ಪರೇಶ್ ಪ್ರಕರಣ; ನಾಳೆ, ನಾಡಿದ್ದು ರಾಜ್ಯಾದ್ಯಂತ ವಿಎಚ್ ಪಿ ಪ್ರತಿಭಟನೆ
Team Udayavani, Dec 12, 2017, 2:38 PM IST
ಉಡುಪಿ: ಹೊನ್ನಾವರದಲ್ಲಿ ಪರೇಶ್ ಮೇಸ್ತ ಅನುಮಾನಾಸ್ಪದ ಸಾವು ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆಗಾಗಿ ಆಗ್ರಹಿಸಿ ಹಾಗೂ ಹೊನ್ನಾವರದ ಗುಡ್ ಲಕ್ ಹೋಟೆಲ್ ಓನರ್ ಆಜಾದ್ ಅಣ್ಣಿಗೆರೆಯನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿ ಬುಧವಾರ ಮತ್ತು ಗುರುವಾರ ರಾಜ್ಯಾದ್ಯಂತ ವಿಶ್ವಹಿಂದೂ ಪರಿಷತ್ ಪ್ರತಿಭಟನೆ ನಡೆಸಲಿದೆ ಎಂದು ವಿಎಚ್ ಪಿ ಮುಖಂಡ ವಿ.ಗೋಪಾಲ್ ತಿಳಿಸಿದ್ದಾರೆ.
ಹೊನ್ನಾವರದಲ್ಲಿ ಪರೇಶ್ ಮೇಸ್ತನ ಸಾವಿನ ತನಿಖೆಯನ್ನು ರಾಜ್ಯ ಸರ್ಕಾರ ನಿಷ್ಪಕ್ಷಪಾತವಾಗಿ ಮಾಡುವ ಭರವಸೆ ಇಲ್ಲ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ತನಿಖೆ ನಡೆಸಬೇಕು ಎಂಬ ಒತ್ತಾಯದೊಂದಿಗೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದೇವೆ ಎಂದು ಹೇಳಿದರು.
ವಿಎಚ್ ಪಿ ಹಿಂದೂ ಸಂಘಟನೆಗಳ ಜತೆ ಸೇರಿಕೊಂಡು 2 ದಿನಗಳ ಕಾಲ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿ, ಬಳಿಕ ರಾಜ್ಯಪಾಲರಿಗೆ ಮನವಿಯನ್ನು ನೀಡಲಾಗುವುದು ಎಂದು ಗೋಪಾಲ್ ಮಾಹಿತಿ ನೀಡಿದ್ದಾರೆ. ಅಲ್ಲದೇ ಹೊನ್ನಾವರದ ಗುಡ್ ಲಕ್ ಹೋಟೆಲ್ ಮಾಲೀಕ ಆಜಾದ್ ಅಣ್ಣಿಗೆರೆ ಕೆಲವರಿಗೆ ಕುಮ್ಮಕ್ಕು ನೀಡುತ್ತಿದ್ದು, ಕೂಡಲೇ ಬಂಧಿಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್