ಆಂಗ್ಲ  ಮಾಧ್ಯಮ ಶಿಕ್ಷಣ ಕ್ರಮ, ವಿವಿಧ ಸೌಲಭ್ಯಗಳ ಒದಗಿಸುವಿಕೆ


Team Udayavani, Mar 22, 2019, 1:00 AM IST

angla-madyama.jpg

ಮಲ್ಪೆ: ಒಂದೂವರೆ ಶತಮಾನಗಳ ಇತಿಹಾಸವನ್ನು ಕಂಡಿರುವ ಸರಕಾರಿ ಕೊಡವೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ಕನ್ನಡದ ಜತಗೆ ಆಂಗ್ಲ ಮಾಧ್ಯಮವನ್ನು ಪ್ರಾರಂಭಿಸಿ, ಶಾಲೆಯನ್ನು ಉಳಿಸಿ ಬೆಳೆಸುವ ಮಹತ್ವಾಕಾಂಕ್ಷೆಯ ಯೋಜನೆ ಶಾಲಾ ಮುಖ್ಯೋಪಾಧ್ಯಾಯರ ಮಾರ್ಗದರ್ಶನ, ಶ್ರೀ ಶಂಕರನಾರಾಯಣ ಶಿಕ್ಷಣ ಪ್ರತಿಷ್ಠಾನ ಸಂಸ್ಥೆಯ ನೇತೃತ್ವದಲ್ಲಿ ಕಾರ್ಯಗತವಾಗುತ್ತಿದೆ.

ಆಂಗ್ಲ ಮಾಧ್ಯಮ ಶಾಲೆಗಳ ಪೈಪೋಟಿ, ಸರಕಾರಿ ಕನ್ನಡ ಶಾಲೆಗಳ ಮೇಲೆ ಜನರ ನಿರುತ್ಸಾಹದಿಂದ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ 50ಕ್ಕೆ ಇಳಿಮುಖವಾದಾಗ 2 ವರ್ಷಗಳ ಹಿಂದೆ ಇಲ್ಲಿನ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದ, ಶಾಲಾಭಿವೃದ್ಧಿ  ಸಮಿತಿ ಶಾಲೆಯನ್ನು ಉಳಿಸುವ ನಿಟ್ಟಿನಲ್ಲಿ ಆಂಗ್ಲಮಾಧ್ಯಮ ತೆರೆದು ಭದ್ರ ಬುನಾದಿಯನ್ನು ಹಾಕಲಾಯಿತು. ಪ್ರಥಮ ಅವಧಿಯಲ್ಲಿ 45 ವಿದ್ಯಾರ್ಥಿಗಳು ಎಲ್‌.ಕೆ.ಜಿ. ಗೆ ಹಾಗೂ ಇತರ ತರಗತಿಗೆ 50 ವಿದ್ಯಾರ್ಥಿಗಳು ದಾಖಲಾಗಿದ್ದು, ಒಟ್ಟು 200 ವಿದ್ಯಾರ್ಥಿಗಳು ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

ಶಾಲೆಯ ಮುಂದಿನ ಶೈಕ್ಷಣಿಕ ವರ್ಷಕ್ಕೆ 30 ವಿದ್ಯಾರ್ಥಿಗಳು ಒಂದನೇ ತರಗತಿಗೆ ದಾಖಲಾಗಿದ್ದು, ಇತರ ತರಗತಿಗಳಿಗೂ ಹೆಚ್ಚಿನ ವಿದ್ಯಾರ್ಥಿಗಳು ದಾಖಲಾಗುವ ಸಾಧ್ಯತೆ ಇದೆ ಎಂದು ಶಾಲಾ ಮುಖ್ಯೋಪಾಧ್ಯಾಯ ಸುಂದರ ಎ. ತಿಳಿಸಿದ್ದಾರೆ.  2012-13ರಿಂದಲೇ 6ಮತ್ತು 7ನೇ ತರಗತಿಗಳಿಗೆ ಆಂಗ್ಲ ಮಾಧ್ಯಮ ವಿಭಾಗ ಮಂಜೂರಾಗಿದೆ. ಇದೀಗ ಶಾಲೆಯಲ್ಲಿ 5 ಮಂದಿ ಇಲಾಖಾ ಶಿಕ್ಷಕರು, 5 ಮಂದಿ ಗೌರವ ಶಿಕ್ಷಕರು, 3 ಮಂದಿ ಅಡುಗೆ ಸಹಾಯಕರು, ವಾಹನ ಚಾಲಕ ಹಾಗೂ ಸಹಾಯಕರು ಕರ್ತವ್ಯದಲ್ಲಿದ್ದಾರೆ.

