ಮೂರೂ ಪಕ್ಷಗಳಿಗೆ “ಇಲ್ಲ’ದ ಕಾಟ


Team Udayavani, Mar 16, 2019, 12:30 AM IST

z-27.jpg

ಕಾಂಗ್ರೆಸ್‌ಗೆ ಅವಕಾಶ, ಜೆಡಿಎಸ್‌ಗೆ ಅಭ್ಯರ್ಥಿ, ಬಿಜೆಪಿ ಸಂಸದೆಗೆ ಬೆಂಬಲ
1951ರಲ್ಲಿ 2.2 ಲಕ್ಷ, 2019ರಲ್ಲಿ 14.94 ಲಕ್ಷ ಮತದಾರರು

ಉಡುಪಿ: ಉಡುಪಿ ಲೋಕಸಭಾ ಕ್ಷೇತ್ರಕ್ಕೆ ಸ್ವಾತಂತ್ರ್ಯಾ ನಂತರದಿಂದಲೂ ಸ್ವತಂತ್ರ ಅಸ್ತಿತ್ವವಿದ್ದರೆ ಚಿಕ್ಕ ಮಗಳೂರು ಆಗ ಹಾಸನ ಕ್ಷೇತ್ರದೊಂದಿಗಿತ್ತು. 1967ರಲ್ಲಿ ಚಿಕ್ಕಮಗಳೂರು ಕ್ಷೇತ್ರಕ್ಕೆ ಸ್ವತಂತ್ರ ಅಸ್ತಿತ್ವ ಬಂತು. ಆರಂಭದಿಂದ ಈಗಿನವರೆಗೆ ಕಾಂಗ್ರೆಸ್‌ ಉಡುಪಿಯಲ್ಲಿ 12 ಮತ್ತು ಚಿಕ್ಕಮಗಳೂರಿನಲ್ಲಿ 6 ಬಾರಿ ಗೆಲುವು ಸಾಧಿಸಿದ್ದರೆ, ಬಿಜೆಪಿ ಉಡುಪಿಯಲ್ಲಿ 4 ಬಾರಿ ಮತ್ತು ಚಿಕ್ಕಮಗಳೂರಿನಲ್ಲಿ ಮೂರು ಬಾರಿ ಗೆಲುವು ಸಾಧಿಸಿದೆ. ಸ್ವತಂತ್ರ ಪಾರ್ಟಿ ಉಡುಪಿಯಲ್ಲಿ, ಪಿಎಸ್‌ಪಿ ಚಿಕ್ಕಮಗಳೂರಿನಲ್ಲಿ ತಲಾ ಒಂದು ಬಾರಿ ಜಯ ಗಳಿಸಿದ್ದವು. ಅತಿ ಹೆಚ್ಚು ಬಾರಿ ಗೆಲುವು ಕಂಡ ಮತ್ತು ಇಂದಿರಾ ಗಾಂಧಿಯವರಿಗೆ ಪುನರ್ಜನ್ಮ ನೀಡಿದ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಸ್ಪರ್ಧಿಸದೆ ಜೆಡಿಎಸ್‌ಗೆ ಸ್ಥಾನ ಬಿಟ್ಟುಕೊಡುವಂತಹ ಸ್ಥಿತಿ ಈಗ ನಿರ್ಮಾಣವಾಗಿದೆ. ಇತ್ತ ಪ್ರಧಾನಿ ಮೋದಿಯವರ ವರ್ಚಸ್ಸು ಇದ್ದರೂ ಹಾಲಿ ಸಂಸದೆ ಶೋಭಾ ಕರಂದ್ಲಾಜೆಯವರಿಗೆ ಟಿಕೆಟ್‌ ಕೊಡ ಬಾರದೆಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರಹಾಕುವ ಸ್ಥಿತಿ ನಿರ್ಮಾಣವಾಗಿದೆ. ಏತನ್ಮಧ್ಯೆ ಜೆಡಿಎಸ್‌ ಸಮರ್ಥ ಅಭ್ಯರ್ಥಿಗೆ ಹುಡುಕಾಟ ನಡೆಸುತ್ತಿದೆ. ಗೆಲುವು ಸಾಧಿಸಿದವರ ಪಟ್ಟಿ ಕಂಡಾಗ ಹಲವು ಮಂದಿ ಪಕ್ಷಾಂತರ ಮಾಡಿರುವುದು ಕಂಡುಬರುತ್ತದೆ.

