ಉಡುಪಿ ಸಾರಿಗೆ ಅಧಿಕಾರಿ ಎಸಿಬಿ ಬಲೆಗೆ


Team Udayavani, Mar 17, 2019, 12:30 AM IST

q-18.jpg

ಉಡುಪಿ: ವಾಹನ ಮಾಲಕರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಉಡುಪಿಯ ಉಪ ಸಾರಿಗೆ ಆಯುಕ್ತ, ಪ್ರಾದೇಶಿಕ ಸಾರಿಗೆ ಅಧಿಕಾರಿ ಆರ್‌.ಎಂ. ವರ್ಣೇಕರ್‌, ಮಧ್ಯವರ್ತಿ ಮುನ್ನಾ ಯಾನೆ ಮುನಾಫ್ ಶನಿವಾರ ರೆಡ್‌ಹ್ಯಾಂಡ್‌ ಆಗಿ ಉಡುಪಿ ಎಸಿಬಿ (ಭ್ರಷ್ಟಾಚಾರ ನಿಗ್ರಹ ದಳ) ಪೊಲೀಸರ ಬಲೆಗೆ ಬಿದ್ದಿದ್ದಾರೆ. ಆರ್‌ಟಿಒ ಕಚೇರಿಯಲ್ಲಿ ಕಾರಿನ ಲೈಫ್ ಟ್ಯಾಕ್ಸ್‌ ಬಾಕಿ ಮರು ಪಾವತಿಯ ಮೊತ್ತದಲ್ಲಿ ಲಂಚ ಪಡೆಯುತ್ತಿದ್ದ ಸಂದರ್ಭ ಎಸಿಬಿ ತಂಡ ದಾಳಿ ನಡೆಸಿದೆ. ಮೂಲತಃ ಉಡುಪಿಯವರಾಗಿದ್ದು, ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯೋಗಿಯಾಗಿ ರುವ ವಿಘ್ನೇಶ್‌ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಎಸಿಬಿ ದಾಳಿ ನಡೆಸಿತ್ತು.

ಏರ್‌ಶೋ ಸಂದರ್ಭ ಆಹುತಿ
ಬೆಂಗಳೂರಿನಲ್ಲಿ ಏರ್‌ಶೋ ಸಂದರ್ಭ ಉಂಟಾದ ಅಗ್ನಿ ಅವಘಡ ದಲ್ಲಿ ನೂರಾರು ಕಾರು ಬೆಂಕಿಗಾಹುತಿ ಯಾಗಿದ್ದವು. ಅದರಲ್ಲಿ ವಿಘ್ನೇಶ್‌ ಅವರ ಕಾರು ಕೂಡ ಇತ್ತು. ಕಾರು ಈ ರೀತಿ ಅವಘಡಕ್ಕೊಳಗಾಗಿದ್ದರಿಂದ ಅದಕ್ಕೆ ನೋಂದಣಿ ವೇಳೆ ಪಾವತಿಸಿರುವ ರಸ್ತೆ ತೆರಿಗೆಯ ಉಳಿಕೆ ಮೊತ್ತವನ್ನು ಸಾರಿಗೆ ಇಲಾಖೆಯು ಕಾರಿನ ಮಾಲಕರಿಗೆ ಪಾವತಿಸಬೇಕು. ಅದರಂತೆ ವಿಘ್ನೇಶ್‌ ತನಗೆ ದೊರೆಯಬೇಕಾಗಿರುವ ತೆರಿಗೆ ಬಾಕಿಯ ಮರುಪಾವತಿಗೆ ಅರ್ಜಿ ಹಾಕಿದ್ದರು. ಅವರಿಗೆ 65,000 ರೂ. ಮರುಪಾವತಿಸಬೇಕಿತ್ತು. ಅದಕ್ಕೆ ಶೇ.10ನ್ನು ತನಗೆ ನೀಡಬೇಕು ಎಂದು ಆರ್‌ಟಿಒ ವರ್ಣೇಕರ್‌ ಷರತ್ತು ಹಾಕಿದ್ದರು. ಇದರಿಂದ ನೊಂದ ವಿಘ್ನೇಶ್‌ ಉಡುಪಿ ಎಸಿಬಿಯವರಿಗೆ ದೂರು ನೀಡಿದ್ದರು. ಕೂಡಲೇ ಕಾರ್ಯಾಚರಣೆ ಯೋಜನೆ ರೂಪಿಸಿದ ಎಸಿಬಿಯವರು ಲಂಚದ ಹಣ ನೀಡುವಂತೆ ವಿಘ್ನೇಶ್‌ಗೆ ಸೂಚಿಸಿದ್ದು, ಹಣ ನೀಡುವ ವೇಳೆ ರೆಡ್‌ಹ್ಯಾಂಡ್‌ ಆಗಿ ಆರ್‌ಟಿಒ ಮತ್ತು ಅವರ ಸಹಾಯಕನನ್ನು ಬಂಧಿಸಿದರು.