ಶಾಲಾ ವಾಹನದ ಸೌಲಭ್ಯ
ಪ್ರತಿಷ್ಠಾನದ ವತಿಯಿಂದ ರೂ. 11ಲಕ್ಷ ವೆಚ್ಚದ ಶಾಲಾ ವಾಹನವನ್ನು ಒದಗಿಸಿದ್ದು, ಮಾ. 23ರಂದು ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಅವರು ದಿವ್ಯ ಹಸ್ತದಿಂದ ಉದ್ಘಾಟನೆಗೊಳ್ಳಲಿದೆ. ಕರ್ನಾಟಕ ಬ್ಯಾಂಕಿನ ಪ್ರಾದೇಶಿಕ ವಿಭಾಗ ಕಚೇರಿಯ ಎ.ಜಿ. ಎಂ. ಗೋಪಾಲ ಕೃಷ್ಣ ಸಾಮಗ, ಜಿಲ್ಲಾ ವಿದ್ಯಾಂಗ ಉಪನಿರ್ದೇಶಕ ಶೇಷಶಯನ ಕಾರಿಂಜ, ಉಡುಪಿ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ ಉಪಸ್ಥಿತರಿರುವರು.

ಇವೆಲ್ಲ ಸೌಲಭ್ಯಗಳಿವೆ
ಶಾಲೆಯಲ್ಲಿ ಸುಸಜ್ಜಿತ ಮಿನಿ ಸಭಾಂಗಣ ಹೊರಾಂಗಣದಲ್ಲಿ ರಂಗಮಂಟಪ, ಎಲ್ಲಾ ತರಗತಿಗೂ ಧ್ವನಿವರ್ಧಕ ಜಾಲ ಮೂಲಕ ಆಯಾ ತರಗತಿಗಳಿಗೆ ಸಂಬಂಧಪಟ್ಟ ಪ್ರಕಟನೆ, ಕೇಳಿ ಕಲಿ ಬಾನುಲಿ ಪ್ರಸಾರದ ನೇರ ವ್ಯವಸ್ಥೆ, ಕಂಪ್ಯೂಟರ್‌ ತರಗತಿ, ದೂರದರ್ಶನ, ಹೂತೋಟ, ಗ್ರಂಥಾಲಯ, ಅಕ್ಷರ ದಾಸೋಹ ಕೊಠಡಿ, ಊಟದ ಹಾಲ್‌, ಶುದ್ಧª ನೀರಿನ ವ್ಯವಸ್ಥೆ, ಶೌಚಾಲಯ, ಭಾರತ ಸೇವಾದಲ, ನೈತಿಕ ಶಿಕ್ಷಣ ತರಗತಿ, ವಿವಿಧ ಸಾಂಸ್ಕೃತಿಕ ಸಾಹಿತ್ಯ ಸಂಘಗಳು, ವೈಜ್ಞಾನಿಕ ತಂತ್ರಜ್ಞಾನದ ಬಳಕೆಗಾಗಿ ಪ್ರೊಜೆಕ್ಟರ್‌ ವ್ಯವಸ್ಥೆ, ಅಂಗನವಾಡಿ ಕೇಂದ್ರಗಳಿವೆ.

ಆಗಲಿರುವ ಯೋಜನೆಗಳು
ಒಂದೂವರೆ  ಶತಮಾನವನ್ನು ಕಂಡ ಈ ಶಾಲೆಯಲ್ಲಿ ತೀರ ಹಳೆಯ ತರಗತಿಗಳ ಕೋಣೆಗಳ ಪುನರ್‌ ನಿರ್ಮಾಣ, ಸರಕಾರದಿಂದ ಆಂಗ್ಲ ಮಾಧ್ಯಮ ವಿಭಾಗಕ್ಕೆ ಅನುಮತಿ, ಸುಮಾರು ರೂ. 10ಲಕ್ಷ ವೆಚ್ಚದ ಹೊರಾಂಗಣ ಸಭಾಭವನ ನಿರ್ಮಾಣ, ಪ್ರತಿ ತರಗತಿಗೂ ಆಧುನಿಕ ಶೈಕ್ಷಣಿಕ ಪದ್ಧತಿಗೆ ಅನುಗುಣವಾಗಿ ಕಾರ್ಯ ಯೋಜನೆ, ಹೆಚ್ಚುವರಿ ಶಾಲಾ ವಾಹನ ಈ ಎಲ್ಲ ವ್ಯವಸ್ಥೆಗಳು ಶಂಕರ ನಾರಾಯಣ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಟಿ. ರಾಘವೇಂದ್ರ ರಾವ್‌ ಮತ್ತು 20 ಮಂದಿ ಪದಾಧಿಕಾರಿಗಳ ನೇತೃತ್ವದ ಸಮಿತಿಯಲ್ಲಿ ಹಾಗೂ ಶಾಲಾಭಿವೃದ್ಧಿ ಸಮಿತಿಯಲ್ಲಿ ಶಾಲಾ ಹಳೆವಿದ್ಯಾರ್ಥಿ ಸಂಘ, ಯುವಕ ಮಂಡಲ, ಶಾಲಾಭಿವೃದ್ಧಿ ಸಮಿತಿ, ಶಿಕ್ಷಕ ವೃಂದದ ಸಹಕಾರದಿಂದ ಯೋಜನೆಗಳು ಪೂರ್ಣಗೊಳ್ಳಲಿವೆ.

ಟಾಪ್ ನ್ಯೂಸ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8-muddebihala

Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.