ಮೊದಲ ಚುನಾವಣೆ
1951ರ ಚುನಾವಣೆ ವೇಳೆ ಅವಿಭಜಿತ ದ.ಕ. ಜಿಲ್ಲೆಯ ಮದ್ರಾಸ್‌ ಪ್ರಾಂತ್ಯಕ್ಕೆ ಒಳಪಟ್ಟಿತ್ತು. ಆಗಿನ ಸೌತ್‌ ಕೆನರಾ (ಉತ್ತರ)ದಲ್ಲಿ ಕಾಂಗ್ರೆಸ್‌ನ ಶ್ರೀನಿವಾಸ ಮಲ್ಯ 98,122 ಮತ ಗಳಿಸಿ ಜಯಶೀಲರಾಗಿದ್ದರು. ಕೆಎಂಪಿಪಿ ಪಕ್ಷದಿಂದ ಸ್ಪರ್ಧಿಸಿದ ಕೆ.ಬಿ. ಜಿನರಾಜ ಹೆಗ್ಡೆಯವರು 86,268, ಸೋಶಲಿಸ್ಟ್‌ ಪಕ್ಷದಿಂದ ಬಿ.ಜೆ. ಭಂಡಾರಿ 36,371 ಮತಗಳನ್ನು ಗಳಿಸಿದ್ದರು. 1957ರಲ್ಲಿ ಅವಿಭಜಿತ ದ.ಕ. ಜಿಲ್ಲೆ ಮೈಸೂರು ರಾಜ್ಯಕ್ಕೆ ಒಳಪಟ್ಟಿತು. ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಉಡುಪಿ, ಬ್ರಹ್ಮಾವರ, ಕಾಪು, ಕುಂದಾಪುರ, ಬೈಂದೂರು, ಸುರತ್ಕಲ್‌, ಬಂಟ್ವಾಳ, ಮೂಡುಬಿದಿರೆ ವಿಧಾನಸಭಾ ಕ್ಷೇತ್ರಗಳು ಒಳಪಟ್ಟವು. 2009ರಲ್ಲಿ ಕ್ಷೇತ್ರ ಪುನರ್ವಿಂಗಡನೆ ಯಾದಾಗ ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಎಂದು ನಾಮ ಕರಣ ಮಾಡಲಾಯಿತು. 2009ರಲ್ಲಿ ಬಿಜೆಪಿಯ ಸದಾನಂದ ಗೌಡ, 2012ರಲ್ಲಿ ಕಾಂಗ್ರೆಸ್‌ನಿಂದ ಕೆ. ಜಯಪ್ರಕಾಶ್‌ ಹೆಗ್ಡೆ, 2014ರಲ್ಲಿ ಬಿಜೆಪಿಯ ಶೋಭಾ ಕರಂದ್ಲಾಜೆ ಗೆಲುವು ಸಾಧಿಸಿದರು. 

ಚಿಕ್ಕಮಗಳೂರು ಕ್ಷೇತ್ರವು ಹಾಸನ ದೊಂದಿಗೆ ಇತ್ತು. ಆಗ ಕಾಂಗ್ರೆಸ್‌ನ ಎಚ್‌. ಸಿದ್ದನಂಜಪ್ಪ 1,16,561 ಮತಗಳನ್ನು ಗಳಿಸಿದ್ದರೆ, ಎಸ್‌ಪಿಯ ಎಸ್‌. ಶಿವಪ್ಪ 55,289 ಮತ ಗಳಿಸಿದ್ದರು. 1967ರವರೆಗೆ ಇದು ಹಾಸನದೊಂದಿಗೆ ಇತ್ತು. 1967ರಲ್ಲಿ ಶೃಂಗೇರಿ, ಮೂಡಿಗೆರೆ, ಚಿಕ್ಕಮಗಳೂರು, ಬಿರೂರು, ಕಡೂರು, ತರಿಕೆರೆ, ದ.ಕ. ಜಿಲ್ಲೆಯ ಕಾರ್ಕಳ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡ ಚಿಕ್ಕಮಗಳೂರು ಲೋಕ ಸಭಾ ಕ್ಷೇತ್ರವಾಯಿತು. 1967ರಲ್ಲಿ ಈ ಕ್ಷೇತ್ರದಲ್ಲಿ ಪಿಎಸ್‌ಪಿಯ ಎಂ. ಹುಚ್ಚೇಗೌಡ, 1971, 1977ರಲ್ಲಿ ಕಾಂಗ್ರೆಸ್‌ನ ಡಿ.ಬಿ. ಚಂದ್ರೇಗೌಡ, 1978ರ ಉಪ ಚುನಾವಣೆಯಲ್ಲಿ ಇಂದಿರಾ ಗಾಂಧಿ, 1980ರಲ್ಲಿ ಕಾಂಗ್ರೆಸ್‌ನ ಪುಟ್ಟೇಗೌಡ, 1984 ರಲ್ಲಿ ಕಾಂಗ್ರೆಸ್‌ನ ತಾರಾ ದೇವಿ, 1996ರಲ್ಲಿ ಜನತಾದಳದ ಬಿ.ಎಲ್‌. ಶಂಕರ್‌, 1998, 1999, 2004ರಲ್ಲಿ ಬಿಜೆಪಿಯ ಡಿ.ಸಿ. ಶ್ರೀಕಂಠಪ್ಪ ಚುನಾಯಿತ ರಾಗಿದ್ದರು. ಬಳಿಕ ಉಡುಪಿ- ಚಿಕ್ಕಮಗಳೂರು ಕ್ಷೇತ್ರವೆನಿಸಿತು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.