22 ವರ್ಷಗಳಿಂದ ಮದ್ಯ-ಮಾಂಸ ಮುಕ್ತ ಮದರಂಗಿ!


Team Udayavani, Mar 22, 2019, 1:00 AM IST

madarangi.jpg

ಮಲ್ಪೆ: ಈ ಊರನ್ನು ಮದ್ಯ, ತಂಬಾಕು ಮುಕ್ತವಾಗಿಸಬೇಕೆಂದು ಸರಕಾರವಾಗಲಿ, ಆರೋಗ್ಯ ಇಲಾಖೆಯಾಗಲಿ ಆದೇಶ ಮಾಡಿಲ್ಲ. ಅದರೂ ಇಲ್ಲಿನ ಮಂದಿ ಕಳೆದ 22 ವರ್ಷಗಳಿಂದ ಸ್ವಯಂ ಪ್ರೇರಣೆಯಿಂದ ಮದುವೆ ಮುನ್ನಾ ದಿನದ ಮೆಹಂದಿ ಕಾರ್ಯಕ್ರಮಕ್ಕೆ ಮಧುಮಾಂಸ ನಿಷೇಧಿಸುವ ಜತೆಗೆ ತಂಬಾಕು ಮುಕ್ತ ಪ್ರದೇಶವನ್ನಾಗಿಸಿದ್ದಾರೆ.
ಉಡುಪಿ ಜಿಲ್ಲೆಯ ಕೋಡಿಗ್ರಾಮದ ಕೋಡಿಬೆಂಗ್ರೆ ಪ್ರದೇಶದ ಜನ ಈ ಸಂಕಲ್ಪಕ್ಕೆ ಪಣತೊಟ್ಟಿದ್ದು, 22 ವರ್ಷಗಳಿಂದ ಅನೂಚಾನವಾಗಿ ಮುಂದುವರಿಸಿಕೊಂಡು ಬರುವ ಮೂಲಕ ಮಾದರಿಯಾಗಿದ್ದಾರೆ.

ಮದಿರೆ ಇಲ್ಲದ ದೊಂಪ ಅಪೂರ್ಣ
ಇಂದಿನ ದಿನಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಮದುವೆಯ ಹಿಂದಿನ ದಿನದ ಮೆಹಂದಿ ಕಾರ್ಯಕ್ರಮ ಅದ್ದೂರಿಯಾಗಿ ನಡೆಯುತ್ತದೆ. ಔತಣದ ಜತೆಗೆ ಮದ್ಯದ ಕೌಂಟರ್‌, ಅಬ್ಬರದ ಡಿಜೆಗೆ ಬೆಳಗ್ಗಿನ ವರೆಗೆ ಯುವಕರ ನೃತ್ಯ ವೈಭವ ಸಾಮಾನ್ಯ. ಈಗೀಗ ಮದುವೆಗಿಂತ ಮೆಹಂದಿಗೇ ಹೆಚ್ಚು ಖರ್ಚು ಮಾಡಲಾಗುತ್ತಿದೆ. ಮದುವೆ ಮನೆಯವರಿಗೆ ಮರ್ಯಾ ದೆಯ ಪ್ರಶ್ನೆ, ಸಾಲ ಮಾಡಿಯಾದರೂ ಬಂದವರಿಗೆ ಮದ್ಯ ಹಂಚಬೇಕು. ಇಲ್ಲದಿದ್ದರೆ ಮನೆಯವರನ್ನು “ಏನೂ ಇಲ್ಲವಾ’? ಎಂದೂ ಕೇಳುವವರೂ ಇದ್ದಾರೆ. ಇಲ್ಲದಿದ್ದರೆ ಕುಣಿಯಲು ಕಿಕ್‌ ಸಿಗುವುದಿಲ್ಲ ಎನ್ನುವವರೂ ಇದ್ದಾರೆ. ಗುಂಡು ಪಾರ್ಟಿ ಇದ್ದರೆ ಮಾತ್ರ ಹೆಚ್ಚು ಮಂದಿ ಬರುತ್ತಾರೆ. ಇಲ್ಲದಿದ್ದರೆ ಮೆಹಂದಿಗೆ ಬರುವವರೇ  ಕಡಿಮೆ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ಕೋಡಿಬೆಂಗ್ರೆ ಮಾತ್ರ ವಿಭಿನ್ನ.

