ಕಾರ್ಕಳ ವಿಧಾನ ಸಭಾ ಕ್ಷೇತ್ರ: 1,86,571 ಮತದಾರರು
Team Udayavani, Mar 17, 2019, 3:38 AM IST
ಕಾರ್ಕಳ: ವಿಧಾನ ಸಭಾ ಕ್ಷೇತ್ರ ಕಾರ್ಕಳ-122ರಲ್ಲಿ 96,694 ಮಹಿಳಾ, 87,106 ಪುರುಷ ಮತ್ತು 2,771 ಯುವ ಮತದಾರರು ಸೇರಿದಂತೆ ಒಟ್ಟು 1,86,571 ಮಂದಿ ಮತದಾರರಿದ್ದಾರೆ. 187 ಗ್ರಾಮಾಂತರ, 22 ನಗರದ ಒಟ್ಟು 209 ಮತಗಟ್ಟೆಗಳಲ್ಲಿ 140 ಸಾಮಾನ್ಯ ಮತಗಟ್ಟೆಗಳು, 21 ಸೂಕ್ಷ್ಮ ಮತಗಟ್ಟೆಗಳು, 27 ನಕ್ಸಲ್ ಬಾಧಿತ ಮತ್ತು 21 ಅತಿ ಸೂಕ್ಷ$ಮತಗಟ್ಟೆಗಳೆಂದು ಗುರುತಿಸ ಲಾಗಿದೆ ಎಂದು ಕಾರ್ಕಳ ತಾ| ಸಹಾಯಕ ಚುನಾವಣಾಧಿಕಾರಿ ಸಂತೋಷ್ ಕುಮಾರ್ ತಿಳಿಸಿದರು. ಮಾ. 16ರಂದು ತಾಲೂಕು ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.
ಮತದಾರರ ಪಟ್ಟಿ ಪರಿಷ್ಕರಣೆ
ಸುಗಮ, ಸುಸೂತ್ರ ಮತ್ತು ವ್ಯವಸ್ಥಿತವಾಗಿ ಚುನಾವಣೆ ನಡೆಸುವ ಉದ್ದೇಶದಿಂದ ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಗುರುತಿನ ಚೀಟಿ ಕಾರ್ಯ ಮಾಡಲಾಗುತ್ತಿದೆ. ಮತದಾರರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಕೈಗೆತ್ತಿಕೊಳ್ಳಲು ಒಟ್ಟು 209 ಮತಗಟ್ಟೆ ಅಧಿಕಾರಿಗಳು ಈಗಾಗಲೇ ಕಾರ್ಯ ಪ್ರವೃತ್ತರಾಗಿರುತ್ತಾರೆ ಎಂದರು.
ವಿಕಲ ಚೇತನ ಮತದಾರರಿಗೆ ರ್ಯಾಂಪ್ ವ್ಯವಸ್ಥೆ, ನಿರಂತರವಾದ ವಿದ್ಯುತ್ ಪೂರೈಕೆ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಸುಮಾರು 18 ಮೂಲಸೌಕರ್ಯಗಳನ್ನು ಒದಗಿಸಲಾಗುವುದು ಎಂದರು.
ತಪಾಸಣೆ ತಂಡ
23 ಸೆಕ್ಟರ್ ಆಫೀಸರ್, 3 ಫ್ಲೈಯಿಂಗ್ ಸ್ಕ್ವಾಡ್, 3 ಅಂಕಿ ಅಂಶ ನಿಗಾ ತಂಡ, 3 ವೀಡಿಯೋ ನಿಗಾ ತಂಡ, 3 ವೀಡಿಯೋ ವಿಚಕ್ಷಣಾ ತಂಡ, 2 ಮಾಸ್ಟರ್ ಟ್ರೈನರ್, 1 ಸುವಿಧಾ ತಂಡ, 1ಸಿ-ವಿಜಿಲ್ ತಂಡ ಹಾಗೂ ಕಚೇರಿಯಲ್ಲಿ ಏಕ-ಗವಾಕ್ಷಿ ನಿಯಂತ್ರಣ ಕೊಠಡಿ ವ್ಯವಸ್ಥೆ ಮಾಡಲಾಗಿದೆ.
ಚೆಕ್ ಪೋಸ್ಟ್
ಕಾರ್ಕಳ ಮತ್ತು ಹೆಬ್ರಿ ತಾಲೂಕಿನ ಸೋಮೇಶ್ವರ, ಸಾಣೂರು, ಮಾಳ, ಈದು-ಹೊಸ್ಮಾರು ಸೇರಿದಂತೆ 4 ಕಡೆ ವಾಹನ ತಪಾಸಣೆ ಕೇಂದ್ರವನ್ನು ಸ್ಥಾಪಿಸಲಾಗಿದೆ. ತಪಾಸಣೆ ಕೇಂದ್ರಗಳಲ್ಲಿ 3 ಪಾಳಯದಲ್ಲಿ 9 ಫ್ಲೈಯಿಂಗ್ ಸ್ಕ್ವಾಡ್ ತಂಡಗಳು ನಿಗದಿಪಡಿಸಿದ ಸಮಯದಲ್ಲಿ ತಮ್ಮ ಕರ್ತವ್ಯಗಳನ್ನು ನಿರ್ವಹಿಸುತ್ತಿವೆ.