30,000 ರೂ. ಪತ್ತೆ
ಆರ್‌ಟಿಒ ಕಚೇರಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಸುಮಾರು 30,000 ರೂ.ಗಳನ್ನು ಎಸಿಬಿ ಪೊಲೀಸರು ಪತ್ತೆಹಚ್ಚಿ ಸ್ವಾಧೀನಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮಂಗಳೂರಿನ ಬಿಜೈಯಲ್ಲಿರುವ ವರ್ಣೇಕರ್‌ ಅವರ ಐಶಾರಾಮಿ ಮನೆಯಲ್ಲಿಯೂ ತಡರಾತ್ರಿವರೆಗೆ ಶೋಧ ಕಾರ್ಯ ಮುಂದುವರಿದಿತ್ತು. ಎಸಿಬಿ ಕಳೆದ ಡಿಸೆಂಬರ್‌ನಲ್ಲಿ ಉಡುಪಿ ನಗರಸಭೆಯ ಹಿಂದಿನ ಆಯುಕ್ತರಾಗಿದ್ದ ಮಂಜುನಾಥಯ್ಯ ಅವರ ನಿವಾಸದ ಮೇಲೆ ದಾಳಿ ನಡೆಸಿತ್ತು. ಕಾರ್ಯಾಚರಣೆಯಲ್ಲಿ ಭ್ರಷ್ಟಾ ಚಾರ ನಿಗ್ರಹ ದಳದ  ಡಿವೈಎಸ್‌ಪಿ ಮಂಜುನಾಥ ಕೌರಿ, ಉಡುಪಿಯ ಇನ್‌ಸ್ಪೆಕ್ಟರ್‌ಗಳಾದ ಜಯರಾಮ್‌ ಗೌಡ, ಸತೀಶ್‌ ಬಿ.ಎಸ್‌., ಮಂಗಳೂರಿನ ಇನ್‌ಸ್ಪೆಕ್ಟರ್‌ ಯೋಗೀಶ್‌, ಸಿಬಂದಿ ಯತಿನ್‌, ಪ್ರಸನ್ನ, ರವೀಂದ್ರ, ಜಲಾಲ್‌, ರಾಘವೇಂದ್ರ ಪೂಜಾರಿ, ಸುರೇಶ್‌ ನಾಯಕ್‌, ಪ್ರಶಾಂತ್‌, ರಾಧಾಕೃಷ್ಣ, ಗಣೇಶ್‌, ರಾಘವೇಂದ್ರ, ಸುರೇಶ್‌, ಸೂರಜ್‌, ಪಾವನಾಂಗಿ, ರಮೇಶ್‌ ಭಂಡಾರಿ ಪಾಲ್ಗೊಂಡಿದ್ದರು. 

ಸೆಕ್ಯೂರಿಟಿ ಕಮ್‌ ಮಧ್ಯವರ್ತಿ!
ಆರ್‌ಟಿಒ ವರ್ಣೇಕರ್‌ ಅವರು ತನಗೆ ಬರಬೇಕಾಗಿದ್ದ ಮೊತ್ತವನ್ನು ಮುನಾಫ್ ಮೂಲಕ ಪಡೆಯುವವರಿದ್ದರು. ಮುನಾಫ್ ಹಲವು ವರ್ಷಗಳಿಂದ ಆರ್‌ಟಿಒ ಬ್ರೋಕರ್‌ ಆಗಿ ಕೆಲಸ ಮಾಡಿದ್ದ. ಇತ್ತೀಚಿನ ವರ್ಷಗಳಲ್ಲಿ ಸೆಕ್ಯುರಿಟಿ ಗಾರ್ಡ್‌ ಆಗಿ ಕೂಡ “ಭದ್ರತೆ’ಯ ಜವಾಬ್ದಾರಿ ಹೊತ್ತಿದ್ದ! ಈತನನ್ನು ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕ ನೆಲೆಯಲ್ಲಿ ಆರ್‌ಟಿಒ ಕಚೇರಿಯಲ್ಲಿ ನಿಯೋಜಿಸಲಾಗಿತ್ತು ಎಂದು ತಿಳಿದುಬಂದಿದೆ. 

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.