ಉಡುಪಿ ನಗರಸಭೆ ಸಾಮಾನ್ಯ ಸಭೆಗೆ ಬಂದ ವ್ಯಕ್ತಿಗೆ ಕೈ ಸದಸ್ಯರಿಂದ ಥಳಿತ
Team Udayavani, Jun 29, 2017, 3:24 PM IST
ಉಡುಪಿ: ಕಾನೂನು ಬಾಹಿರವಾಗಿ ಏಕಾಏಕಿ ಸಾಮಾನ್ಯ ಸಭೆಗೆ ನುಗ್ಗಿದ ವ್ಯಕ್ತಿಗೆ ಆಡಳಿತ ಪಕ್ಷದ ಸದಸ್ಯರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಉಡುಪಿ ನಗರಸಭೆಯಲ್ಲಿ ಗುರುವಾರ ನಡೆದಿದೆ.
ಘಟನೆ ಏನು?
ಕಡಿಯಾಳಿ ವಾರ್ಡ್ ಸದಸ್ಯೆ ಗೀತಾ ಶೇಟ್ ಅವರು ಕಾಂಗ್ರೆಸ್ ಪಕ್ಷ ತ್ಯಜಿಸಿ, ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಅವರ ಕಾರ್ಯವೈಖರಿಯನ್ನು ಸಮರ್ಥಿಸಲು ಸಭೆಗೆ ಬಂದ ರೋನಿ ಡಿ’ಮೆಲ್ಲೊ ಎಂಬ ವ್ಯಕ್ತಿಯ ಮೇಲೆ ಒಮ್ಮೆಲೆ ಎರಗಿದ ಹತ್ತಾರು ಸದಸ್ಯರು ಕಾಂಗ್ರೆಸ್ ಸದಸ್ಯರು ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಇಲ್ಲಿ ಹೊರಗಿನವರಿಗೆ ಮಾತನಾಡಲು ಅವಕಾಶವಿಲ್ಲ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸದಸ್ಯರು ರೋನಿ ಅವರನ್ನು ಥಳಿಸಿ,ಎಳೆದಾಡಿ ಹೊರ ಹಾಕಲು ಯತ್ನಿಸಿದ್ದಾರೆ.
ಇದೀಗ ಥಳಿತಕ್ಕೊಳಗಾಗಿರುವ ರೋನಿ ಅವರನ್ನು ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಮಾಜಿ ಬಿಜೆಪಿ ಶಾಸಕ ರಘುಪತಿ ಭಟ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಘಟನೆ ನಡೆದ ಬಳಿಕ ನಗರಸಭೆಗೆ ಪೊಲೀಸರು ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