ಮಕ್ಕಳ ಮೇಲೆ ಜೇನ್ನೊಣಗಳ ಹಿಂಡು ದಾಳಿ
Team Udayavani, Dec 10, 2017, 12:25 PM IST
ಉಡುಪಿ: ಶಿರ್ವದಲ್ಲಿ ಶನಿವಾರ ಮಧ್ಯಾಹ್ನ ಶಾಲಾ ಮಕ್ಕಳ ಮೇಲೆ ಜೇನ್ನೊಣಗಳ ಹಿಂಡು ದಾಳಿ ನಡೆಸಿದ ಘಟನೆ ಸಂಭವಿಸಿದೆ. ಜೇನ್ನೊಣಗಳ ದಾಳಿಯಿಂದ ಕಾಪು ಸಮೀಪದ ಚಂದ್ರನಗರದ ಕ್ರೆಸೆಂಟ್ ಇಂಟರ್ನ್ಯಾಶನಲ್ ಶಾಲೆಯ ಐವರು ವಿದ್ಯಾರ್ಥಿಗಳ ಸಹಿತ ಪೋಷಕರೊಬ್ಬರು ಗಾಯಗೊಂಡು ಅಸ್ವಸ್ಥರಾಗಿದ್ದಾರೆ.
ವಿದ್ಯಾರ್ಥಿಗಳಾದ ನದೀಮ್, ಅಮೀನಾ, ಅಜೀಂ ಮತ್ತು ಆದಿಲ್, ವಿದ್ಯಾರ್ಥಿನಿ ಜುಲ್ಫಾ, ಪೋಷಕಿ ಸಾಯಿರಾ ಅವರಿಗೆ ಉಡುಪಿಯ ಆದರ್ಶ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಕರೆದೊಯ್ಯಲಾಗಿದೆ. ಚಂದ್ರನಗರದ ಅಬ್ದುಲ್ ರೆಹಮಾನ್ ಅವರು ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲು ಸಹಕರಿಸಿದ್ದರು.
ಘಟನೆ ಹಿನ್ನೆಲೆ: ಕ್ರೆಸೆಂಟ್ ಶಾಲೆಯ ವಿದ್ಯಾರ್ಥಿಗಳನ್ನು ಅವರವರ ಮನೆಗೆ ಬಿಟ್ಟು ಬರಲು ಶನಿವಾರ ಮಧ್ಯಾಹ್ನ ಶಾಲೆಯ ಬಸ್ಸಿನಲ್ಲಿ ಕರೆದೊಯ್ಯಲಾಗಿತ್ತು. ಶಿರ್ವದ ನಝರತ್ ನಗರದಲ್ಲಿ ಮಕ್ಕಳ ಬರುವಿಕೆಗೆ ಪೋಷಕರು ಕಾಯುತ್ತಿದ್ದರು. ಮಕ್ಕಳಿದ್ದ ಬಸ್ ನಝರತ್ನಗರಕ್ಕೆ ತಲುಪಿದ್ದು, ಈ ವೇಳೆ ಮಕ್ಕಳು ಬಸ್ಸಿನಿಂದ ಇಳಿಯುತ್ತಿದ್ದಂತೆಯೇ ಜೇನ್ನೊಣಗಳ ಹಿಂಡುದಾಳಿ ನಡೆಸಿದೆ. ಅಪಾಯವನ್ನರಿತ ಬಸ್ಸಿನ ಚಾಲಕ ಮಕ್ಕಳನ್ನು ಇಳಿಸಿದ ಕೂಡಲೇ ಬಸ್ಸನ್ನು ಚಲಾಯಿಸಿದ್ದಾರೆ. ಅವರಿಗೆ ಹಾಗೂ ಬಸ್ಸಿನಲ್ಲಿದ್ದ ಇನ್ನೂ ಹಲವು ಮಕ್ಕಳಿಗೂ ಜೇನ್ನೊಣ ಕಚ್ಚಿದೆ ಎಂದು ತಿಳಿದುಬಂದಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಹೆಚ್ಚಿನ ಅವಘಡ ತಪ್ಪಿದೆ. ಬಸ್ಸಿನಲ್ಲಿ ಸುಮಾರು 25-30 ಮಕ್ಕಳಿದ್ದರು ಎಂದು ಅಲ್ಲಿದ್ದವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