ಎಲ್ಲರ ಸಹಮತ
ಕೋಡಿಬೆಂಗ್ರೆಯು ಪಡುತೋನ್ಸೆ ಗ್ರಾಮಕ್ಕೆ ತಾಗಿಕೊಂಡಿದ್ದರೂ ಕೋಡಿ ಗ್ರಾಮದ ಒಂದು ಸಣ್ಣ ಭಾಗವಾಗಿದೆ. ಸುಮಾರು 300 ಮನೆಗಳಿವೆ ಇಲ್ಲಿವೆ. ಒಂದು ಬದಿ ಸಮುದ್ರ, 2 ಬದಿಗಳಲ್ಲಿ ನದಿಗಳು ಹರಿಯುತ್ತವೆ. ಶೇ. 70ರಷ್ಟು ಮೊಗವೀರರು, ಉಳಿ ದಂತೆ ಬಿಲ್ಲವ, ಖಾರ್ವಿ, ಮುಸ್ಲಿಂ ಸಮುದಾಯದ ಮಂದಿ ಇಲ್ಲಿದ್ದಾರೆ. ಮದ್ಯ, ಮಾದಕ ಪದಾರ್ಥಗಳಿಗೆ ಹೆಚ್ಚಾಗಿ ಬಲಿಯಾಗುತ್ತಿ ರುವುದು ಯುವಕರು. ಯುವಕರ ಮದ್ಯ ಪಾನದ ಚಟ ಆರಂಭದ ಮೊದಲ ವೇದಿಕೆ ಮದುವೆ ಮೆಹಂದಿ ಕಾರ್ಯ ಕ್ರಮ. ಮುಂದೆ ಸಮಾಜದಲ್ಲಿ ಅಸಭ್ಯ ವರ್ತನೆಯ ಜತೆಗೆ ಸಮಾಜ ಘಾತಕ ಕೃತ್ಯಗಳಿಗೂ ಪ್ರೇರಣೆ ಯಾಗುತ್ತದೆ. ಇದಕ್ಕೆಲ್ಲ ಕಡಿವಾಣ ಹಾಕಲು ಕೋಡಿಬೆಂಗ್ರೆಯ ಜನರು 22 ವರ್ಷ ಗಳ ಹಿಂದೆ ಈ ಒಂದು ಉತ್ತಮ ಸಂಕಲ್ಪ ಕೈಗೊಂಡರು. ಹಿಂದೂ ಸಮಾಜದವರ ಮದುವೆಯ ಹಿಂದಿನ ದಿನ ಸಾರ್ವಜನಿಕವಾಗಿ ಮದ್ಯ ನೀಡಬಾರದು ಎನ್ನುವುದೇ ಈ ನಿಯಮ. ಆಕ್ಷೇಪವಿಲ್ಲದೆ ಎಲ್ಲರೂ ಈ ಅಭಿಯಾನಕ್ಕೆ ಕೈಜೋಡಿ ಸಿದ್ದಾರೆ.

ಅಂಗಡಿಗಳಲ್ಲೂ ತಂಬಾಕು ನಿಷೇಧ
ಈ ಭಾಗದಲ್ಲಿ 10 ಅಂಗಡಿಗಳು, 4 ಹೊಟೇಲುಗಳಿದ್ದು ಅವುಗಳಲ್ಲಿ ಎಲೆ, ಅಡಿಕೆ ಹೊರತು ಪಡಿಸಿ ತಂಬಾಕು ಮಾರಾಟ ಪೂರ್ಣ ನಿಷೇಧಿಸಲಾಗಿದೆ.

ಊರಿನ ಬಗ್ಗೆ ಮೆಚ್ಚುಗೆ
ಈ ಹಿಂದೆ ಶಾಲೆಗೆ ಹೋಗುವ ಮಕ್ಕಳು ಪಾನ್‌ಕಿಂಗ್‌, ಪಾನ್‌ಪರಾಗ್‌ ದಾಸರಾಗುತ್ತಿದ್ದರು. ಇದನ್ನು ತಡೆಯುವ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಾಗಿ ಎಲ್ಲ ಅಂಗಡಿಗಳಲ್ಲೂ ಗುಟ್ಕಾ ಮಾರಾಟವನೇ° ನಿಷೇಧಿಸಿದ್ದೇವೆ. ಹೊರಗಿನ ಊರಿನವರು ಬಂದು ಕೇಳಿದರೂ ಇಲ್ಲ ಎನ್ನುತ್ತೇವೆ. 22 ವರ್ಷದಿಂದ ಈ ನಿಯಮ ಇದೆ ಎಂಬುದನ್ನು ಕೇಳಿ ಆಚ್ಚರಿಯ ಜತೆಗೆ ಖುಷಿ ಪಡುತ್ತಾರೆ. ಊರಿನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಾರೆ.
-ನಾಗೇಶ್‌ ತಿಂಗಳಾಯ ಕೋಡಿಬೆಂಗ್ರೆ, ಅಂಗಡಿ ಮಾಲಕ

ಮಹತ್ವದ ನಿರ್ಧಾರ
ಮಕ್ಕಳು ಕುಡಿಯಲು ಆರಂಭಿಸುವುದೇ ಮೆಹಂದಿ ಕಾರ್ಯಕ್ರಮದಲ್ಲಿ. ವಿದ್ಯಾವಂತ ಯುವಕರು ಮದ್ಯದ ದಾಸರಾಗಿ ಭವಿಷ್ಯ ಹಾಳು ಮಾಡಿಕೊಳ್ಳುವುದು ಕಂಡುಬಂದ ಕಾರಣ ಊರವರೆಲ್ಲ ಸೇರಿ ಮಹತ್ವದ ನಿರ್ಧಾರ ಕೈಗೊಂಡೆವು. ಇದೀಗ ಮೆಹಂದಿಗೆ ಸಸ್ಯಾಹಾರಿ ಊಟವಾದರೂ ಅತ್ಯಧಿಕ ಸಂಖ್ಯೆಯಲ್ಲಿ ಸಂಬಂಧಿಕರು, ಸ್ನೇಹಿತರು ಪಾಲ್ಗೊಳ್ಳುತ್ತಾರೆ.
– ನಾಗರಾಜ್‌ ಬಿ. ಕುಂದರ್‌, ಅಧ್ಯಕ್ಷರು, ದುರ್ಗಾಪರಮೇಶ್ವರೀ ದೇವಸ್ಥಾನ ಕೋಡಿಬೆಂಗ್ರೆ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.