ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ಅಣಿಯಾದ ಸರಕಾರಿ ಶಾಲೆ​​​​​​​


Team Udayavani, Mar 16, 2019, 12:30 AM IST

1503ra1e-nandikoor-school.jpg

ಪಡುಬಿದ್ರಿ: ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸಿ ಸರಕಾರಿ ಶಾಲೆಗಳು ಮುಚ್ಚುತ್ತಿರುವ ಈ ದಿನಗಳಲ್ಲಿ ತಮ್ಮ ಶಾಲೆಯನ್ನು ಜೀವಂತ ಉಳಿಸಲು ನಂದಿಕೂರು ಹಿ.ಪ್ರಾ.ಶಾಲೆ ಹಳೆ ವಿದ್ಯಾರ್ಥಿಗಳು ಮುಂದಾಗಿದ್ದಾರೆ. ಅದರಂತೆ ನಂದಿಕೂರು ಎಜುಕೇಶನ್‌ ಟ್ರಸ್ಟ್‌ ಮಾ.18ರಂದು ನಂದಿಕೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಜಾತ್ರೆಯ ಸಂದರ್ಭ ಉದ್ಘಾಟನೆಗೊಳ್ಳಲಿದೆ. ಮುಂದಿನ ವರ್ಷದಿಂದ ಆಂಗ್ಲಮಾಧ್ಯಮ ಶಿಕ್ಷಣವನ್ನೂ ನೀಡಲಿದೆ. 
 
ಶತಮಾನದ ಶಾಲೆ
ದಾಖಲೆಗಳ ಪ್ರಕಾರ ನಂದಿಕೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ  ಗೋಪುರದಲ್ಲಿ ಬ್ರಿಟಿಷರ ಕಾಲದಿಂದಲೂ ಈ ಶಾಲೆ ನಡೆದುಕೊಂಡು ಬರುತ್ತಿತ್ತು. ರಾಮರಾವ್‌ ಪಡುಬಿದ್ರಿ ಎಂಬ ಶಿಕ್ಷಕರು ಮುಳಿಹುಲ್ಲಿನ ಛಾವಣಿಯಲ್ಲಿ ಮರಳಿನಲ್ಲಿಯೇ ಅಕ್ಷರಾಭ್ಯಾಸವನ್ನು ನಡೆಸಿದ ಶಾಲೆ “ಅರಮಂದ ಕಾಡು ಶಾಲೆ’ ಎಂದು ಪ್ರಚಲಿತಗೊಂಡಿತ್ತು. ಶಾಲೆಯ ಉಚ್ಛಾಯ ಸ್ಥಿತಿಯ ವೇಳೆ 600 ವಿದ್ಯಾರ್ಥಿಗಳು ಹಾಗೂ ಸುಮಾರು 20 ಶಿಕ್ಷಕರನ್ನು ಹೊಂದಿತ್ತು. 

ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳಕ್ಕೆ ಶ್ರಮ 
ಆಂಗ್ಲ ಮಾಧ್ಯಮ ಶಾಲೆಗಳ ಹಾವಳಿ, ವಿದ್ಯಾರ್ಥಿಗಳ ಸಂಖ್ಯೆ ಕೊರತೆಯಿಂದ ಈಗ ಮೂವತ್ತೇಳು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈಗಾಗಲೇ ನಾಲ್ಕು ತಂಡಗಳನ್ನು ರಚಿಸಿ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಲು ಶ್ರಮಿಸಲಾಗುತ್ತಿದೆ. 

ಜತೆಗೆ ಮುಂದಿನ ವರ್ಷದಿಂದ ಟ್ರಸ್ಟ್‌ ಮೂಲಕ ಎಲ್‌ಕೆಜಿ, ಯುಕೆಜಿ ಹಾಗೂ ಒಂದನೇ ತರಗತಿಯವರೆಗೆ ಉಚಿತ ಆಂಗ್ಲ  ಮಾಧ್ಯಮ ಶಿಕ್ಷಣವನ್ನೂ ನೀಡುವ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. 

ಶಾಲಾಭಿವೃದ್ಧಿ 
ಶಿಥಿಲಗೊಂಡಿರುವ ಶಾಲಾ ಕೊಠಡಿಗಳನ್ನು ದುರಸ್ತಿಗೊಳಿಸಿ ಅಗತ್ಯವಿರುವ ಮೂಲ ಸೌಕರ್ಯಗಳಾದ ಕಲಿಕಾ ಸಾಮಾಗ್ರಿಗಳು, ಪೀಠೊಪಕರಣ, ತರಗತಿ ಕೊಠಡಿಗಳಿಗೆ ವಿದ್ಯುತ್‌ ದೀಪಗಳ ಜೋಡಣೆ, ಕುಡಿಯುವ ನೀರು, ನಳ್ಳಿ ನೀರಿನ ವ್ಯವಸ್ಥೆ, ಅಕ್ಷರ ದಾಸೋಹ ಕೊಠಡಿಯ ನವೀಕರಣ, ಶಾಲಾ ಕಚೇರಿಗೆ ಆಧುನಿಕ ಸ್ಪರ್ಶ, ವಿದ್ಯಾರ್ಥಿಗಳಿಗೆ ಮತ್ತು ಕಚೇರಿ ಉಪಯೋಗಕ್ಕಾಗಿ ಕಂಪ್ಯೂಟರ್‌ ಹಾಗೂ ಪ್ರಿಂಟರ್‌ ವ್ಯವಸ್ಥೆ, ಶೌಚಾಲಯ ದುರಸ್ತಿ, ನಲಿ-ಕಲಿ ತರಗತಿಗೆ ಸಲಕರಣೆಗಳ ಜೋಡಣೆ ಸಹಿತ ವಿವಿಧ ಅಭಿವೃದ್ಧಿ ಕಾರ್ಯಗಳನ್ನು  ಮಾಡಲಾಗಿದೆ. 

ಅರ್ಜಿ ಸಲ್ಲಿಸಲಾಗುವುದು.
ಆಂಗ್ಲ ಮಾಧ್ಯಮವನ್ನು ಪ್ರಾರಂಭಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಮೌಖೀಕ ಆದೇಶ ನೀಡಿದ್ದಾರೆ. ಅಲ್ಲದೆ ಕನ್ನಡ ಮಾಧ್ಯಮದಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ ಆಂಗ್ಲ ಭಾಷಾ ಶಿಕ್ಷಕರೋರ್ವರನ್ನು ನಿಯೋಜಿಸಿ ಆಂಗ್ಲ ಭಾಷಾ ಸಂವಹನದ ಶಿಕ್ಷಣವನ್ನೂ ನೀಡಲಾಗುತ್ತದೆ. 2020-21 ನೇ ಶೈಕ್ಷಣಿಕ ವರ್ಷದಲ್ಲಿ 5 ಮತ್ತು 6 ನೇ ತರಗತಿಯಿಂದ ಆಂಗ್ಲ ಮಾಧ್ಯಮ ಆರಂಭಿಸಲು ಪರವಾನಿಗೆ ನೀಡುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಅದಕ್ಕಾಗಿ ಅರ್ಜಿ ಸಲ್ಲಿಸಲಾಗುವುದು.
– ಲಕ್ಷ್ಮಣ್‌ ಶೆಟ್ಟಿವಾಲ್‌, ಶಾಲಾ ಹಳೆ ವಿದ್ಯಾರ್ಥಿ.

ಟಾಪ್ ನ್ಯೂಸ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.