ದು, ಅದನ್ನು ಬಳಸಿಕೊಂಡು ಯೋಜನೆಯನ್ನು ಅನುಷ್ಠಾನಗೊಳಿಸುವಲ್ಲಿ ಕೆಲವೊಂದು ಅಡಚಣೆಗಳು ಎದುರಾಗಿವೆ. ಒಳಚರಂಡಿ ಯೋಜನೆಗಾಗಿ ಪೈಪ್ಲೈನ್ ಅಳವಡಿಕೆಯಾಗಿದ್ದರೂ ಕೂಡಾ ಸಮರ್ಪಕ ಜಾಗದ ಕೊರತೆಯಿಂದಾಗಿ ಎಸ್ಟಿಪಿ ಘಟಕ ಸ್ಥಾಪಿಸಲು ವಿಳಂಬವಾಗುತ್ತಿದೆ. ಪುರಸಭೆ ವತಿಯಿಂದ ಒಂದು ಎಕರೆ ಖಾಸಗಿ ಜಾಗವನ್ನು ಖರೀದಿಸಿ, ಬೆಂಗಳೂರಿನ ದೇವನಹಳ್ಳಿ ಮಾದರಿಯಲ್ಲಿ ಎಸ್ಟಿಪಿ ಘಟಕವನ್ನು ಸ್ಥಾಪಿಸಿ, ಸಕ್ಕಿಂಗ್ ಯಂತ್ರಗಳ ಮೂಲಕ ಕೊಳಚೆ ನೀರನ್ನು ಶುದ್ಧೀಕರಿಸುವ ಯೋಜನೆಯನ್ನು ಅನುಷ್ಠಾನಕ್ಕೆ ತರಲು ಪ್ರಯತ್ನಿಸಲಾಗುತ್ತಿದೆ
– ರಾಯಪ್ಪ
ಮುಖ್ಯಾಧಿಕಾರಿ,ಕಾಪು ಪುರಸಭೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ
Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ
Veerappa Moily; ದೇಶಕ್ಕೆ ಕ್ರಿಕೆಟ್ ಕಾಮೆಂಟ್ರಿಯನ್ ಬೇಕಿಲ್ಲ
Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