ರಾಜಕೀಯ ಪಕ್ಷದವರು ನಡೆಸುವ ಪ್ರಚಾರ ಕಾರ್ಯಕ್ರಮ, ಶೋಭಾ ಯಾತ್ರೆ ಮುಂತಾದವುಗಳಿಗೆ ಸುವಿಧಾ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಒಂದು ವೇಳೆ ಅನುಮತಿ ಇಲ್ಲದೇ ನಡೆಸುವ ಯಾವುದೇ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ತಿಳಿದು ಬಂದಲ್ಲಿ, ಪ್ರಜಾಪ್ರತಿನಿಧಿ ಕಾಯ್ದೆಯನ್ವಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. ಕಾರ್ಕಳ ತಹಶೀಲ್ದಾರ್ ಪುರಂದರ ಹೆಗ್ಡೆ, ಹೆಬ್ರಿ ತಹಶೀಲ್ದಾರ್ ಮಹೇಶ್ಚಂದ್ರ, ತಾ.ಪಂ. ಇ.ಒ. ಮೆ| ಹರ್ಷ ಉಪಸ್ಥಿತರಿದ್ದರು.
ಧಾರ್ಮಿಕ ಕಾರ್ಯಕ್ರಮಗಳಿಗೆ ಅಡ್ಡಿ-ಆತಂಕವಿಲ್ಲ
ನೀತಿ ಸಂಹಿತೆ ಜಾರಿಯಲ್ಲಿದ್ದರೂ ಧಾರ್ಮಿಕ ಕಾರ್ಯ ಕ್ರಮಗಳನ್ನು ನಡೆಸಲು ಯಾವುದೇ ಅಡ್ಡಿ-ಆತಂಕ ಇರುವುದಿಲ್ಲ. ಧಾರ್ಮಿಕ ಕೇಂದ್ರಗಳ ವಠಾರದ ಒಳಗೆ ಬ್ಯಾನರ್, ಬಂಟಿಂಗ್ಸ್ ಕಟ್ಟಲು ಅವಕಾಶವಿದೆ. ಆದರೆ, ಯಾವುದೇ ರಾಜಕೀಯ ವ್ಯಕ್ತಿಗಳಿಗೆ ಶುಭ ಕೋರಿ ಬ್ಯಾನರ್ ಅಳವಡಿಸಲು ಅವಕಾಶವಿಲ್ಲ. ಸಾರ್ವಜನಿಕ ಸ್ಥಳ ಮತ್ತು ರಸ್ತೆ ಬದಿಗಳಲ್ಲಿ ಬ್ಯಾನರ್, ಬಂಟಿಂಗ್ಸ್ ಗಳನ್ನು ಕಟ್ಟುವಂತಿಲ್ಲ. ಸಾರ್ವಜನಿಕರು ನಡೆಸುವ ಧಾರ್ಮಿಕ ಮತ್ತು ಕೌಟುಂಬಿಕ ಕಾರ್ಯಕ್ರಮಗಳ ಬಗ್ಗೆ ಸಹಾಯಕ ಚುನಾವಣ ಅಧಿಕಾರಿಯವರ ಕಚೇರಿಯಲ್ಲಿ ತೆರೆಯಲಾಗಿರುವ ಏಕ-ಗವಾಕ್ಷಿ ನಿಯಂತ್ರಣ ವ್ಯವಸ್ಥೆಯ ಮೂಲಕ ಪೂರ್ವಾನುಮತಿ ಪಡೆದುನಡೆಸಬಹುದಾಗಿದೆ ಎಂದರು.
ದೂರು ನೀಡಬಹುದು
ಚುನಾವಣೆಯ ನೀತಿ-ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದ ದೂರುಗಳನ್ನು ದಾಖಲಿಸಲು 24 ಗಂಟೆ ಕಾರ್ಯ ನಿರ್ವಹಣೆಗಾಗಿ 2 ತಂಡಗಳನ್ನು ರಚಿಸಲಾಗಿದ್ದು, ತಾ|ಕಚೇರಿಯ ಕಂಟ್ರೋಲ್ ರೂಂ ದೂರವಾಣಿ ಸಂ. 08258-230201ಗೆ ಅಥವಾ ತಾಲೂಕು ಮಟ್ಟದ ನೀತಿ-ಸಂಹಿತೆ ಅಧಿಕಾರಿ ಮೆ. ಹರ್ಷ ಕೆ.ಬಿ., 9480878100ಗೆ ಸಂಪರ್ಕಿಸಿ ದೂರು ಸಲ್ಲಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು